<p><strong>ಹಂಪಾಪುರ:</strong> ಮೈಸೂರಿನ ಹಾರ್ಟ್ ಸಂಸ್ಥೆ, ರೋಟರಿ ಕ್ಲಬ್, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ನಾರಾಯಣ ಹೆಲ್ತ್, ಎಎಸ್ಜಿ ಕಣ್ಣಿನ ಆಸ್ಪತ್ರೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಕ್ಯಾತನಹಳ್ಳಿ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು.</p>.<p>ತಹಶೀಲ್ದಾರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಶಿಬಿರಗಳು ಅವಶ್ಯಕ’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ‘ಶಿಬಿರದ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಶಿಬಿರದಲ್ಲಿ 45 ಜನ ಕಣ್ಣಿನ ಪರೀಕ್ಷೆ, 20 ಜನ ಶ್ವಾಸಕೋಶ ಪರೀಕ್ಷೆ, 25 ಮಂದಿ ಇ.ಸಿ.ಜಿ, 75 ಜನ ರಕ್ತದೊತ್ತಡ ಮತ್ತು ಮಧುಮೇಹ, 75 ಜನ ಸಾಮಾನ್ಯ ರೋಗ ತಪಾಸಣೆ ಮಾಡಿಸಿಕೊಂಡರು.</p>.<p>ನಾರಾಯಣ ಹೆಲ್ತ್ನ ವಿನಯ್, ಎಎಸ್ಜಿ ಕಣ್ಣಿನ ಆಸ್ಪತ್ರೆಯ ಮಹೇಶ್, ಹಾರ್ಟ್ ಸಂಸ್ಥೆಯ ಸಂಯೋಜಕ ಶಿವಲಿಂಗ, ಸಿಪ್ಲ ಬ್ರಿತ್ ಫ್ರೀ ಸಮಿರ್, ಕ್ಯಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರಶಾಂತ್, ಶೀಲಾ, ಸಮುದಾಯ ಆರೋಗ್ಯ ಅಧಿಕಾರಿ ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಾಪುರ:</strong> ಮೈಸೂರಿನ ಹಾರ್ಟ್ ಸಂಸ್ಥೆ, ರೋಟರಿ ಕ್ಲಬ್, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ನಾರಾಯಣ ಹೆಲ್ತ್, ಎಎಸ್ಜಿ ಕಣ್ಣಿನ ಆಸ್ಪತ್ರೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಕ್ಯಾತನಹಳ್ಳಿ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು.</p>.<p>ತಹಶೀಲ್ದಾರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಶಿಬಿರಗಳು ಅವಶ್ಯಕ’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ‘ಶಿಬಿರದ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಶಿಬಿರದಲ್ಲಿ 45 ಜನ ಕಣ್ಣಿನ ಪರೀಕ್ಷೆ, 20 ಜನ ಶ್ವಾಸಕೋಶ ಪರೀಕ್ಷೆ, 25 ಮಂದಿ ಇ.ಸಿ.ಜಿ, 75 ಜನ ರಕ್ತದೊತ್ತಡ ಮತ್ತು ಮಧುಮೇಹ, 75 ಜನ ಸಾಮಾನ್ಯ ರೋಗ ತಪಾಸಣೆ ಮಾಡಿಸಿಕೊಂಡರು.</p>.<p>ನಾರಾಯಣ ಹೆಲ್ತ್ನ ವಿನಯ್, ಎಎಸ್ಜಿ ಕಣ್ಣಿನ ಆಸ್ಪತ್ರೆಯ ಮಹೇಶ್, ಹಾರ್ಟ್ ಸಂಸ್ಥೆಯ ಸಂಯೋಜಕ ಶಿವಲಿಂಗ, ಸಿಪ್ಲ ಬ್ರಿತ್ ಫ್ರೀ ಸಮಿರ್, ಕ್ಯಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರಶಾಂತ್, ಶೀಲಾ, ಸಮುದಾಯ ಆರೋಗ್ಯ ಅಧಿಕಾರಿ ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>