<p>ಕೆ.ಆರ್.ನಗರ: ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲಾಗಿದ್ದು, ಹಂತಹಂತವಾಗಿ ಎಲ್ಲ ವಾರ್ಡ್ ಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.</p>.<p>ಮೈಸೂರು ಮತ್ತು ಹಾಸನ ಕಡೆ ತೆರಳುವ ಇಲ್ಲಿನ ಬಸ್ ನಿಲ್ದಾಣದ ಎರಡು ಮುಖ್ಯದ್ವಾರಗಳ ರಸ್ತೆ ಮತ್ತು ಬಸ್ ನಿಲ್ದಾಣದಲ್ಲಿ ಮೈಸೂರಿಗೆ ತೆರಳುವ ಪ್ರಯಾಣಿಕರಿಗಾಗಿ ಹೈಟೆಕ್ ತಂಗುದಾಣ ಸೇರಿ ಒಟ್ಟು ₹1.30 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಪಟ್ಟಣದ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ₹7.30 ಕೋಟಿ ಸೇರಿದಂತೆ ಅಲ್ಪಸಂಖ್ಯಾತ, ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಅನುದಾನ ತರಲಾಗಿದ್ದು, ಪಟ್ಟಣದ ಎಲ್ಲ ವಾರ್ಡ್ಗಳ ಸಂಪರ್ಕ ರಸ್ತೆ, ಕ್ರೀಡಾಂಗಣ, ರೇಡಿಯೋ ಮೈದಾನ, ಗಾಂಧಿ ಉದ್ಯಾನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಹಂತ ಹಂತವಾಗಿ ಪೂರ್ಣಗೊಳಿಸಲಾಗುತ್ತದೆ’ ಎಂದರು.</p>.<p>ಪಟ್ಟಣದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಶಾಶ್ವತ ಕಾಮಗಾರಿ ಕೈಗೆತ್ತಿಕೊಳ್ಳಲು ಅಮೃತ ಯೋಜನೆಯಡಿ ₹30 ಕೋಟಿ ಬಿಡುಗಡೆಯಾಗಿದ್ದು, ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ. ಅದರಂತೆ ಒಳಚರಂಡಿ ಕಾಮಗಾರಿಗೆ ₹20 ಕೋಟಿ ಮಂಜೂರಾಗಿದ್ದು, ಅದೂ ಪ್ರಗತಿಯಲ್ಲಿದೆ’ ಎಂದರು.</p>.<p>‘ಮಳೆ ಬಂದರೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣ ಕೆರೆಯಂತಾಗುತ್ತಿತ್ತು, ₹1 ಕೋಟಿ ಅನುದಾನ ನೀಡಿ ಆವರಣದ ಅಭಿವೃದ್ಧಿ ಮಾಡಲಾಗಿದೆ. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜು ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಮೈದಾನದ ಬಳಿ, ಎಲ್ಐಸಿ ಮುಂಭಾಗ ಗ್ರಂಥಾಲಯ ನಿರ್ಮಿಸಲು ಲೋಕೋಪಯೋಗಿ ಇಲಾಖೆಯಿಂದ ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ನಗರ ಅಧ್ಯಕ್ಷ ಎಂ.ಜೆ. ರಮೇಶ್, ಮುಖಂಡರಾದ ಶಿವುನಾಯಕ್, ಕೋಳಿ ಪ್ರಕಾಶ್, ಕೆ.ಜಿ. ಸುಬ್ರಹ್ಮಣ್ಯ, ಸಯ್ಯದ್ ಸಿದ್ದಿಕ್, ವಿನಯ್ ಮಾತನಾಡಿದರು. ಮುಖಂಡರಾದ ಎಂ.ನಟರಾಜ್, ಶಂಕರ್, ನವೀದ್, ಕೆ.ಎನ್.ಪ್ರಸನ್ನಕುಮಾರ್, ತಿಮ್ಮಶೆಟ್ಟಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-38-1859272667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ನಗರ: ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲಾಗಿದ್ದು, ಹಂತಹಂತವಾಗಿ ಎಲ್ಲ ವಾರ್ಡ್ ಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.</p>.<p>ಮೈಸೂರು ಮತ್ತು ಹಾಸನ ಕಡೆ ತೆರಳುವ ಇಲ್ಲಿನ ಬಸ್ ನಿಲ್ದಾಣದ ಎರಡು ಮುಖ್ಯದ್ವಾರಗಳ ರಸ್ತೆ ಮತ್ತು ಬಸ್ ನಿಲ್ದಾಣದಲ್ಲಿ ಮೈಸೂರಿಗೆ ತೆರಳುವ ಪ್ರಯಾಣಿಕರಿಗಾಗಿ ಹೈಟೆಕ್ ತಂಗುದಾಣ ಸೇರಿ ಒಟ್ಟು ₹1.30 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಪಟ್ಟಣದ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ₹7.30 ಕೋಟಿ ಸೇರಿದಂತೆ ಅಲ್ಪಸಂಖ್ಯಾತ, ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಅನುದಾನ ತರಲಾಗಿದ್ದು, ಪಟ್ಟಣದ ಎಲ್ಲ ವಾರ್ಡ್ಗಳ ಸಂಪರ್ಕ ರಸ್ತೆ, ಕ್ರೀಡಾಂಗಣ, ರೇಡಿಯೋ ಮೈದಾನ, ಗಾಂಧಿ ಉದ್ಯಾನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಹಂತ ಹಂತವಾಗಿ ಪೂರ್ಣಗೊಳಿಸಲಾಗುತ್ತದೆ’ ಎಂದರು.</p>.<p>ಪಟ್ಟಣದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಶಾಶ್ವತ ಕಾಮಗಾರಿ ಕೈಗೆತ್ತಿಕೊಳ್ಳಲು ಅಮೃತ ಯೋಜನೆಯಡಿ ₹30 ಕೋಟಿ ಬಿಡುಗಡೆಯಾಗಿದ್ದು, ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ. ಅದರಂತೆ ಒಳಚರಂಡಿ ಕಾಮಗಾರಿಗೆ ₹20 ಕೋಟಿ ಮಂಜೂರಾಗಿದ್ದು, ಅದೂ ಪ್ರಗತಿಯಲ್ಲಿದೆ’ ಎಂದರು.</p>.<p>‘ಮಳೆ ಬಂದರೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣ ಕೆರೆಯಂತಾಗುತ್ತಿತ್ತು, ₹1 ಕೋಟಿ ಅನುದಾನ ನೀಡಿ ಆವರಣದ ಅಭಿವೃದ್ಧಿ ಮಾಡಲಾಗಿದೆ. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜು ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಮೈದಾನದ ಬಳಿ, ಎಲ್ಐಸಿ ಮುಂಭಾಗ ಗ್ರಂಥಾಲಯ ನಿರ್ಮಿಸಲು ಲೋಕೋಪಯೋಗಿ ಇಲಾಖೆಯಿಂದ ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ನಗರ ಅಧ್ಯಕ್ಷ ಎಂ.ಜೆ. ರಮೇಶ್, ಮುಖಂಡರಾದ ಶಿವುನಾಯಕ್, ಕೋಳಿ ಪ್ರಕಾಶ್, ಕೆ.ಜಿ. ಸುಬ್ರಹ್ಮಣ್ಯ, ಸಯ್ಯದ್ ಸಿದ್ದಿಕ್, ವಿನಯ್ ಮಾತನಾಡಿದರು. ಮುಖಂಡರಾದ ಎಂ.ನಟರಾಜ್, ಶಂಕರ್, ನವೀದ್, ಕೆ.ಎನ್.ಪ್ರಸನ್ನಕುಮಾರ್, ತಿಮ್ಮಶೆಟ್ಟಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-38-1859272667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>