<p>ಕೆ.ಆರ್.ನಗರ: ‘₹60 ಕೋಟಿ ವೆಚ್ಚದಲ್ಲಿ ಏತ ನೀರಾವರಿ ಯೋಜನೆ ಮೂಲಕ ತಾಲ್ಲೂಕಿನ ಸಿದ್ದಾಪುರ, ಕೆಸ್ತೂರು ಕೊಪ್ಪಲು, ಬ್ಯಾಡರಹಳ್ಳಿ, ಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮವಹಿಸಲಾಗಿದೆ’ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.</p>.<p>ತಾಲ್ಲೂಕಿನ ಡಿ.ಕೆ.ಕೊಪ್ಪಲು ಗೇಟ್ ಬಳಿ ₹4.96 ಕೋಟಿ ಮೊತ್ತದ ರಾಮಸಮುದ್ರ ನಾಲೆಯ ಹನುಮಾನ್ ಕಾಲುವೆ ಹಾಗೂ 4ನೇ ಬ್ರಾಂಚ್ ಅಭಿವೃದ್ಧಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಈ ಭಾಗದ ರೈತರ ಬಹುದಿನಗಳ ಬೇಡಿಕೆ ಮನಗಂಡು ಕಾಮಗಾರಿಗೆ ಚಾಲನೆ ನೀಡಲಾಗಿದೆ. ರೈತರ ಅನುಕೂಲಕ್ಕಾಗಿ ನಾಲೆ ಏರಿಗಳ ರಸ್ತೆ ಅಭಿವೃದ್ಧಿ, ಮೂರು ಸೇತುವೆಗಳ ನಿರ್ಮಾಣ ಸೇರಿದಂತೆ ಸರಾಗವಾಗಿ ನೀರು ಹರಿಸಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.</p>.<p>ಡಿ.ಕೆ.ಕೊಪ್ಪಲು ಸಿದ್ದಲಿಂಗೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ₹10 ಲಕ್ಷ ಹಾಗೂ ಪರಿಶಿಷ್ಟ ಜಾತಿ ಕಾಲೊನಿಯಲ್ಲಿನ ಸಿದ್ದಪ್ಪಾಜಿ ದೇವಸ್ಥಾನದ ಅಭಿವೃದ್ಧಿಗೆ ₹5 ಲಕ್ಷ ಅನುದಾನ ನೀಡಲಾಗಿದೆ ಎಂದರು.</p>.<p>ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತುರ್ತಾಗಿ ಬೋರ್ವೆಲ್ ಕೊರೆಸಲು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಕಾಂಗ್ರೆಸ್ ವಕ್ತಾರ ಸಯ್ಯದ್ ಜಾಬೀರ್, ವಕೀಲ ಕೆ.ಸಿ.ಹರೀಶ್, ಲೋಕೇಶ್ ಭರಣಿ, ಹಾಡ್ಯ ಮಹದೇವಸ್ವಾಮಿ, ಚಂದ್ರೇಗೌಡ, ರಂಗೇಶ್, ಸಿ.ಡಿ.ರಾಜಾಚಾರ್, ಕೆ.ಎಸ್.ಹಿರಣ್ಣಯ್ಯ, ಕೆ.ರಾಮಚಂದ್ರ, ವೆಂಕಟರಾಮು, ಕೆ.ವಿ.ಪುಟ್ಟಸ್ವಾಮಿಗೌಡ, ಆನಂದ್, ನಿಂಗೇಗೌಡ, ಪ್ರಭಾಕರ್, ಪಿಡಿಒ ಗಿರೀಶ್, ಎಂಜಿನಿಯರ್ ಸತೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-45242651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ನಗರ: ‘₹60 ಕೋಟಿ ವೆಚ್ಚದಲ್ಲಿ ಏತ ನೀರಾವರಿ ಯೋಜನೆ ಮೂಲಕ ತಾಲ್ಲೂಕಿನ ಸಿದ್ದಾಪುರ, ಕೆಸ್ತೂರು ಕೊಪ್ಪಲು, ಬ್ಯಾಡರಹಳ್ಳಿ, ಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮವಹಿಸಲಾಗಿದೆ’ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.</p>.<p>ತಾಲ್ಲೂಕಿನ ಡಿ.ಕೆ.ಕೊಪ್ಪಲು ಗೇಟ್ ಬಳಿ ₹4.96 ಕೋಟಿ ಮೊತ್ತದ ರಾಮಸಮುದ್ರ ನಾಲೆಯ ಹನುಮಾನ್ ಕಾಲುವೆ ಹಾಗೂ 4ನೇ ಬ್ರಾಂಚ್ ಅಭಿವೃದ್ಧಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಈ ಭಾಗದ ರೈತರ ಬಹುದಿನಗಳ ಬೇಡಿಕೆ ಮನಗಂಡು ಕಾಮಗಾರಿಗೆ ಚಾಲನೆ ನೀಡಲಾಗಿದೆ. ರೈತರ ಅನುಕೂಲಕ್ಕಾಗಿ ನಾಲೆ ಏರಿಗಳ ರಸ್ತೆ ಅಭಿವೃದ್ಧಿ, ಮೂರು ಸೇತುವೆಗಳ ನಿರ್ಮಾಣ ಸೇರಿದಂತೆ ಸರಾಗವಾಗಿ ನೀರು ಹರಿಸಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.</p>.<p>ಡಿ.ಕೆ.ಕೊಪ್ಪಲು ಸಿದ್ದಲಿಂಗೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ₹10 ಲಕ್ಷ ಹಾಗೂ ಪರಿಶಿಷ್ಟ ಜಾತಿ ಕಾಲೊನಿಯಲ್ಲಿನ ಸಿದ್ದಪ್ಪಾಜಿ ದೇವಸ್ಥಾನದ ಅಭಿವೃದ್ಧಿಗೆ ₹5 ಲಕ್ಷ ಅನುದಾನ ನೀಡಲಾಗಿದೆ ಎಂದರು.</p>.<p>ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತುರ್ತಾಗಿ ಬೋರ್ವೆಲ್ ಕೊರೆಸಲು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಕಾಂಗ್ರೆಸ್ ವಕ್ತಾರ ಸಯ್ಯದ್ ಜಾಬೀರ್, ವಕೀಲ ಕೆ.ಸಿ.ಹರೀಶ್, ಲೋಕೇಶ್ ಭರಣಿ, ಹಾಡ್ಯ ಮಹದೇವಸ್ವಾಮಿ, ಚಂದ್ರೇಗೌಡ, ರಂಗೇಶ್, ಸಿ.ಡಿ.ರಾಜಾಚಾರ್, ಕೆ.ಎಸ್.ಹಿರಣ್ಣಯ್ಯ, ಕೆ.ರಾಮಚಂದ್ರ, ವೆಂಕಟರಾಮು, ಕೆ.ವಿ.ಪುಟ್ಟಸ್ವಾಮಿಗೌಡ, ಆನಂದ್, ನಿಂಗೇಗೌಡ, ಪ್ರಭಾಕರ್, ಪಿಡಿಒ ಗಿರೀಶ್, ಎಂಜಿನಿಯರ್ ಸತೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-45242651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>