<p>ಕೆ.ಆರ್.ನಗರ: ದಲಿತರ ಕೇರಿಯಲ್ಲಿ ಮಹದೇಶ್ವರ ದೇವರ ಉತ್ಸವಮೂರ್ತಿಯನ್ನು ಮೆರವಣಿಗೆ ಮಾಡದೆ, ಪೂಜೆ ಸಲ್ಲಿಸಲೂ ಅವಕಾಶ ನೀಡದ್ದರಿಂದ ತಾಲ್ಲೂಕಿನ ಮಾರ್ಚಹಳ್ಳಿಯಲ್ಲಿ ವಾತಾವರಣ ಉದ್ವಿಗ್ನಗೊಂಡಿತ್ತು. ಶುಕ್ರವಾರ ತಹಶೀಲ್ದಾರ್ ಅವರ ಮಧ್ಯಪ್ರವೇಶದಿಂದ, ದಲಿತರ ಬೀದಿಯಲ್ಲೂ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.</p>.<p>‘ಉತ್ಸವಮೂರ್ತಿಯನ್ನು ನಮ್ಮ ಬೀದಿಯಲ್ಲಿ ಮೆರವಣಿಗೆ ಮಾಡದೆ ತಾರತಮ್ಯ ಎಸಗಲಾಗುತ್ತಿದೆ’ ಎಂದು ಆರೋಪಿಸಿ ದಲಿತ ಮುಖಂಡರು ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನದ ಎದುರು ಪ್ರತಿಭಟಿಸಿದ್ದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಜಿ.ಸುರೇಂದ್ರ ಮೂರ್ತಿ ಹಾಗೂ ಡಿವೈಎಸ್ಪಿ ಟಿ.ಬಿ.ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಂಕರಮೂರ್ತಿ ಗ್ರಾಮದ ಎಲ್ಲ ಸಮುದಾಯಗಳ ಮುಖಂಡರ ಮನವೊಲಿಸಿದರು.</p>.<p>ಹುಣಸೂರು ತಾಲ್ಲೂಕಿನ ಕೊಮ್ಮೇಗೌಡನ ಕೊಪ್ಪಲು ಗ್ರಾಮಕ್ಕೆ ಹಿಂದಿರುಗಿದ್ದ ಉತ್ಸವಮೂರ್ತಿಯನ್ನು ವಾಪಸ್ ಗ್ರಾಮಕ್ಕೆ ಕರೆತಂದು ದಲಿತರ ಕೇರಿಯಲ್ಲಿ ಮೆರವಣಿಗೆ ನಡೆಸಿ, ಮನೆಗಳಲ್ಲಿ ಪೂಜೆ ಸಲ್ಲಿಸಲು ಅನುವು ಮಾಡಿಕೊಡಲಾಯಿತು. ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಯಿತು. ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<p>‘ಗ್ರಾಮದಲ್ಲಿ ಕಳೆದ ವಾರ ಮಹದೇಶ್ವರ ಜಾತ್ರೆ ನಡೆದಿತ್ತು. ಆಗ ಉತ್ಸವಮೂರ್ತಿ ಮೆರವಣಿಗೆಯು ಎಲ್ಲ ಬೀದಿಗಳಲ್ಲೂ ಸಂಚರಿಸಿತ್ತು. ಆದರೆ, ದಲಿತರ ಬೀದಿಗೆ ಬಂದಿರಲಿಲ್ಲ. ದೇವಸ್ಥಾನದ ಗರ್ಭಗುಡಿ ಪ್ರವೇಶಿಸುವಂತಿರಲಿಲ್ಲ. ಅದನ್ನು ಪ್ರಶ್ನಿಸಿದಾಗ ಕೆಲವರು ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ದಲಿತ ಯುವಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-38-1709666806</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ನಗರ: ದಲಿತರ ಕೇರಿಯಲ್ಲಿ ಮಹದೇಶ್ವರ ದೇವರ ಉತ್ಸವಮೂರ್ತಿಯನ್ನು ಮೆರವಣಿಗೆ ಮಾಡದೆ, ಪೂಜೆ ಸಲ್ಲಿಸಲೂ ಅವಕಾಶ ನೀಡದ್ದರಿಂದ ತಾಲ್ಲೂಕಿನ ಮಾರ್ಚಹಳ್ಳಿಯಲ್ಲಿ ವಾತಾವರಣ ಉದ್ವಿಗ್ನಗೊಂಡಿತ್ತು. ಶುಕ್ರವಾರ ತಹಶೀಲ್ದಾರ್ ಅವರ ಮಧ್ಯಪ್ರವೇಶದಿಂದ, ದಲಿತರ ಬೀದಿಯಲ್ಲೂ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.</p>.<p>‘ಉತ್ಸವಮೂರ್ತಿಯನ್ನು ನಮ್ಮ ಬೀದಿಯಲ್ಲಿ ಮೆರವಣಿಗೆ ಮಾಡದೆ ತಾರತಮ್ಯ ಎಸಗಲಾಗುತ್ತಿದೆ’ ಎಂದು ಆರೋಪಿಸಿ ದಲಿತ ಮುಖಂಡರು ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನದ ಎದುರು ಪ್ರತಿಭಟಿಸಿದ್ದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಜಿ.ಸುರೇಂದ್ರ ಮೂರ್ತಿ ಹಾಗೂ ಡಿವೈಎಸ್ಪಿ ಟಿ.ಬಿ.ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಂಕರಮೂರ್ತಿ ಗ್ರಾಮದ ಎಲ್ಲ ಸಮುದಾಯಗಳ ಮುಖಂಡರ ಮನವೊಲಿಸಿದರು.</p>.<p>ಹುಣಸೂರು ತಾಲ್ಲೂಕಿನ ಕೊಮ್ಮೇಗೌಡನ ಕೊಪ್ಪಲು ಗ್ರಾಮಕ್ಕೆ ಹಿಂದಿರುಗಿದ್ದ ಉತ್ಸವಮೂರ್ತಿಯನ್ನು ವಾಪಸ್ ಗ್ರಾಮಕ್ಕೆ ಕರೆತಂದು ದಲಿತರ ಕೇರಿಯಲ್ಲಿ ಮೆರವಣಿಗೆ ನಡೆಸಿ, ಮನೆಗಳಲ್ಲಿ ಪೂಜೆ ಸಲ್ಲಿಸಲು ಅನುವು ಮಾಡಿಕೊಡಲಾಯಿತು. ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಯಿತು. ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<p>‘ಗ್ರಾಮದಲ್ಲಿ ಕಳೆದ ವಾರ ಮಹದೇಶ್ವರ ಜಾತ್ರೆ ನಡೆದಿತ್ತು. ಆಗ ಉತ್ಸವಮೂರ್ತಿ ಮೆರವಣಿಗೆಯು ಎಲ್ಲ ಬೀದಿಗಳಲ್ಲೂ ಸಂಚರಿಸಿತ್ತು. ಆದರೆ, ದಲಿತರ ಬೀದಿಗೆ ಬಂದಿರಲಿಲ್ಲ. ದೇವಸ್ಥಾನದ ಗರ್ಭಗುಡಿ ಪ್ರವೇಶಿಸುವಂತಿರಲಿಲ್ಲ. ಅದನ್ನು ಪ್ರಶ್ನಿಸಿದಾಗ ಕೆಲವರು ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ದಲಿತ ಯುವಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-38-1709666806</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>