<p><strong>ಮೈಸೂರು</strong>: ‘ಯಾವುದೇ ಕ್ಷೇತ್ರದಲ್ಲಿ ಸಾಧನೆಗೆ ನಿರಂತರ ಪ್ರಯತ್ನ ಬಹಳ ಮುಖ್ಯ’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.</p>.<p>ನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣಮಂಟಪದಲ್ಲಿ ಶುಕ್ರವಾರ ನಡೆದ ಕುವೆಂಪು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಸಮಾಜ ಸೇವೆಯಲ್ಲಿ ತೊಡಗಬೇಕು’ ಎಂದರು.</p>.<p>ಸುಪ್ರಿಂಕೋರ್ಟ್ ನಿವೃತ್ತ ನಾಯಾಧೀಶ ಎನ್.ಗೋಪಾಲಗೌಡ ಮಾತನಾಡಿ, ‘ಪ್ರತಿಯೊಬ್ಬರೂ ವೈಚಾರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಇದು ವಿಚಾರವನ್ನು ವಿವೇಚನೆಯಿಂದ ಅಭ್ಯಸಿಸುವುದರಿಂದ ಮೂಡುತ್ತದೆ. ಕುವೆಂಪು ವಿಶ್ವಮಾನವ ಸಂದೇಶ ಸಾರಿದ್ದಾರೆ. ಅವರ ಕಾವ್ಯ ಶೈಲಿ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಮೆರುಗು ನೀಡಿದೆ’ ಎಂದು ಹೇಳಿದರು.</p>.<p>ಗೋವಿಂದೇಗೌಡ, ಬಿ.ಕೆ.ಚಂದ್ರಶೇಖರಗೌಡ, ಮೆಲ್ಲಹಳ್ಳಿ ಬೋರೇಗೌಡ, ಎನ್.ಜಿ.ನಾರಾಯಣ (ಸಮಾಜ ಸೇವಾ ಪ್ರಶಸ್ತಿ), ಡಾ.ಅರುಣ್ ಶ್ರೀನಿವಾಸ್, ಡಾ.ಎಸ್.ಪಿ.ಯೋಗಣ್ಣ, ಡಾ.ಸರಳಾ ಚಂದ್ರಶೇಖರ್, ಡಾ.ಶುಶ್ರುತ್ಗೌಡ (ಬಾಲಗಂಗಾಧರನಾಥ ಸ್ವಾಮೀಜಿ ವೈದ್ಯರತ್ನ ಪ್ರಶಸ್ತಿ) ಪ್ರದಾನ ಮಾಡಲಾಯಿತು.</p>.<p>ಎಸ್ಎಸ್ಎಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಕೆಂಪೀರೇಗೌಡ ಸ್ಮರಣಾರ್ಥ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದ ಮಹಾರಾಜ್ ಸಾನ್ನಿಧ್ಯ ವಹಿಸಿದ್ದರು.</p>.<p>ಟ್ರಸ್ಟ್ ಅಧ್ಯಕ್ಷ ಎಚ್.ಕೆ.ರಾಮು ಮಾತನಾಡಿದರು. ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಇದ್ದರು.</p> <p> <strong>ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರವಾಗಿ ‘ಭಾರತ ರತ್ನ’ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನಸೆಳೆಯಲಾಗುವುದು</strong></p><p><strong>- ಜಿ.ಟಿ. ದೇವೇಗೌಡ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಯಾವುದೇ ಕ್ಷೇತ್ರದಲ್ಲಿ ಸಾಧನೆಗೆ ನಿರಂತರ ಪ್ರಯತ್ನ ಬಹಳ ಮುಖ್ಯ’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.</p>.<p>ನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣಮಂಟಪದಲ್ಲಿ ಶುಕ್ರವಾರ ನಡೆದ ಕುವೆಂಪು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಸಮಾಜ ಸೇವೆಯಲ್ಲಿ ತೊಡಗಬೇಕು’ ಎಂದರು.</p>.<p>ಸುಪ್ರಿಂಕೋರ್ಟ್ ನಿವೃತ್ತ ನಾಯಾಧೀಶ ಎನ್.ಗೋಪಾಲಗೌಡ ಮಾತನಾಡಿ, ‘ಪ್ರತಿಯೊಬ್ಬರೂ ವೈಚಾರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಇದು ವಿಚಾರವನ್ನು ವಿವೇಚನೆಯಿಂದ ಅಭ್ಯಸಿಸುವುದರಿಂದ ಮೂಡುತ್ತದೆ. ಕುವೆಂಪು ವಿಶ್ವಮಾನವ ಸಂದೇಶ ಸಾರಿದ್ದಾರೆ. ಅವರ ಕಾವ್ಯ ಶೈಲಿ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಮೆರುಗು ನೀಡಿದೆ’ ಎಂದು ಹೇಳಿದರು.</p>.<p>ಗೋವಿಂದೇಗೌಡ, ಬಿ.ಕೆ.ಚಂದ್ರಶೇಖರಗೌಡ, ಮೆಲ್ಲಹಳ್ಳಿ ಬೋರೇಗೌಡ, ಎನ್.ಜಿ.ನಾರಾಯಣ (ಸಮಾಜ ಸೇವಾ ಪ್ರಶಸ್ತಿ), ಡಾ.ಅರುಣ್ ಶ್ರೀನಿವಾಸ್, ಡಾ.ಎಸ್.ಪಿ.ಯೋಗಣ್ಣ, ಡಾ.ಸರಳಾ ಚಂದ್ರಶೇಖರ್, ಡಾ.ಶುಶ್ರುತ್ಗೌಡ (ಬಾಲಗಂಗಾಧರನಾಥ ಸ್ವಾಮೀಜಿ ವೈದ್ಯರತ್ನ ಪ್ರಶಸ್ತಿ) ಪ್ರದಾನ ಮಾಡಲಾಯಿತು.</p>.<p>ಎಸ್ಎಸ್ಎಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಕೆಂಪೀರೇಗೌಡ ಸ್ಮರಣಾರ್ಥ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದ ಮಹಾರಾಜ್ ಸಾನ್ನಿಧ್ಯ ವಹಿಸಿದ್ದರು.</p>.<p>ಟ್ರಸ್ಟ್ ಅಧ್ಯಕ್ಷ ಎಚ್.ಕೆ.ರಾಮು ಮಾತನಾಡಿದರು. ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಇದ್ದರು.</p> <p> <strong>ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರವಾಗಿ ‘ಭಾರತ ರತ್ನ’ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನಸೆಳೆಯಲಾಗುವುದು</strong></p><p><strong>- ಜಿ.ಟಿ. ದೇವೇಗೌಡ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>