<p><strong>ಬೆಟ್ಟದಪುರ:</strong> ಸಮೀಪದ ಕೋಮಲಾಪುರದಲ್ಲಿ ಕುಸುಮ್ ಯೋಜನೆ ಅಡಿಯಲ್ಲಿ ಸ್ಥಳ ಪರಿಶೀಲನೆ ಮಾಡಲು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೋಮವಾರ ಭೇಟಿ ನೀಡಿ ಸರ್ಕಾರದ ಗೋಮಾಳ ಪರಿಶೀಲನೆ ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, 'ಈ ಯೋಜನೆಯಿಂದ ರೈತರು ಆದಾಯವನ್ನು ಹೆಚ್ಚಿಸಲು ಹಾಗೂ ಆಧುನಿಕತೆಯ ಬೇಸಾಯಕ್ಕಾಗಿ ಅನುಕೂಲವಾಗುವ ದೃಷ್ಟಿಯಿಂದ, ದೇಶಾದ್ಯಂತ ಸೌರ ಪಂಪ್ ಹಾಗೂ ವಿದ್ಯುತ್ ಸ್ಥಾವರ ಸ್ಥಾಪಿಸಲು ಸರ್ಕಾರ ಈ ಯೋಜನೆಯನ್ನು ರೈತರಿಗಾಗಿ ಅನುಷ್ಠಾನಕ್ಕೆ ತರಲಾಗಿದೆ’ ಎಂದರು.</p>.<p>‘ಗ್ರಾಮದ ಸರ್ವೆನಂಬರ್ 105, 106, 107, 108/1, 111/1 ಒಟ್ಟು 46 ಎಕರೆ ಪರಿಶೀಲಿಸಲಾಗಿದೆ.ಇದರಿಂದ ರೈತರಿಗೆ ತಮ್ಮ ಕೃಷಿ ಪಂಪ್ಗಳನ್ನು ಸೋಲಾರೈಸ್ ಮಾಡುವ ಮೂಲಕ ಬೇಸಾಯಕ್ಕೆ ಅನುಕೂಲವಾಗಲಿದೆ. ಎಲ್ಲಾ ರೈತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಕುಂಇ್ ಅಹಮದ್, ಸೆಸ್ಕ್ ಅಧಿಕಾರಿ ಸುನಿಲ್ ಕುಮಾರ್, ಕಂದಾಯ ನಿರೀಕ್ಷಕ ಅಜ್ಮಹಲ್ ಶರೀಫ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ:</strong> ಸಮೀಪದ ಕೋಮಲಾಪುರದಲ್ಲಿ ಕುಸುಮ್ ಯೋಜನೆ ಅಡಿಯಲ್ಲಿ ಸ್ಥಳ ಪರಿಶೀಲನೆ ಮಾಡಲು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೋಮವಾರ ಭೇಟಿ ನೀಡಿ ಸರ್ಕಾರದ ಗೋಮಾಳ ಪರಿಶೀಲನೆ ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, 'ಈ ಯೋಜನೆಯಿಂದ ರೈತರು ಆದಾಯವನ್ನು ಹೆಚ್ಚಿಸಲು ಹಾಗೂ ಆಧುನಿಕತೆಯ ಬೇಸಾಯಕ್ಕಾಗಿ ಅನುಕೂಲವಾಗುವ ದೃಷ್ಟಿಯಿಂದ, ದೇಶಾದ್ಯಂತ ಸೌರ ಪಂಪ್ ಹಾಗೂ ವಿದ್ಯುತ್ ಸ್ಥಾವರ ಸ್ಥಾಪಿಸಲು ಸರ್ಕಾರ ಈ ಯೋಜನೆಯನ್ನು ರೈತರಿಗಾಗಿ ಅನುಷ್ಠಾನಕ್ಕೆ ತರಲಾಗಿದೆ’ ಎಂದರು.</p>.<p>‘ಗ್ರಾಮದ ಸರ್ವೆನಂಬರ್ 105, 106, 107, 108/1, 111/1 ಒಟ್ಟು 46 ಎಕರೆ ಪರಿಶೀಲಿಸಲಾಗಿದೆ.ಇದರಿಂದ ರೈತರಿಗೆ ತಮ್ಮ ಕೃಷಿ ಪಂಪ್ಗಳನ್ನು ಸೋಲಾರೈಸ್ ಮಾಡುವ ಮೂಲಕ ಬೇಸಾಯಕ್ಕೆ ಅನುಕೂಲವಾಗಲಿದೆ. ಎಲ್ಲಾ ರೈತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಕುಂಇ್ ಅಹಮದ್, ಸೆಸ್ಕ್ ಅಧಿಕಾರಿ ಸುನಿಲ್ ಕುಮಾರ್, ಕಂದಾಯ ನಿರೀಕ್ಷಕ ಅಜ್ಮಹಲ್ ಶರೀಫ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>