<p><strong>ಮೈಸೂರು</strong>: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) 17ನೇ ಘಟಿಕೋತ್ಸವ ಸೋಮವಾರ ನಡೆಯಿತು.</p>.<p>ಮುಕ್ತಗಂಗೋತ್ರಿ ಆವರಣದಘಟಿಕೋತ್ಸವ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದವಿ ಪ್ರದಾನ ಮಾಡಿದರು.</p>.<p>2018–19 ಮತ್ತು 2019–20ರ ಬ್ಯಾಚ್ನ 8,338 ಅಭ್ಯರ್ಥಿಗಳಿಗೆ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಉತ್ತಮ ಸಾಧನೆ ತೋರಿದ ಅಭ್ಯರ್ಥಿಗಳಿಗೆ 48 ಚಿನ್ನದ ಪದಕ, 38 ನಗದು ಬಹುಮಾನಗಳನ್ನು ನೀಡಲಾಯಿತು. 31 ಅಭ್ಯರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.</p>.<p><strong>ಮೂವರಿಗೆ ಗೌರವ ಡಾಕ್ಟರೇಟ್: </strong>ಬೆಂಗಳೂರಿನ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಆರ್.ವಿ.ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಿಸಿಎಸ್ ಉಪಾಧ್ಯಕ್ಷ ಇ.ಎಸ್.ಚಕ್ರವರ್ತಿ ಹಾಗೂ ವಿಆರ್ಎಲ್ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ (ತಾಂತ್ರಿಕ) ಎ.ಬಿ ಬಸವರಾಜು ಘಟಿಕೋತ್ಸವ ಭಾಷಣ ಮಾಡಿದರು.</p>.<p>ಕೆಎಸ್ಒಯುಕುಲಪತಿ ಡಾ.ಎಸ್.ವಿದ್ಯಾಶಂಕರ್, ಕುಲಸಚಿವ ಡಾ.ಆರ್.ರಾಜಣ್ಣ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) 17ನೇ ಘಟಿಕೋತ್ಸವ ಸೋಮವಾರ ನಡೆಯಿತು.</p>.<p>ಮುಕ್ತಗಂಗೋತ್ರಿ ಆವರಣದಘಟಿಕೋತ್ಸವ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದವಿ ಪ್ರದಾನ ಮಾಡಿದರು.</p>.<p>2018–19 ಮತ್ತು 2019–20ರ ಬ್ಯಾಚ್ನ 8,338 ಅಭ್ಯರ್ಥಿಗಳಿಗೆ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಉತ್ತಮ ಸಾಧನೆ ತೋರಿದ ಅಭ್ಯರ್ಥಿಗಳಿಗೆ 48 ಚಿನ್ನದ ಪದಕ, 38 ನಗದು ಬಹುಮಾನಗಳನ್ನು ನೀಡಲಾಯಿತು. 31 ಅಭ್ಯರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.</p>.<p><strong>ಮೂವರಿಗೆ ಗೌರವ ಡಾಕ್ಟರೇಟ್: </strong>ಬೆಂಗಳೂರಿನ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಆರ್.ವಿ.ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಿಸಿಎಸ್ ಉಪಾಧ್ಯಕ್ಷ ಇ.ಎಸ್.ಚಕ್ರವರ್ತಿ ಹಾಗೂ ವಿಆರ್ಎಲ್ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ (ತಾಂತ್ರಿಕ) ಎ.ಬಿ ಬಸವರಾಜು ಘಟಿಕೋತ್ಸವ ಭಾಷಣ ಮಾಡಿದರು.</p>.<p>ಕೆಎಸ್ಒಯುಕುಲಪತಿ ಡಾ.ಎಸ್.ವಿದ್ಯಾಶಂಕರ್, ಕುಲಸಚಿವ ಡಾ.ಆರ್.ರಾಜಣ್ಣ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>