<p><strong>ಮೈಸೂರು</strong>: ಇಲ್ಲಿನ ಮಹಾನಗರಪಾಲಿಕೆಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನದ ಅಂಗವಾಗಿ ಶನಿವಾರ ಕುಕ್ಕರಹಳ್ಳಿ ಕೆರೆಯಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ನಡೆಸಲಾಯಿತು. </p><p>ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಜೆಎಸ್ಎಸ್ ಮಹಾವಿದ್ಯಾಪೀಠ, ಎಂಐಟಿ, ಎಸ್ಜೆಸಿಇ ಹಾಗೂ ಯುವರಾಜ ಕಾಲೇಜಿನ ಎನ್ಎಸ್ಎಸ್ ಮತ್ತು ಎನ್ಸಿಸಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.</p><p>ಮೈಸೂರು ಗ್ರಾಹಕರ ಪರಿಷತ್ತು (ಎಂಜಿಪಿ), ಕ್ಲೀನ್ ಮೈಸೂರು ಫೌಂಡೇಷನ್, ರಘುಲಾಲ್ ಮೆಡಿಕಲ್ಸ್ ಸೇರಿದಂತೆ ಸಂಘ–ಸಂಸ್ಥೆಗಳ ಸದಸ್ಯರು ಕೆರೆಯ ಸ್ವಚ್ಛತಾ ಕಾರ್ಯದಲ್ಲಿ ಸಹಕರಿಸಿದರು.</p><p>ಕೆಪಿ ಕಾನ್ವೆಂಟ್, ಸೇಂಟ್ ಪಾಲ್ ಶಾಲೆ, ಲಿಟಲ್ ಇನ್ಫೆಂಟ್ ಶಾಲೆ, ಅಮೃತ ವಿದ್ಯಾಲಯ, ವಿದ್ಯಾವರ್ಧಕ ಮತ್ತು ಪ್ರಗತಿ ವಿದ್ಯಾಕೇಂದ್ರದ ಮಕ್ಕಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಪ್ರದರ್ಶಿಸಿದರು.</p><p>ಮಹಾನಗರಪಾಲಿಕೆಯ ಸ್ವಚ್ಛ ಭಾರತ ಮಿಷನ್ ನೋಡಲ್ ಅಧಿಕಾರಿ ಮೃತ್ಯುಂಜಯ ಕೆ.ಎಸ್., ಎಇಇ ಮೀನಾಕ್ಷಿ, ಪರಿಸರ ಎಂಜಿನಿಯರ್ಗಳು, ಆರೋಗ್ಯ ಇನ್ಸ್ಪೆಕ್ಟರ್ಗಳು, ಮೇಲ್ವಿಚಾರಕರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.</p><p>ಅಭಿಯಾನದಲ್ಲಿ ಒಟ್ಟು 410 ಕೆ.ಜಿ. ತ್ಯಾಜ್ಯ ಸಂಗ್ರಹಿಸಲಾಯಿತು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.</p><p>ಕೆಪಿ ಕಾನ್ವೆಂಟ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ವೀಣಾಕುಮಾರಿ ಪ್ರಥಮ, ಪ್ರಗತಿ ವಿದ್ಯಾಕೇಂದ್ರದ 7ನೇ ತರಗತಿಯ ಹರ್ಷಿತ್ ಜಿ. ಮತ್ತು ಅಮೃತ ವಿದ್ಯಾಲಯದ 4ನೇ ತರಗತಿಯ ಅನ್ವಿತಾ ತೃತೀಯ ಬಹುಮಾನವನ್ನು ಪಡೆದರು ಎಂದು ನಗರಪಾಲಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಮಹಾನಗರಪಾಲಿಕೆಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನದ ಅಂಗವಾಗಿ ಶನಿವಾರ ಕುಕ್ಕರಹಳ್ಳಿ ಕೆರೆಯಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ನಡೆಸಲಾಯಿತು. </p><p>ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಜೆಎಸ್ಎಸ್ ಮಹಾವಿದ್ಯಾಪೀಠ, ಎಂಐಟಿ, ಎಸ್ಜೆಸಿಇ ಹಾಗೂ ಯುವರಾಜ ಕಾಲೇಜಿನ ಎನ್ಎಸ್ಎಸ್ ಮತ್ತು ಎನ್ಸಿಸಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.</p><p>ಮೈಸೂರು ಗ್ರಾಹಕರ ಪರಿಷತ್ತು (ಎಂಜಿಪಿ), ಕ್ಲೀನ್ ಮೈಸೂರು ಫೌಂಡೇಷನ್, ರಘುಲಾಲ್ ಮೆಡಿಕಲ್ಸ್ ಸೇರಿದಂತೆ ಸಂಘ–ಸಂಸ್ಥೆಗಳ ಸದಸ್ಯರು ಕೆರೆಯ ಸ್ವಚ್ಛತಾ ಕಾರ್ಯದಲ್ಲಿ ಸಹಕರಿಸಿದರು.</p><p>ಕೆಪಿ ಕಾನ್ವೆಂಟ್, ಸೇಂಟ್ ಪಾಲ್ ಶಾಲೆ, ಲಿಟಲ್ ಇನ್ಫೆಂಟ್ ಶಾಲೆ, ಅಮೃತ ವಿದ್ಯಾಲಯ, ವಿದ್ಯಾವರ್ಧಕ ಮತ್ತು ಪ್ರಗತಿ ವಿದ್ಯಾಕೇಂದ್ರದ ಮಕ್ಕಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಪ್ರದರ್ಶಿಸಿದರು.</p><p>ಮಹಾನಗರಪಾಲಿಕೆಯ ಸ್ವಚ್ಛ ಭಾರತ ಮಿಷನ್ ನೋಡಲ್ ಅಧಿಕಾರಿ ಮೃತ್ಯುಂಜಯ ಕೆ.ಎಸ್., ಎಇಇ ಮೀನಾಕ್ಷಿ, ಪರಿಸರ ಎಂಜಿನಿಯರ್ಗಳು, ಆರೋಗ್ಯ ಇನ್ಸ್ಪೆಕ್ಟರ್ಗಳು, ಮೇಲ್ವಿಚಾರಕರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.</p><p>ಅಭಿಯಾನದಲ್ಲಿ ಒಟ್ಟು 410 ಕೆ.ಜಿ. ತ್ಯಾಜ್ಯ ಸಂಗ್ರಹಿಸಲಾಯಿತು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.</p><p>ಕೆಪಿ ಕಾನ್ವೆಂಟ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ವೀಣಾಕುಮಾರಿ ಪ್ರಥಮ, ಪ್ರಗತಿ ವಿದ್ಯಾಕೇಂದ್ರದ 7ನೇ ತರಗತಿಯ ಹರ್ಷಿತ್ ಜಿ. ಮತ್ತು ಅಮೃತ ವಿದ್ಯಾಲಯದ 4ನೇ ತರಗತಿಯ ಅನ್ವಿತಾ ತೃತೀಯ ಬಹುಮಾನವನ್ನು ಪಡೆದರು ಎಂದು ನಗರಪಾಲಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>