<p><strong>ಎಚ್.ಡಿ.ಕೋಟೆ</strong>: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಲಕ್ಷ್ಮೀ ವರದರಾಜ ಸ್ವಾಮಿ ದೇವಾಲಯದ 13ನೇ ವರ್ಷದ ಬ್ರಹ್ಮರಥೋತ್ಸವ ಬುಧವಾರ ನಡೆಯಲಿದೆ.</p>.<p>ಆದ್ದೂರಿ ಆಚರಣೆಗೆ ದೇವಸ್ಥಾನ ಸಮಿತಿ, ತಾಲ್ಲೂಕು ಆಡಳಿತ ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದೆ. ಯುಗಾದಿ ಹಬ್ಬದ ನಂತರ ಪಟ್ಟಣದಲ್ಲಿ ನಡೆಯುತ್ತಿರುವ ರಥೋತ್ಸವ ಇದಾಗಿದೆ.</p>.<p>ಚೋಳರ ಕಾಲದಲ್ಲಿ ನಿರ್ಮಾಣಗೊಂಡ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನದಲ್ಲಿನ ವರದರಾಜ ಸ್ವಾಮಿ, ಶ್ರೀದೇವಿ, ಭೂದೇವಿ ಉತ್ಸವ ಮೂರ್ತಿಗಳನ್ನು ರಥದಲ್ಲಿರಿಸಿ ಮೆರವಣಿಗೆ ನಡೆಸಲಾಗುವುದು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p>.<p>ರಥೋತ್ಸವದಲ್ಲಿ ಪಟ್ಟಣ ಸೇರಿದಂತೆ ತಾಲ್ಲೂಕು, ವಿವಿಧ ಜಿಲ್ಲೆಗಳಿಂದಲೂ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ದೇವಸ್ಥಾನದ ಕಾರ್ಯಕ್ರಮದಲ್ಲಿ ಭಾಗವಹಿಸುವರು.</p>.<p>ಪುರಾತನ ದೇವಸ್ಥಾನದ ಅಭಿವೃದ್ಧಿಯನ್ನು ಮುಜರಾಯಿ ಇಲಾಖೆ, ಸರ್ಕಾರ ಮತ್ತು ದಾನಿಗಳ ಮುಖಾಂತರ ₹2 ಕೋಟಿ ವೆಚ್ಚದಲ್ಲಿ ಈಚೆಗೆ ನಡೆಸಲಾಗಿದೆ. ಸಮಿತಿಯ ಮುಖಂಡರು ಬ್ರಹ್ಮರಥೋತ್ಸವ ಸಿದ್ಧತೆಯಲ್ಲಿ ಪಾಲ್ಗೊಂಡಿದ್ದಾರೆ.</p>.<p>ಬ್ರಹ್ಮರಥೋತ್ಸವದ ಅಂಗವಾಗಿ ಕಳೆದ ಏಪ್ರಿಲ್ 29ರಿಂದ ಮೇ 10ರವರೆಗೆ ದೇವಸ್ಥಾನದಲ್ಲಿ ಎಲ್ಲಾ ಸಮುದಾಯದವರು ಸೇರಿ ವಿಶೇಷ ಪೂಜೆ, ಹವನ, ಅಭಿಷೇಕ, ಅಲಂಕಾರ ಮತ್ತಿತರ ಸೇವೆ ನಡೆಸಲಾಗುತ್ತಿದೆ.</p>.<p>12 ದಿನಗಳ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಎಸ್.ರಂಗ ಅಯ್ಯಂಗಾರ್, ತಹಶೀಲ್ದಾರ್ ಶ್ರೀನಿವಾಸ, ಪುರಸಭಾ ಅಧ್ಯಕ್ಷೆ ಶಿವಮ್ಮ ಚಾಕಳ್ಳಿ ಕೃಷ್ಣ, ರಥೋತ್ಸವ ನಿರ್ವಹಣಾ ಮಂಡಳಿಯ ಅಧ್ಯಕ್ಷ ಸಿ.ಎನ್.ನಾಗಣ್ಣ, ತಿರುಮಲಾಚಾರ್, ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಪಾಲ್ಗೊಳ್ಳುವರು.</p>.<p> ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ 12 ದಿನ ವಿಶೇಷ ಪೂಜಾ ಕಾರ್ಯಕ್ರಮ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ</strong>: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಲಕ್ಷ್ಮೀ ವರದರಾಜ ಸ್ವಾಮಿ ದೇವಾಲಯದ 13ನೇ ವರ್ಷದ ಬ್ರಹ್ಮರಥೋತ್ಸವ ಬುಧವಾರ ನಡೆಯಲಿದೆ.</p>.<p>ಆದ್ದೂರಿ ಆಚರಣೆಗೆ ದೇವಸ್ಥಾನ ಸಮಿತಿ, ತಾಲ್ಲೂಕು ಆಡಳಿತ ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದೆ. ಯುಗಾದಿ ಹಬ್ಬದ ನಂತರ ಪಟ್ಟಣದಲ್ಲಿ ನಡೆಯುತ್ತಿರುವ ರಥೋತ್ಸವ ಇದಾಗಿದೆ.</p>.<p>ಚೋಳರ ಕಾಲದಲ್ಲಿ ನಿರ್ಮಾಣಗೊಂಡ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನದಲ್ಲಿನ ವರದರಾಜ ಸ್ವಾಮಿ, ಶ್ರೀದೇವಿ, ಭೂದೇವಿ ಉತ್ಸವ ಮೂರ್ತಿಗಳನ್ನು ರಥದಲ್ಲಿರಿಸಿ ಮೆರವಣಿಗೆ ನಡೆಸಲಾಗುವುದು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p>.<p>ರಥೋತ್ಸವದಲ್ಲಿ ಪಟ್ಟಣ ಸೇರಿದಂತೆ ತಾಲ್ಲೂಕು, ವಿವಿಧ ಜಿಲ್ಲೆಗಳಿಂದಲೂ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ದೇವಸ್ಥಾನದ ಕಾರ್ಯಕ್ರಮದಲ್ಲಿ ಭಾಗವಹಿಸುವರು.</p>.<p>ಪುರಾತನ ದೇವಸ್ಥಾನದ ಅಭಿವೃದ್ಧಿಯನ್ನು ಮುಜರಾಯಿ ಇಲಾಖೆ, ಸರ್ಕಾರ ಮತ್ತು ದಾನಿಗಳ ಮುಖಾಂತರ ₹2 ಕೋಟಿ ವೆಚ್ಚದಲ್ಲಿ ಈಚೆಗೆ ನಡೆಸಲಾಗಿದೆ. ಸಮಿತಿಯ ಮುಖಂಡರು ಬ್ರಹ್ಮರಥೋತ್ಸವ ಸಿದ್ಧತೆಯಲ್ಲಿ ಪಾಲ್ಗೊಂಡಿದ್ದಾರೆ.</p>.<p>ಬ್ರಹ್ಮರಥೋತ್ಸವದ ಅಂಗವಾಗಿ ಕಳೆದ ಏಪ್ರಿಲ್ 29ರಿಂದ ಮೇ 10ರವರೆಗೆ ದೇವಸ್ಥಾನದಲ್ಲಿ ಎಲ್ಲಾ ಸಮುದಾಯದವರು ಸೇರಿ ವಿಶೇಷ ಪೂಜೆ, ಹವನ, ಅಭಿಷೇಕ, ಅಲಂಕಾರ ಮತ್ತಿತರ ಸೇವೆ ನಡೆಸಲಾಗುತ್ತಿದೆ.</p>.<p>12 ದಿನಗಳ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಎಸ್.ರಂಗ ಅಯ್ಯಂಗಾರ್, ತಹಶೀಲ್ದಾರ್ ಶ್ರೀನಿವಾಸ, ಪುರಸಭಾ ಅಧ್ಯಕ್ಷೆ ಶಿವಮ್ಮ ಚಾಕಳ್ಳಿ ಕೃಷ್ಣ, ರಥೋತ್ಸವ ನಿರ್ವಹಣಾ ಮಂಡಳಿಯ ಅಧ್ಯಕ್ಷ ಸಿ.ಎನ್.ನಾಗಣ್ಣ, ತಿರುಮಲಾಚಾರ್, ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಪಾಲ್ಗೊಳ್ಳುವರು.</p>.<p> ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ 12 ದಿನ ವಿಶೇಷ ಪೂಜಾ ಕಾರ್ಯಕ್ರಮ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>