<p>ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2009–10 ಹಾಗೂ 2015–16ನೇ ಸಾಲಿನಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಸದ್ಯದಲ್ಲಿಯೇ ಅಧಿಕಾರಿಗಳ ತಂಡವು ತನಿಖೆಗೆಂದು ಮೈಸೂರಿಗೆ ಬರುವ ನಿರೀಕ್ಷೆ ಇದೆ.</p>.<p>ಅಧ್ಯಯನ ಕೇಂದ್ರಗಳ ಸ್ಥಾಪನೆ, ಪರೀಕ್ಷೆ ಸೇರಿದಂತೆ ವಿವಿಧ ವಿಷಯಗಳಲ್ಲಿ ₹250 ಕೋಟಿಯಷ್ಟು ಹಣ ದುರ್ಬಳಕೆ ಆಗಿರುವ ಆರೋಪಗಳ 2022ರ ಫೆಬ್ರುವರಿಯಲ್ಲಿ ವಿ.ವಿ. ಕುಲಸಚಿವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ನಂತರ ನಡೆದ ಮುಕ್ತ ವಿ.ವಿ.ಯ ಆಡಳಿತ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆಗೆ ನಿರ್ಣಯಿಸಿದ್ದು, ರಾಜ್ಯಪಾಲರಿಗೆ ವರದಿ ನೀಡಿತ್ತು. ಆ ವರದಿಯನ್ನು ಆಧರಿಸಿ ರಾಜ್ಯಪಾಲರು ಸರ್ಕಾರಕ್ಕೆ ತನಿಖೆಗೆ ಶಿಫಾರಸು ಮಾಡಿದ್ದರು. ಅದರಂತೆ ಸರ್ಕಾರವು 2022ರ ಏಪ್ರಿಲ್ನಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು.</p>.<p>ಈ ವರ್ಷ ಮಾರ್ಚ್ನಲ್ಲಿ ಸಿಬಿಐ ತಂಡವು ಪ್ರಕರಣದ ತನಿಖೆ ವಹಿಸಿಕೊಂಡಿದೆ ಎಂದು ಹೇಳಲಾಗಿದೆ. ಸಂಬಂಧಿಸಿದ ಅಧಿಕಾರಿಗಳು, ಲೆಕ್ಕಪರಿಶೋಧಕರು, ಬ್ಯಾಂಕುಗಳಿಗೂ ನೋಟಿಸ್ ನೀಡಿದ್ದು, ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಕೆಎಸ್ಒಯು ಕುಲಸಚಿವ ಕೆಎನ್ಎನ್ ಮೂರ್ತಿ ‘ ಸಿಬಿಐ ತನಿಖೆ ಸಂಬಂಧ ಈವರೆಗೆ ಯಾವುದೇ ಮಾಹಿತಿ, ನೋಟಿಸ್ ಬಂದಿಲ್ಲ. ಬಂದಲ್ಲಿ ಅಗತ್ಯ ಮಾಹಿತಿ ಒದಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2009–10 ಹಾಗೂ 2015–16ನೇ ಸಾಲಿನಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಸದ್ಯದಲ್ಲಿಯೇ ಅಧಿಕಾರಿಗಳ ತಂಡವು ತನಿಖೆಗೆಂದು ಮೈಸೂರಿಗೆ ಬರುವ ನಿರೀಕ್ಷೆ ಇದೆ.</p>.<p>ಅಧ್ಯಯನ ಕೇಂದ್ರಗಳ ಸ್ಥಾಪನೆ, ಪರೀಕ್ಷೆ ಸೇರಿದಂತೆ ವಿವಿಧ ವಿಷಯಗಳಲ್ಲಿ ₹250 ಕೋಟಿಯಷ್ಟು ಹಣ ದುರ್ಬಳಕೆ ಆಗಿರುವ ಆರೋಪಗಳ 2022ರ ಫೆಬ್ರುವರಿಯಲ್ಲಿ ವಿ.ವಿ. ಕುಲಸಚಿವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ನಂತರ ನಡೆದ ಮುಕ್ತ ವಿ.ವಿ.ಯ ಆಡಳಿತ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆಗೆ ನಿರ್ಣಯಿಸಿದ್ದು, ರಾಜ್ಯಪಾಲರಿಗೆ ವರದಿ ನೀಡಿತ್ತು. ಆ ವರದಿಯನ್ನು ಆಧರಿಸಿ ರಾಜ್ಯಪಾಲರು ಸರ್ಕಾರಕ್ಕೆ ತನಿಖೆಗೆ ಶಿಫಾರಸು ಮಾಡಿದ್ದರು. ಅದರಂತೆ ಸರ್ಕಾರವು 2022ರ ಏಪ್ರಿಲ್ನಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು.</p>.<p>ಈ ವರ್ಷ ಮಾರ್ಚ್ನಲ್ಲಿ ಸಿಬಿಐ ತಂಡವು ಪ್ರಕರಣದ ತನಿಖೆ ವಹಿಸಿಕೊಂಡಿದೆ ಎಂದು ಹೇಳಲಾಗಿದೆ. ಸಂಬಂಧಿಸಿದ ಅಧಿಕಾರಿಗಳು, ಲೆಕ್ಕಪರಿಶೋಧಕರು, ಬ್ಯಾಂಕುಗಳಿಗೂ ನೋಟಿಸ್ ನೀಡಿದ್ದು, ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಕೆಎಸ್ಒಯು ಕುಲಸಚಿವ ಕೆಎನ್ಎನ್ ಮೂರ್ತಿ ‘ ಸಿಬಿಐ ತನಿಖೆ ಸಂಬಂಧ ಈವರೆಗೆ ಯಾವುದೇ ಮಾಹಿತಿ, ನೋಟಿಸ್ ಬಂದಿಲ್ಲ. ಬಂದಲ್ಲಿ ಅಗತ್ಯ ಮಾಹಿತಿ ಒದಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>