<p><strong>ಮೈಸೂರು: </strong>'ದೇವಿ ಚಾಮುಂಡೇಶ್ವರಿ ಎಲ್ಲರಿಗೂ ಒಳಿತು ಮಾಡಿದರೆ, ಮಳೆ ಬೆಳೆ ಪರಿಸ್ಥಿತಿ ಸುಧಾರಿಸಿದರೆ ಮುಂದಿನ ವರ್ಷ ಅದ್ಧೂರಿ ದಸರಾ ಹಮ್ಮಿಕೊಳ್ಳಲು ಸರ್ಕಾರ ಸಿದ್ಧವಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಚಾಮುಂಡಿಬೆಟ್ಟದಲ್ಲಿ ಗುರುವಾರ<br />ದಸರಾ ಉತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ' ದಸರಾ ಉತ್ಸವವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ಟೂರಿಸಂ ಸರ್ಕಿಟ್ ಮಾಡಲು ಪ್ರಯತ್ನಿಸಲಾಗುವುದು. ಆ ಕ್ಷೇತ್ರದ ಎಲ್ಲ ಪರಿಣಿತರ ಸಹಕಾರ ಪಡೆಯಲಾಗುವುದು' ಎಂದರು.</p>.<p>'ನಾಡದೇವತೆ ಚಾಮುಂಡೇಶ್ವರಿಯ ಸೇವೆ ಮಾಡುವ ಸದವಕಾಶ ದೊರಕಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ನಾಡಿನ ಜನತೆಯನ್ನು ಎಲ್ಲ ಕಷ್ಟದಿಂದ ದೇವಿ ಕಾಪಾಡಲಿ ಎಂದು ಪ್ರಾರ್ಥಿಸಿರುವೆ. ಕಷ್ಟ ಕೊಡುವುದಿದ್ದರೆ ನನಗೇ ಕೊಡಲಿ' ಎಂದು ಹೇಳಿದರು.</p>.<p>'ನಾಡಿಗೆ ತಮ್ಮದೇ ವಿಶಿಷ್ಟ ಕೊಡುಗೆ ನೀಡಿರುವ ಕೃಷ್ಣ ಅವರಿಂದಲೇ ನಾಡ ಹಬ್ಬವನ್ನು ಉದ್ಘಾಟಿಸಬೇಕು ಎಂದು, ದಸರೆ ಸಿದ್ಧತೆಯ ಮೊದಲ ಸಭೆಯ ಸಂದರ್ಭದಲ್ಲೇ ನಿರ್ಧರಿಸಿದ್ದೆ. ಆದರೆ ಸಮಯಾವಕಾಶ ಪಡೆದು ಅವರ ಹೆಸರು ಘೋಷಿಸಿದೆ' ಎಂದರು.</p>.<p>'ನಾಡಹಬ್ಬವನ್ನು ಉದ್ಘಾಟಿಸಿದವರೆಲ್ಲರೂ ಸರ್ವಶ್ರೇಷ್ಟರು. ಕೃಷ್ಣ ಅವರ ಆಯ್ಕೆಯನ್ನು ಕನ್ನಡ ಲೋಕ ಸ್ವಾಗತಿಸಿ, ಜನ ಒಪ್ಪಿಗೆಯ ಮುದ್ರೆ ನೀಡಿದ್ದು ಸಂತೋಷ ತಂದಿದೆ. ಇದು ನಮ್ಮ ಆಯ್ಕೆಯ ಹೆಗ್ಗಳಿಕೆ ಅಲ್ಲ. ಬದಲಿಗೆ, ಕೃಷ್ಣ ಅವರ ವ್ಯಕ್ತಿತ್ವದ ಹೆಗ್ಗಳಿಕೆ' ಎಂದು ಬಣ್ಣಿಸಿದರು.</p>.<p>'ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ ಜಾರಿಗೆ ಬಂದ ಯಶಸ್ವಿನಿ ಯೋಜನೆ ಸ್ಥಗಿತಗೊಂಡಿದ್ದು,<br />ಹಣಕಾಸು ಪರಿಸ್ಥಿತಿ ಸುಧಾರಣೆಯಾದರೆ ಮತ್ತೆ ಚಾಲನೆಗೊಳಿಸಲಾಗುವುದು. ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿಯೇ ಜಾರಿಗೊಳಿಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ಉತ್ತೇಜನ ನೀಡಲಾಯಿತು. ಐಟಿ, ಬಿಟಿ ಉದ್ಯಮ ಕ್ಷೇತ್ರದಲ್ಲೂ ಅವರ ಹೆಜ್ಜೆ ಗುರುತುಗಳಿವೆ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>'ದೇವಿ ಚಾಮುಂಡೇಶ್ವರಿ ಎಲ್ಲರಿಗೂ ಒಳಿತು ಮಾಡಿದರೆ, ಮಳೆ ಬೆಳೆ ಪರಿಸ್ಥಿತಿ ಸುಧಾರಿಸಿದರೆ ಮುಂದಿನ ವರ್ಷ ಅದ್ಧೂರಿ ದಸರಾ ಹಮ್ಮಿಕೊಳ್ಳಲು ಸರ್ಕಾರ ಸಿದ್ಧವಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಚಾಮುಂಡಿಬೆಟ್ಟದಲ್ಲಿ ಗುರುವಾರ<br />ದಸರಾ ಉತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ' ದಸರಾ ಉತ್ಸವವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ಟೂರಿಸಂ ಸರ್ಕಿಟ್ ಮಾಡಲು ಪ್ರಯತ್ನಿಸಲಾಗುವುದು. ಆ ಕ್ಷೇತ್ರದ ಎಲ್ಲ ಪರಿಣಿತರ ಸಹಕಾರ ಪಡೆಯಲಾಗುವುದು' ಎಂದರು.</p>.<p>'ನಾಡದೇವತೆ ಚಾಮುಂಡೇಶ್ವರಿಯ ಸೇವೆ ಮಾಡುವ ಸದವಕಾಶ ದೊರಕಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ನಾಡಿನ ಜನತೆಯನ್ನು ಎಲ್ಲ ಕಷ್ಟದಿಂದ ದೇವಿ ಕಾಪಾಡಲಿ ಎಂದು ಪ್ರಾರ್ಥಿಸಿರುವೆ. ಕಷ್ಟ ಕೊಡುವುದಿದ್ದರೆ ನನಗೇ ಕೊಡಲಿ' ಎಂದು ಹೇಳಿದರು.</p>.<p>'ನಾಡಿಗೆ ತಮ್ಮದೇ ವಿಶಿಷ್ಟ ಕೊಡುಗೆ ನೀಡಿರುವ ಕೃಷ್ಣ ಅವರಿಂದಲೇ ನಾಡ ಹಬ್ಬವನ್ನು ಉದ್ಘಾಟಿಸಬೇಕು ಎಂದು, ದಸರೆ ಸಿದ್ಧತೆಯ ಮೊದಲ ಸಭೆಯ ಸಂದರ್ಭದಲ್ಲೇ ನಿರ್ಧರಿಸಿದ್ದೆ. ಆದರೆ ಸಮಯಾವಕಾಶ ಪಡೆದು ಅವರ ಹೆಸರು ಘೋಷಿಸಿದೆ' ಎಂದರು.</p>.<p>'ನಾಡಹಬ್ಬವನ್ನು ಉದ್ಘಾಟಿಸಿದವರೆಲ್ಲರೂ ಸರ್ವಶ್ರೇಷ್ಟರು. ಕೃಷ್ಣ ಅವರ ಆಯ್ಕೆಯನ್ನು ಕನ್ನಡ ಲೋಕ ಸ್ವಾಗತಿಸಿ, ಜನ ಒಪ್ಪಿಗೆಯ ಮುದ್ರೆ ನೀಡಿದ್ದು ಸಂತೋಷ ತಂದಿದೆ. ಇದು ನಮ್ಮ ಆಯ್ಕೆಯ ಹೆಗ್ಗಳಿಕೆ ಅಲ್ಲ. ಬದಲಿಗೆ, ಕೃಷ್ಣ ಅವರ ವ್ಯಕ್ತಿತ್ವದ ಹೆಗ್ಗಳಿಕೆ' ಎಂದು ಬಣ್ಣಿಸಿದರು.</p>.<p>'ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ ಜಾರಿಗೆ ಬಂದ ಯಶಸ್ವಿನಿ ಯೋಜನೆ ಸ್ಥಗಿತಗೊಂಡಿದ್ದು,<br />ಹಣಕಾಸು ಪರಿಸ್ಥಿತಿ ಸುಧಾರಣೆಯಾದರೆ ಮತ್ತೆ ಚಾಲನೆಗೊಳಿಸಲಾಗುವುದು. ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿಯೇ ಜಾರಿಗೊಳಿಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ಉತ್ತೇಜನ ನೀಡಲಾಯಿತು. ಐಟಿ, ಬಿಟಿ ಉದ್ಯಮ ಕ್ಷೇತ್ರದಲ್ಲೂ ಅವರ ಹೆಜ್ಜೆ ಗುರುತುಗಳಿವೆ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>