<p>ಕೆ.ಆರ್.ನಗರ: ಇಲ್ಲಿನ ಬಸವೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಉಪ್ಪಾರ ಸಮುದಾಯ ಭವನ ಪೂರ್ಣಗೊಳಿಸಲು ಅಗತ್ಯ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಭಗೀರಥ ಜಯಂತ್ಯುತ್ಸವದಲ್ಲಿ ಮಾತನಾಡಿದರು.</p>.<p>ಉಪ್ಪಾರರ ಸಂಘಕ್ಕೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ಕೇಂದ್ರದಲ್ಲಿ ಸರ್ಕಾರಿ ನಿವೇಶನ ಗುರುತಿಸಿ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.</p>.<p>ಸಮುದಾಯದ ಮುಖಂಡರಿಗೆ ಪುರಸಭೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ಭರವಸೆ ನೀಡಿದರು.</p>.<p>ಹಶೀಲ್ದಾರ್ ಜಿ.ಸುರೇಂದ್ರಮೂರ್ತಿ,ಶಿಕ್ಷಕ ಮಂಜುನಾಥ್, ಉಪ್ಪಾರರ ಸಂಘದ ಅಧ್ಯಕ್ಷ ಕಾಟ್ನಾಳು ಮಹದೇವ್, ನಗರ ಘಟಕ ಅಧ್ಯಕ್ಷ ಟಿ.ಕೃಷ್ಣ, ಮುಖಂಡರಾದ ಎಂ.ಎಸ್. ಮಹದೇವ್, ಸಯ್ಯದ್ ಜಾಬೀರ್, ಜೆ.ಎಂ.ಕುಮಾರ್, ಕೇಶವಮೂರ್ತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-1283512865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ನಗರ: ಇಲ್ಲಿನ ಬಸವೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಉಪ್ಪಾರ ಸಮುದಾಯ ಭವನ ಪೂರ್ಣಗೊಳಿಸಲು ಅಗತ್ಯ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಭಗೀರಥ ಜಯಂತ್ಯುತ್ಸವದಲ್ಲಿ ಮಾತನಾಡಿದರು.</p>.<p>ಉಪ್ಪಾರರ ಸಂಘಕ್ಕೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ಕೇಂದ್ರದಲ್ಲಿ ಸರ್ಕಾರಿ ನಿವೇಶನ ಗುರುತಿಸಿ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.</p>.<p>ಸಮುದಾಯದ ಮುಖಂಡರಿಗೆ ಪುರಸಭೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ಭರವಸೆ ನೀಡಿದರು.</p>.<p>ಹಶೀಲ್ದಾರ್ ಜಿ.ಸುರೇಂದ್ರಮೂರ್ತಿ,ಶಿಕ್ಷಕ ಮಂಜುನಾಥ್, ಉಪ್ಪಾರರ ಸಂಘದ ಅಧ್ಯಕ್ಷ ಕಾಟ್ನಾಳು ಮಹದೇವ್, ನಗರ ಘಟಕ ಅಧ್ಯಕ್ಷ ಟಿ.ಕೃಷ್ಣ, ಮುಖಂಡರಾದ ಎಂ.ಎಸ್. ಮಹದೇವ್, ಸಯ್ಯದ್ ಜಾಬೀರ್, ಜೆ.ಎಂ.ಕುಮಾರ್, ಕೇಶವಮೂರ್ತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-1283512865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>