<p><strong>ಮೈಸೂರು:</strong> ಕುಕ್ಕರಹಳ್ಳಿ ಕೆರೆ ಹಾಗೂ ಸುತ್ತಲಿನ ಪರಿಸರವನ್ನು ಸಂರಕ್ಷಿಸಬೇಕು. ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ಸದಸ್ಯರು ಕುಕ್ಕರಹಳ್ಳಿ ಕೆರೆ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಕುಕ್ಕರಹಳ್ಳಿ ಕೆರೆಯು ಜೀವ ವೈವಿಧ್ಯದ ತಾಣವಾಗಿದೆ. ನೂರಾರು ಮಂದಿ ಇಲ್ಲಿ ನಿತ್ಯ ವಾಯುವಿಹಾರಕ್ಕೆ ಬರುತ್ತಾರೆ. ಹೀಗಿರುವಾಗ ಇಲ್ಲಿ ಉದ್ಯಾನಕ್ಕೆಂದು ಇದ್ದ ಸುಮಾರು 2 ಎಕರೆ 20 ಗುಂಟೆಯಷ್ಟು ಪ್ರದೇಶವನ್ನು ಮುಡಾ ವಾಣಿಜ್ಯ ವಲಯಕ್ಕೆ ಬದಲಿಸಿಕೊಟ್ಟಿದೆ. ಖಾಸಗಿ ವ್ಯಕ್ತಿಗಳು ಬೇಲಿ ಹಾಕಿಕೊಂಡಿದ್ದು, ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಯೋಜನೆ ನಡೆದಿದೆ’ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾಗ ಮಾನಸಗಂಗೋತ್ರಿ ಆವರಣದೊಂದಿಗೆ ಈ ಕೆರೆಯನ್ನೂ ಅಭಿವೃದ್ಧಿ ಪಡಿಸಿದ್ದು, ಅವರ ಹೆಸರಿನ ಒಂದು ಉದ್ಯಾನ ಇದೆ. ಈ ಪ್ರದೇಶ ಮೈಸೂರು ವಿಶ್ವವಿದ್ಯಾಲಯದ ಆವರಣಕ್ಕೆ ಹೊಂದಿಕೊಂಡಿದೆ. ಇಲ್ಲಿನ ಕೆರೆ ದೇಶ-ವಿದೇಶಗಳ ಅಪರೂಪದ ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ. ಇಂತಹ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕೆರೆ ಪ್ರದೇಶದಲ್ಲಿ ಯಾವುದೇ ರೀತಿಯ ವಾಣಿಜ್ಯ ಮತ್ತು ಬಹುಮಹಡಿ ಕಟ್ಟಡ ನಿರ್ಮಿಸಬಾರದು. ಇಲ್ಲಿನ ಪರಿಸರ ರಕ್ಷಿಸಬೇಕು. ಇಲ್ಲವಾದರೆ ಪರಿಸರವಾದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಹೋರಾಟಗಾರರಾದ ಭಾನು ಮೋಹನ್, ಅರವಿಂದ್ ಶರ್ಮ, ಕೆರೆ ಜಯರಾಮಯ್ಯ, ಸೋಸಲೆ ಸಿದ್ದರಾಜು, ಪಿ.ಎಸ್. ನಟರಾಜು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕುಕ್ಕರಹಳ್ಳಿ ಕೆರೆ ಹಾಗೂ ಸುತ್ತಲಿನ ಪರಿಸರವನ್ನು ಸಂರಕ್ಷಿಸಬೇಕು. ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ಸದಸ್ಯರು ಕುಕ್ಕರಹಳ್ಳಿ ಕೆರೆ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಕುಕ್ಕರಹಳ್ಳಿ ಕೆರೆಯು ಜೀವ ವೈವಿಧ್ಯದ ತಾಣವಾಗಿದೆ. ನೂರಾರು ಮಂದಿ ಇಲ್ಲಿ ನಿತ್ಯ ವಾಯುವಿಹಾರಕ್ಕೆ ಬರುತ್ತಾರೆ. ಹೀಗಿರುವಾಗ ಇಲ್ಲಿ ಉದ್ಯಾನಕ್ಕೆಂದು ಇದ್ದ ಸುಮಾರು 2 ಎಕರೆ 20 ಗುಂಟೆಯಷ್ಟು ಪ್ರದೇಶವನ್ನು ಮುಡಾ ವಾಣಿಜ್ಯ ವಲಯಕ್ಕೆ ಬದಲಿಸಿಕೊಟ್ಟಿದೆ. ಖಾಸಗಿ ವ್ಯಕ್ತಿಗಳು ಬೇಲಿ ಹಾಕಿಕೊಂಡಿದ್ದು, ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಯೋಜನೆ ನಡೆದಿದೆ’ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾಗ ಮಾನಸಗಂಗೋತ್ರಿ ಆವರಣದೊಂದಿಗೆ ಈ ಕೆರೆಯನ್ನೂ ಅಭಿವೃದ್ಧಿ ಪಡಿಸಿದ್ದು, ಅವರ ಹೆಸರಿನ ಒಂದು ಉದ್ಯಾನ ಇದೆ. ಈ ಪ್ರದೇಶ ಮೈಸೂರು ವಿಶ್ವವಿದ್ಯಾಲಯದ ಆವರಣಕ್ಕೆ ಹೊಂದಿಕೊಂಡಿದೆ. ಇಲ್ಲಿನ ಕೆರೆ ದೇಶ-ವಿದೇಶಗಳ ಅಪರೂಪದ ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ. ಇಂತಹ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕೆರೆ ಪ್ರದೇಶದಲ್ಲಿ ಯಾವುದೇ ರೀತಿಯ ವಾಣಿಜ್ಯ ಮತ್ತು ಬಹುಮಹಡಿ ಕಟ್ಟಡ ನಿರ್ಮಿಸಬಾರದು. ಇಲ್ಲಿನ ಪರಿಸರ ರಕ್ಷಿಸಬೇಕು. ಇಲ್ಲವಾದರೆ ಪರಿಸರವಾದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಹೋರಾಟಗಾರರಾದ ಭಾನು ಮೋಹನ್, ಅರವಿಂದ್ ಶರ್ಮ, ಕೆರೆ ಜಯರಾಮಯ್ಯ, ಸೋಸಲೆ ಸಿದ್ದರಾಜು, ಪಿ.ಎಸ್. ನಟರಾಜು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>