<p><strong>ಹುಣಸೂರು:</strong> ವೃತ್ತಿಯಲ್ಲಿ ಕೌಶಲ ಅಳವಡಿಕೆ ಮತ್ತು ಸೇವೆಯಲ್ಲಿ ಸಕಾರಾತ್ಮಕತೆ ಮೈಗೂಡಿಸಿಕೊಳ್ಳುವ ಮೂಲಕ ನಾಗರಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಗರಸಭೆ ಆಯುಕ್ತೆ ಮಾನಸ ಪೌರಕಾರ್ಮಿಕರಿಗೆ ಸಲಹೆ ನೀಡಿದರು. </p>.<p>ನಗರದ ಅಂಬೇಡ್ಕರ್ ಭವನದಲ್ಲಿ ನಗರಸಭೆ ಪೌರಕಾರ್ಮಿಕರು ಒಳಗೊಂಡಂತೆ ವಿವಿಧ ವಿಭಾಗದ ಸಿಬ್ಬಂದಿಗೆ ಎಸ್.ಬಿ.ಎಂ. 2.0 ಯೋಜನೆ ಅಡಿಯಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಿಂದ ಸಮಾಜ ಉತ್ಕೃಷ್ಟ ಸೇವೆ ನಿರೀಕ್ಷಿಸುತ್ತದೆ. ಅದಕ್ಕೆ ತಕ್ಕಂತೆ ಪ್ರಾಮಾಣಿಕ ಸೇವೆ ನೀಡಬೇಕಾದ ಜವಾಬ್ದಾರಿ ನಮ್ಮ ಹೆಗಲಿಗಿದೆ. ವೃತ್ತಿಯಲ್ಲಿ ಕೌಶಲ ಪಡೆದುಕೊಂಡು ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಿ ಎಂದರು.</p>.<p>ನೂತನ ತಂತ್ರಜ್ಞಾನಗಳ ಬಳಕೆ ಅರಿತುಕೊಂಡು, ಪೌರಕಾರ್ಮಿಕರು ಸೇವೆಯಲ್ಲಿ ಅದನ್ನು ತೊಡಗಿಸಿಕೊಳ್ಳುವ ಮೂಲಕ ನಗರದ ಸ್ವಚ್ಛತೆಗೆ ಒತ್ತು ನೀಡಬೇಕು. ನಿಮ್ಮ ಕಾರ್ಯಶೈಲಿ, ತಂತ್ರಜ್ಞಾನಗಳ ಬಳಕೆ ಕುರಿತು ಮಾಹಿತಿ ನೀಡಲು ಈ ರೀತಿಯ ಕಾರ್ಯಾಗಾರಗಳು ಅವಶ್ಯ ಎಂದರು.</p>.<p>ಸಭೆಯಲ್ಲಿ ನಂಜನಗೂಡು ನಗರಸಭೆ ಪರಿಸರ ವಿಭಾಗದ ಎಇಇ ನೇತ್ರಾವತಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ವಿಂಗಡಣೆ, ವಿತರಣೆ ಕುರಿತು ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.</p>.<p>ಜಗದೀಶ್ ಸಿಬ್ಬಂದಿಯ ವೈಯಕ್ತಿಕ ಆರೋಗ್ಯ, ಸುರಕ್ಷತೆ, ಕುರಿತು ಮಾಹಿತಿ ನೀಡಿದರು. ಮೈಸೂರಿನ ಜೆ.ಸಿ. ಕಾಲೇಜಿನ ಪ್ರೊ.ಶಿವಪ್ರಸಾದ್ ಒಳಚರಂಡಿ ನಿರ್ವಹಣೆ ಕುರಿತು ಮಾಹಿತಿ ನೀಡಿದರು.</p>.<p>ಕಾರ್ಯಾಗಾರದಲ್ಲಿ ನಗರಸಭೆ ಪರಿಸರ ವಿಭಾಗದ ಎಇಇ ಸೌಮ್ಯ, ಆರೋಗ್ಯ ನಿರೀಕ್ಷಕ ಶಶಿಕುಮಾರ್, ಕೃಷ್ಣೇಗೌಡ, ರಾಚಯ್ಯ, ಜಯಮ್ಮ, ಮಾದ ಸೇರಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ವೃತ್ತಿಯಲ್ಲಿ ಕೌಶಲ ಅಳವಡಿಕೆ ಮತ್ತು ಸೇವೆಯಲ್ಲಿ ಸಕಾರಾತ್ಮಕತೆ ಮೈಗೂಡಿಸಿಕೊಳ್ಳುವ ಮೂಲಕ ನಾಗರಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಗರಸಭೆ ಆಯುಕ್ತೆ ಮಾನಸ ಪೌರಕಾರ್ಮಿಕರಿಗೆ ಸಲಹೆ ನೀಡಿದರು. </p>.<p>ನಗರದ ಅಂಬೇಡ್ಕರ್ ಭವನದಲ್ಲಿ ನಗರಸಭೆ ಪೌರಕಾರ್ಮಿಕರು ಒಳಗೊಂಡಂತೆ ವಿವಿಧ ವಿಭಾಗದ ಸಿಬ್ಬಂದಿಗೆ ಎಸ್.ಬಿ.ಎಂ. 2.0 ಯೋಜನೆ ಅಡಿಯಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಿಂದ ಸಮಾಜ ಉತ್ಕೃಷ್ಟ ಸೇವೆ ನಿರೀಕ್ಷಿಸುತ್ತದೆ. ಅದಕ್ಕೆ ತಕ್ಕಂತೆ ಪ್ರಾಮಾಣಿಕ ಸೇವೆ ನೀಡಬೇಕಾದ ಜವಾಬ್ದಾರಿ ನಮ್ಮ ಹೆಗಲಿಗಿದೆ. ವೃತ್ತಿಯಲ್ಲಿ ಕೌಶಲ ಪಡೆದುಕೊಂಡು ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಿ ಎಂದರು.</p>.<p>ನೂತನ ತಂತ್ರಜ್ಞಾನಗಳ ಬಳಕೆ ಅರಿತುಕೊಂಡು, ಪೌರಕಾರ್ಮಿಕರು ಸೇವೆಯಲ್ಲಿ ಅದನ್ನು ತೊಡಗಿಸಿಕೊಳ್ಳುವ ಮೂಲಕ ನಗರದ ಸ್ವಚ್ಛತೆಗೆ ಒತ್ತು ನೀಡಬೇಕು. ನಿಮ್ಮ ಕಾರ್ಯಶೈಲಿ, ತಂತ್ರಜ್ಞಾನಗಳ ಬಳಕೆ ಕುರಿತು ಮಾಹಿತಿ ನೀಡಲು ಈ ರೀತಿಯ ಕಾರ್ಯಾಗಾರಗಳು ಅವಶ್ಯ ಎಂದರು.</p>.<p>ಸಭೆಯಲ್ಲಿ ನಂಜನಗೂಡು ನಗರಸಭೆ ಪರಿಸರ ವಿಭಾಗದ ಎಇಇ ನೇತ್ರಾವತಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ವಿಂಗಡಣೆ, ವಿತರಣೆ ಕುರಿತು ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.</p>.<p>ಜಗದೀಶ್ ಸಿಬ್ಬಂದಿಯ ವೈಯಕ್ತಿಕ ಆರೋಗ್ಯ, ಸುರಕ್ಷತೆ, ಕುರಿತು ಮಾಹಿತಿ ನೀಡಿದರು. ಮೈಸೂರಿನ ಜೆ.ಸಿ. ಕಾಲೇಜಿನ ಪ್ರೊ.ಶಿವಪ್ರಸಾದ್ ಒಳಚರಂಡಿ ನಿರ್ವಹಣೆ ಕುರಿತು ಮಾಹಿತಿ ನೀಡಿದರು.</p>.<p>ಕಾರ್ಯಾಗಾರದಲ್ಲಿ ನಗರಸಭೆ ಪರಿಸರ ವಿಭಾಗದ ಎಇಇ ಸೌಮ್ಯ, ಆರೋಗ್ಯ ನಿರೀಕ್ಷಕ ಶಶಿಕುಮಾರ್, ಕೃಷ್ಣೇಗೌಡ, ರಾಚಯ್ಯ, ಜಯಮ್ಮ, ಮಾದ ಸೇರಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>