<p><strong>ಮೈಸೂರು:</strong> ಕೇವಲ ಜೆಡಿಎಸ್ಗಷ್ಟೆ ಕುಮಾರಸ್ವಾಮಿ ಸಿ.ಎಂ ಅಲ್ಲ. ಅವರು ಗ್ರಾಮ ವಾಸ್ತವ್ಯದ ಮೂಲಕ ಮಾಡುವ ಒಳ್ಳೆಯ ಕೆಲಸಗಳ ಕ್ರೆಡಿಟ್ ಸಮ್ಮಿಶ್ರ ಸರ್ಕಾರಕ್ಕೆ ಸಿಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.</p>.<p>ಅವರು ಇಲ್ಲಿ ಸುತ್ತೂರಿನಲ್ಲಿ ಸೈನ್ಸ್ ಪಾರ್ಕ್ ನಿರ್ಮಾಣ ಕುರಿತ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದರು.</p>.<p>ವಿರೋಧ ಪಕ್ಷದವರು ಎಲ್ಲವನ್ನು ಟೀಕೆ ಮಾಡುತ್ತಾರೆ. ಗ್ರಾಮವಾಸ್ತವ್ಯವನ್ನೂ ಟೀಕೆ ಮಾಡಲಾಗುತ್ತಿದೆ. ಸರ್ಕಾರದ ಆಡಳಿತವನ್ನು ಜನಸಮುದಾಯದ ಬಳಿಗೆ ಕೊಂಡಯ್ಯಬೇಕು ಎಂಬುದು ಗ್ರಾಮವಾಸ್ತವ್ಯದ ಉದ್ದೇಶ ಎಂದು ಅವರು ಹೇಳಿದರು.</p>.<p>ಒಬ್ಬ ಸಿಎಂ ಗ್ರಾಮಕ್ಕೆ ಬರುತ್ತಾರೆ ಎಂದರೇ ಆ ಊರಿನ ರಸ್ತೆ, ಶಾಲೆ, ಮೂಲ ಸೌಕರ್ಯಗಳ ಅಭಿವೃದ್ಧಿ ಆಗುತ್ತದೆ. ಇದರಿಂದ ಆ ಸುತ್ತಲಿನ ಗ್ರಾಮಗಳು ಅಭಿವೃದ್ಧಿ ಆಗುತ್ತವೆ. ಇದನ್ನ ಪ್ರತಿಪಕ್ಷ ಅರ್ಥ ಮಾಡಿಕೊಳ್ಳಬೇಕು. ಎಲ್ಲ ವಿಷಯದಲ್ಲೂ ರಾಜಕೀಯ ಮಾಡಬಾರದು ಎಂದು ಅವರು ಹೇಳಿದರು.</p>.<p>ನಾನು ಕೂಡ ಗ್ರಾಮವಾಸ್ತವ್ಯ ಮಾಡಲಿದ್ದು, ನಂತರ ದಿನಾಂಕ ನಿಗದಿಸಿ ಪ್ರಕಟಿಸುತ್ತೇನೆ ಎಂದು ತಿಳಿಸಿದರು.</p>.<p>ಮಧ್ಯಂತರ ಚುನಾವಣೆ ನಡೆಯುವುದಿಲ್ಲ ಎಂದು ನನಗನಿಸುತ್ತದೆ. ಆ ಮೈತ್ರಿ ಪಕ್ಷದ ನಾಯಕರಲ್ಲಿ ಯಾರೆ ವೈಯಕ್ತಿಕ ಹೇಳಿಕೆ ನೀಡಿದರು<br />ಅದು ಬರೀ ಅವರ ಅಭಿಪ್ರಾಯ ಅಷ್ಟೆ . ಪಕ್ಷಗಳ ವರಿಷ್ಠರ ನಿರ್ಧಾರವೇ ಅಂತಿಮ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>ಮೈಸೂರಿನಲ್ಲಿ ಸೈನ್ಸ್ ಸಿಟಿ ನಿರ್ಮಿಸಲು ಜೆಎಸ್ಎಸ್ ಮಠದ ವತಿಯಿಂದ25 ಎಕರೆ ಜಮೀನು ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ₹200ಕೋಟಿ ವೆಚ್ಚದಲ್ಲಿ ಸೈನ್ಸ್ ಸಿಟಿ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕೇವಲ ಜೆಡಿಎಸ್ಗಷ್ಟೆ ಕುಮಾರಸ್ವಾಮಿ ಸಿ.ಎಂ ಅಲ್ಲ. ಅವರು ಗ್ರಾಮ ವಾಸ್ತವ್ಯದ ಮೂಲಕ ಮಾಡುವ ಒಳ್ಳೆಯ ಕೆಲಸಗಳ ಕ್ರೆಡಿಟ್ ಸಮ್ಮಿಶ್ರ ಸರ್ಕಾರಕ್ಕೆ ಸಿಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.</p>.<p>ಅವರು ಇಲ್ಲಿ ಸುತ್ತೂರಿನಲ್ಲಿ ಸೈನ್ಸ್ ಪಾರ್ಕ್ ನಿರ್ಮಾಣ ಕುರಿತ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದರು.</p>.<p>ವಿರೋಧ ಪಕ್ಷದವರು ಎಲ್ಲವನ್ನು ಟೀಕೆ ಮಾಡುತ್ತಾರೆ. ಗ್ರಾಮವಾಸ್ತವ್ಯವನ್ನೂ ಟೀಕೆ ಮಾಡಲಾಗುತ್ತಿದೆ. ಸರ್ಕಾರದ ಆಡಳಿತವನ್ನು ಜನಸಮುದಾಯದ ಬಳಿಗೆ ಕೊಂಡಯ್ಯಬೇಕು ಎಂಬುದು ಗ್ರಾಮವಾಸ್ತವ್ಯದ ಉದ್ದೇಶ ಎಂದು ಅವರು ಹೇಳಿದರು.</p>.<p>ಒಬ್ಬ ಸಿಎಂ ಗ್ರಾಮಕ್ಕೆ ಬರುತ್ತಾರೆ ಎಂದರೇ ಆ ಊರಿನ ರಸ್ತೆ, ಶಾಲೆ, ಮೂಲ ಸೌಕರ್ಯಗಳ ಅಭಿವೃದ್ಧಿ ಆಗುತ್ತದೆ. ಇದರಿಂದ ಆ ಸುತ್ತಲಿನ ಗ್ರಾಮಗಳು ಅಭಿವೃದ್ಧಿ ಆಗುತ್ತವೆ. ಇದನ್ನ ಪ್ರತಿಪಕ್ಷ ಅರ್ಥ ಮಾಡಿಕೊಳ್ಳಬೇಕು. ಎಲ್ಲ ವಿಷಯದಲ್ಲೂ ರಾಜಕೀಯ ಮಾಡಬಾರದು ಎಂದು ಅವರು ಹೇಳಿದರು.</p>.<p>ನಾನು ಕೂಡ ಗ್ರಾಮವಾಸ್ತವ್ಯ ಮಾಡಲಿದ್ದು, ನಂತರ ದಿನಾಂಕ ನಿಗದಿಸಿ ಪ್ರಕಟಿಸುತ್ತೇನೆ ಎಂದು ತಿಳಿಸಿದರು.</p>.<p>ಮಧ್ಯಂತರ ಚುನಾವಣೆ ನಡೆಯುವುದಿಲ್ಲ ಎಂದು ನನಗನಿಸುತ್ತದೆ. ಆ ಮೈತ್ರಿ ಪಕ್ಷದ ನಾಯಕರಲ್ಲಿ ಯಾರೆ ವೈಯಕ್ತಿಕ ಹೇಳಿಕೆ ನೀಡಿದರು<br />ಅದು ಬರೀ ಅವರ ಅಭಿಪ್ರಾಯ ಅಷ್ಟೆ . ಪಕ್ಷಗಳ ವರಿಷ್ಠರ ನಿರ್ಧಾರವೇ ಅಂತಿಮ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>ಮೈಸೂರಿನಲ್ಲಿ ಸೈನ್ಸ್ ಸಿಟಿ ನಿರ್ಮಿಸಲು ಜೆಎಸ್ಎಸ್ ಮಠದ ವತಿಯಿಂದ25 ಎಕರೆ ಜಮೀನು ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ₹200ಕೋಟಿ ವೆಚ್ಚದಲ್ಲಿ ಸೈನ್ಸ್ ಸಿಟಿ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>