<p><strong>ಮೈಸೂರು: ‘</strong>ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಹೇಳಿದರು. </p>.<p>ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ರಾಜ್ಯ ಸರ್ಕಾರದ ರದ್ದು ಆದೇಶ ಧಿಕ್ಕರಿಸಿ ನಡೆಯುತ್ತಿರುವ ‘ಏಕಾತ್ಮ ಮಾನವ ದರ್ಶನ ಸಮ್ಮೇಳನ’ದಲ್ಲಿ ಗುರುವಾರ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ರಾಜ್ಯಪಾಲರು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದಾರೆ. ಅವರ ಗಮನಕ್ಕೆ ತರುವುದೂ ಮುಖ್ಯ. ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿದ್ದರಿಂದ ದೈನಂದಿನ ಆಡಳಿತ ನಡೆಸುವುದು ಕಷ್ಟವಾಗುತ್ತಿದೆ. ತಿಂಗಳಾಂತ್ಯವಾಗಿದ್ದು ಸಿಬ್ಬಂದಿಗೆ ಸಂಬಳ ನೀಡಬೇಕು ಮತ್ತು ಇತರ ಖರ್ಚುಗಳೂ ಇವೆ’ ಎಂದರು. </p>.<p>ಎರಡನೇ ದಿನವೂ ಸಮ್ಮೇಳನ ಸುಸೂತ್ರ: ರಾಜ್ಯ ಸರ್ಕಾರದ ರದ್ದು ಆದೇಶದ ನಡುವೆಯೂ ಎರಡನೇ ದಿನವೂ ಸಮ್ಮೇಳನವು ನಿರಾತಂಕವಾಗಿ ನಡೆಯಿತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪಾಲ್ಗೊಂಡಿದ್ದರು.</p>.<p>ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಭೆ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿ– 2020 ಅನ್ನು ಸಮರ್ಥವಾಗಿ ಅನುಷ್ಠಾನಗೊಳಿಸಬೇಕೆಂಬ ಸೂಚನೆಯನ್ನು ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಹೇಳಿದರು. </p>.<p>ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ರಾಜ್ಯ ಸರ್ಕಾರದ ರದ್ದು ಆದೇಶ ಧಿಕ್ಕರಿಸಿ ನಡೆಯುತ್ತಿರುವ ‘ಏಕಾತ್ಮ ಮಾನವ ದರ್ಶನ ಸಮ್ಮೇಳನ’ದಲ್ಲಿ ಗುರುವಾರ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ರಾಜ್ಯಪಾಲರು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದಾರೆ. ಅವರ ಗಮನಕ್ಕೆ ತರುವುದೂ ಮುಖ್ಯ. ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿದ್ದರಿಂದ ದೈನಂದಿನ ಆಡಳಿತ ನಡೆಸುವುದು ಕಷ್ಟವಾಗುತ್ತಿದೆ. ತಿಂಗಳಾಂತ್ಯವಾಗಿದ್ದು ಸಿಬ್ಬಂದಿಗೆ ಸಂಬಳ ನೀಡಬೇಕು ಮತ್ತು ಇತರ ಖರ್ಚುಗಳೂ ಇವೆ’ ಎಂದರು. </p>.<p>ಎರಡನೇ ದಿನವೂ ಸಮ್ಮೇಳನ ಸುಸೂತ್ರ: ರಾಜ್ಯ ಸರ್ಕಾರದ ರದ್ದು ಆದೇಶದ ನಡುವೆಯೂ ಎರಡನೇ ದಿನವೂ ಸಮ್ಮೇಳನವು ನಿರಾತಂಕವಾಗಿ ನಡೆಯಿತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪಾಲ್ಗೊಂಡಿದ್ದರು.</p>.<p>ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಭೆ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿ– 2020 ಅನ್ನು ಸಮರ್ಥವಾಗಿ ಅನುಷ್ಠಾನಗೊಳಿಸಬೇಕೆಂಬ ಸೂಚನೆಯನ್ನು ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>