ಭೂರಹಿತ ಕೃಷಿ ಕುಟುಂಬಕ್ಕೆ ಸೇರಿದ ಕೆಂಪರಾಜು ಅವರ ತಂದೆಯೂ ಗುತ್ತಿಗೆ ಆಧಾರದ ಮೇಲೆ ಭೂಮಿ ಪಡೆದು ಭತ್ತ, ರಾಗಿ, ಹತ್ತಿ, ತೊಗರಿ, ಜೋಳ, ಅವರೆ ಬೆಳೆಗಳನ್ನು ಬೆಳೆಯುತ್ತಿದ್ದರು. ತಂದೆಯೊಂದಿಗೆ ತೊಡಗಿಸಿಕೊಂಡಿದ್ದ ಕೆಂಪರಾಜು ಅವರಿಗೆ ಶಿಕ್ಷಕ ವೃತ್ತಿ ದೊರಕಿತು. ನಂತರ, ಕೃಷಿಯಿಂದ ಕೊಂಚ ದೂರ ಉಳಿದಿದ್ದ ಅವರು ಲಾಕ್ಡೌನ್ ಸಮಯದಲ್ಲಿ ಮತ್ತೆ ಕೃಷಿಯತ್ತ ಮುಖ ಮಾಡಿದರು.