<p>ಮೈಸೂರು: ಕೇಂದ್ರ ಲಲಿತಕಲಾ ಅಕಾಡೆಮಿ ಸೇರಿದಂತೆ ವಿವಿಧ ಅಕಾಡೆಮಿಗಳಲ್ಲಿ ಕಲಾವಿದರಲ್ಲದವರು ನೇಮಕವಾಗಿದ್ದಾರೆ ಎಂದು ಕೇಂದ್ರ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಚಿ.ಸು.ಕೃಷ್ಣಸೆಟ್ಟಿ ಬೇಸರ ವ್ಯಕ್ತಪಡಿಸಿದರು.</p>.<p>ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಶನಿವಾರ ಇಲ್ಲಿನ ಕಿರುರಂಗಮಂದಿರದಲ್ಲಿ ನಡೆದ ಫೆಲೋಶಿಪ್ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಲಾವಿದರಲ್ಲದವರು ಲಲಿತಕಲಾ ಅಕಾಡೆಮಿಗೆ ನೇಮಕವಾದರೂ ಕಲಾವಿದರು ವಿರೋಧಿಸದೇ ಇರುವುದು ಸರಿಯಲ್ಲ. ಎಲ್ಲರೂ ವ್ಯಕ್ತಿಕೇಂದ್ರಿತವಾಗಿರುವುದೇ ಇದಕ್ಕೆ ಕಾರಣ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಲಲಿತಕಲಾ ಅಕಾಡೆಮಿ ಸೇರಿದಂತೆ ಎಲ್ಲ ಅಕಾಡೆಮಿಗಳ ಹಾಗೂ ಕಲಾಕಾಲೇಜುಗಳ ಗುಣಮಟ್ಟ ಕುಸಿಯುತ್ತಿದೆ. ಕಲಾ ವಿಮರ್ಶೆಗೆ ದಿನಪತ್ರಿಕೆಗಳೂ ಆದ್ಯತೆ ನೀಡುತ್ತಿಲ್ಲ ಎಂದು ಬೇಸರಿಸಿದರು.</p>.<p>ತಟಸ್ಥರಾಗಿರುವುದಕ್ಕೆ ಅವಕಾಶ ಇಲ್ಲದ ಸ್ಥಿತಿ ಈಗ ನಿರ್ಮಾಣವಾಗಿದೆ. ಎಡಪಂಥೀಯ ಇಲ್ಲವೇ ಬಲಪಂಥೀಯ ಎಂದೇ ತೀರ್ಮಾನಿಸಲಾಗುತ್ತಿದೆ. ಇದು ಸರಿಯಲ್ಲ. ದೇಶದಲ್ಲಿ ಬಹುತ್ವವನ್ನು ಉಳಿಸಬೇಕಿದೆ ಎಂದು ಹೇಳಿದರು.</p>.<p>ಸಾಹಿತಿ ಪ್ರಧಾನ್ ಗುರುದತ್ ಮಾತನಾಡಿ, ‘ಮೈಸೂರು ವಿಶ್ವವಿದ್ಯಾನಿಲಯ ಸೇರಿದಂತೆ ಇತರೆ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪನೆಯಾಗಿರುವ ಲಲಿತಕಲಾ ಕಾಲೇಜುಗಳ ಸ್ಥಿತಿ ಶೋಚನೀಯವಾಗಿದೆ. ಇವುಗಳನ್ನು ಸರಿಪಡಿಸುವ ಕಾರ್ಯ ಆಗಬೇಕಿದೆ’ ಎಂದರು.</p>.<p>ಕಲಾವಿದರಾದ ವಿಜಯಪುರದ ವಿಜಯ ಸಿಂಧೂರ, ಮಂಗಳೂರಿನ ಕಂದನ್ಜಿ, ಮೈಸೂರಿನ ರಘುಪತಿ ಭಟ್ಟ ಅವರಿಗೆ ತಲಾ ₹ 2 ಲಕ್ಷ ಮೊತ್ತದ ಗೌರವ ಫೆಲೋಶಿಪ್ ಪ್ರದಾನ ಮಾಡಲಾಯಿತು. ಬೆಂಗಳೂರಿನ ಡಿಂಪಲ್ ಬಿ ಶಹ, ಮಂಜುನಾಥ ವಿ ಕಲ್ಲೇದೇವರು, ಮೈಸೂರಿನ ಕೆ.ಸುರೇಶ್, ವಿಜಯಪುರದ ನಿಂಗನಗೌಡ ಸಿ.ಪಾಟೀಲ, ಕಲಬುರ್ಗಿಯ ಜಗನ್ನಾಥ ಬೆಲ್ಲದ ಅವರಿಗೆ ಶಿಷ್ಯವೇತನ ವಿತರಿಸಲಾಯಿತು. ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಡಿ.ಮಹೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕೇಂದ್ರ ಲಲಿತಕಲಾ ಅಕಾಡೆಮಿ ಸೇರಿದಂತೆ ವಿವಿಧ ಅಕಾಡೆಮಿಗಳಲ್ಲಿ ಕಲಾವಿದರಲ್ಲದವರು ನೇಮಕವಾಗಿದ್ದಾರೆ ಎಂದು ಕೇಂದ್ರ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಚಿ.ಸು.ಕೃಷ್ಣಸೆಟ್ಟಿ ಬೇಸರ ವ್ಯಕ್ತಪಡಿಸಿದರು.</p>.<p>ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಶನಿವಾರ ಇಲ್ಲಿನ ಕಿರುರಂಗಮಂದಿರದಲ್ಲಿ ನಡೆದ ಫೆಲೋಶಿಪ್ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಲಾವಿದರಲ್ಲದವರು ಲಲಿತಕಲಾ ಅಕಾಡೆಮಿಗೆ ನೇಮಕವಾದರೂ ಕಲಾವಿದರು ವಿರೋಧಿಸದೇ ಇರುವುದು ಸರಿಯಲ್ಲ. ಎಲ್ಲರೂ ವ್ಯಕ್ತಿಕೇಂದ್ರಿತವಾಗಿರುವುದೇ ಇದಕ್ಕೆ ಕಾರಣ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಲಲಿತಕಲಾ ಅಕಾಡೆಮಿ ಸೇರಿದಂತೆ ಎಲ್ಲ ಅಕಾಡೆಮಿಗಳ ಹಾಗೂ ಕಲಾಕಾಲೇಜುಗಳ ಗುಣಮಟ್ಟ ಕುಸಿಯುತ್ತಿದೆ. ಕಲಾ ವಿಮರ್ಶೆಗೆ ದಿನಪತ್ರಿಕೆಗಳೂ ಆದ್ಯತೆ ನೀಡುತ್ತಿಲ್ಲ ಎಂದು ಬೇಸರಿಸಿದರು.</p>.<p>ತಟಸ್ಥರಾಗಿರುವುದಕ್ಕೆ ಅವಕಾಶ ಇಲ್ಲದ ಸ್ಥಿತಿ ಈಗ ನಿರ್ಮಾಣವಾಗಿದೆ. ಎಡಪಂಥೀಯ ಇಲ್ಲವೇ ಬಲಪಂಥೀಯ ಎಂದೇ ತೀರ್ಮಾನಿಸಲಾಗುತ್ತಿದೆ. ಇದು ಸರಿಯಲ್ಲ. ದೇಶದಲ್ಲಿ ಬಹುತ್ವವನ್ನು ಉಳಿಸಬೇಕಿದೆ ಎಂದು ಹೇಳಿದರು.</p>.<p>ಸಾಹಿತಿ ಪ್ರಧಾನ್ ಗುರುದತ್ ಮಾತನಾಡಿ, ‘ಮೈಸೂರು ವಿಶ್ವವಿದ್ಯಾನಿಲಯ ಸೇರಿದಂತೆ ಇತರೆ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪನೆಯಾಗಿರುವ ಲಲಿತಕಲಾ ಕಾಲೇಜುಗಳ ಸ್ಥಿತಿ ಶೋಚನೀಯವಾಗಿದೆ. ಇವುಗಳನ್ನು ಸರಿಪಡಿಸುವ ಕಾರ್ಯ ಆಗಬೇಕಿದೆ’ ಎಂದರು.</p>.<p>ಕಲಾವಿದರಾದ ವಿಜಯಪುರದ ವಿಜಯ ಸಿಂಧೂರ, ಮಂಗಳೂರಿನ ಕಂದನ್ಜಿ, ಮೈಸೂರಿನ ರಘುಪತಿ ಭಟ್ಟ ಅವರಿಗೆ ತಲಾ ₹ 2 ಲಕ್ಷ ಮೊತ್ತದ ಗೌರವ ಫೆಲೋಶಿಪ್ ಪ್ರದಾನ ಮಾಡಲಾಯಿತು. ಬೆಂಗಳೂರಿನ ಡಿಂಪಲ್ ಬಿ ಶಹ, ಮಂಜುನಾಥ ವಿ ಕಲ್ಲೇದೇವರು, ಮೈಸೂರಿನ ಕೆ.ಸುರೇಶ್, ವಿಜಯಪುರದ ನಿಂಗನಗೌಡ ಸಿ.ಪಾಟೀಲ, ಕಲಬುರ್ಗಿಯ ಜಗನ್ನಾಥ ಬೆಲ್ಲದ ಅವರಿಗೆ ಶಿಷ್ಯವೇತನ ವಿತರಿಸಲಾಯಿತು. ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಡಿ.ಮಹೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>