‘ಪತ್ರಿಕೆಯಲ್ಲಿ ಬಂದ ವರದಿ ಗಮನಿಸಿ, ಮಹಿಳೆಯನ್ನು ಭೇಟಿಯಾಗಿ ಮಾಹಿತಿ ಪಡೆಯಲಾಯಿತು. ಆಶ್ರಯ ಕಲ್ಪಿಸುವುದಕ್ಕಾಗಿ ಎನ್ಜಿಒಗಳಿಗೂ ತಿಳಿಸಲಾಗಿತ್ತು. ‘ಅಭಯ’ ತಂಡ, ಎನ್ಜಿಒಗಳವರು ಹಾಗೂ ಅಶೋಕಪುರಂ ಪೊಲೀಸ್ ಠಾಣೆ ಸಿಬ್ಬಂದಿ ನೆರವಿನಲ್ಲಿ ಮಹಿಳೆಯನ್ನು ಕೆ.ಆರ್. ಆಸ್ಪತ್ರೆಗೆ ಕರೆದೊಯ್ದು ಕೌನ್ಸೆಲಿಂಗ್ ಮಾಡಿಸಲಾಯಿತು. ಅಗತ್ಯ ಚಿಕಿತ್ಸೆ ಕೊಡಿಸಲಾಗಿದೆ. ಭಾನುವಾರ ಅವರನ್ನು ಆರೈಕೆ ಕೇಂದ್ರಕ್ಕೆ ಕಳುಹಿಸಲಾಯಿತು’ ಎಂದು ಭೈರಲಿಂಗಯ್ಯ ಮಾಹಿತಿ ನೀಡಿದರು.