‘ಕೋಲಾರದಲ್ಲಿ ಸಚಿವರು ಹಾಗೂ ಶಾಸಕರ ನಡುವೆ ಅಸಮಾಧಾನವಿರುವುದು ಸತ್ಯ. ದಲಿತರಲ್ಲಿ ಎಡಗೈ ಬದಲು ಬಲಗೈ ಸಮುದಾಯದವರಿಗೆ ಟಿಕೆಟ್ ಕೊಡಬೇಕು ಎಂಬುದು ಅಲ್ಲಿನವರ ಒತ್ತಾಯ. ನಾನೂ ಮುಖಂಡರ ಜೊತೆ ಮಾತನಾಡಿದ್ದು, ಸಮಾಧಾನದಿಂದ ಇರುವಂತೆ ಹೇಳಿದ್ದೇನೆ. ಅಲ್ಲಿಗೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಆದರೂ ಎಡಗೈಯವರಿಗೆ ಕೊಡಬಹುದೆಂದು ಭಯಪಡುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.