<p><strong>ಮೈಸೂರು:</strong> ‘ಕಾನೂನು ಮತ್ತು ಸುವ್ಯವಸ್ಥೆ ಅರ್ಥೈಸಿಕೊಂಡು ದುರ್ಬಲ ಪರಿಸರವನ್ನು ಉತ್ತಮವಾಗಿ ಕಟ್ಟುವ ಕೆಲಸವಾಗಬೇಕಿದೆ’ ಎಂದು ವಿಜಯನಗರ ಉಪ ವಿಭಾಗದ ಎಸಿಪಿ ರವಿಪ್ರಸಾದ್ ತಿಳಿಸಿದರು.</p>.<p>ಒಡನಾಡಿ ಸೇವಾ ಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ಗಂಡು ಮಕ್ಕಳ ಸಂವೇದನಾಶೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಕ್ಷಣ ಮತ್ತು ಸಂವೇದನಾಶೀಲತೆಯಿಂದ ಪಡೆದ ಜ್ಞಾನವು ಗುರಿ ಮುಟ್ಟಲು ಸಹಾಯ ಮಾಡುತ್ತದೆ. ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನದ ದುರುಪಯೋಗ ಹೆಚ್ಚುತ್ತಿದೆ. ಇದರಿಂದ ಯುವ ಸಮೂಹ ದಾರಿ ತಪ್ಪುತ್ತಿದ್ದು, ಮೊಬೈಲ್ ಫೋನ್ ಅಥವಾ ಲ್ಯಾಪ್ಟಾಪ್ಗಳನ್ನು ಉತ್ತಮ ಮಾಹಿತಿ ಸಂಗ್ರಹಿಸಲಷ್ಟೇ ಬಳಸಬೇಕು’ ಎಂದು ಸಲಹೆ ನೀಡಿದರು.</p>.<p>‘ಗಂಡು ಮಕ್ಕಳು ಕೂಡ ಲೈಂಗಿಕ ಶೋಷಣೆಗೆ ಒಳಗಾಗುತ್ತಿರುವುದು ವಿಷಾದನೀಯ. ಹೆಣ್ಣು ಹಾಗೂ ಗಂಡು ಮಕ್ಕಳು ಸ್ವರಕ್ಷಣಾ ತಂತ್ರಗಳನ್ನು ಕಲಿಯಬೇಕು’ ಎಂದರು.</p>.<p>ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರವಿಚಂದ್ರನ್ ಮಾತನಾಡಿ, ‘ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಮೌನವಾಗಿ ಸಹಿಸಿಕೊಳ್ಳಬಾರದು. ಪ್ರಶ್ನಿಸುವ ಹಾಗೂ ಪ್ರತಿಭಟಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ಇದರಿಂದ ಭವಿಷ್ಯಕ್ಕೆ ಸಹಾಯಕವಾಗುತ್ತದೆ’ ಎಂದು ಹೇಳಿದರು.</p>.<p>ಸಂಸ್ಥೆಯು ಆಯೋಜಿಸಿದ್ದ ಇಂಗ್ಲಿಷ್ ಮತ್ತು ಕಂಪ್ಯೂಟರ್ ತರಬೇತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.</p>.<p>ಒಡನಾಡಿ ಸಂಸ್ಥೆ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶುರಾಮ್, ಸಿಬ್ಬಂದಿಗಳಾದ ಪ್ರದೀಪ್, ಶಶಾಂಕ್, ಬಾಲ ಕುಮಾರ್, ನಾಜಿಯಾ, ಚಂದನ ಹಾಗೂ ಗ್ರಂಥಾಲಯ ಪಾಲಕಿ ಗೀತಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕಾನೂನು ಮತ್ತು ಸುವ್ಯವಸ್ಥೆ ಅರ್ಥೈಸಿಕೊಂಡು ದುರ್ಬಲ ಪರಿಸರವನ್ನು ಉತ್ತಮವಾಗಿ ಕಟ್ಟುವ ಕೆಲಸವಾಗಬೇಕಿದೆ’ ಎಂದು ವಿಜಯನಗರ ಉಪ ವಿಭಾಗದ ಎಸಿಪಿ ರವಿಪ್ರಸಾದ್ ತಿಳಿಸಿದರು.</p>.<p>ಒಡನಾಡಿ ಸೇವಾ ಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ಗಂಡು ಮಕ್ಕಳ ಸಂವೇದನಾಶೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಕ್ಷಣ ಮತ್ತು ಸಂವೇದನಾಶೀಲತೆಯಿಂದ ಪಡೆದ ಜ್ಞಾನವು ಗುರಿ ಮುಟ್ಟಲು ಸಹಾಯ ಮಾಡುತ್ತದೆ. ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನದ ದುರುಪಯೋಗ ಹೆಚ್ಚುತ್ತಿದೆ. ಇದರಿಂದ ಯುವ ಸಮೂಹ ದಾರಿ ತಪ್ಪುತ್ತಿದ್ದು, ಮೊಬೈಲ್ ಫೋನ್ ಅಥವಾ ಲ್ಯಾಪ್ಟಾಪ್ಗಳನ್ನು ಉತ್ತಮ ಮಾಹಿತಿ ಸಂಗ್ರಹಿಸಲಷ್ಟೇ ಬಳಸಬೇಕು’ ಎಂದು ಸಲಹೆ ನೀಡಿದರು.</p>.<p>‘ಗಂಡು ಮಕ್ಕಳು ಕೂಡ ಲೈಂಗಿಕ ಶೋಷಣೆಗೆ ಒಳಗಾಗುತ್ತಿರುವುದು ವಿಷಾದನೀಯ. ಹೆಣ್ಣು ಹಾಗೂ ಗಂಡು ಮಕ್ಕಳು ಸ್ವರಕ್ಷಣಾ ತಂತ್ರಗಳನ್ನು ಕಲಿಯಬೇಕು’ ಎಂದರು.</p>.<p>ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರವಿಚಂದ್ರನ್ ಮಾತನಾಡಿ, ‘ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಮೌನವಾಗಿ ಸಹಿಸಿಕೊಳ್ಳಬಾರದು. ಪ್ರಶ್ನಿಸುವ ಹಾಗೂ ಪ್ರತಿಭಟಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ಇದರಿಂದ ಭವಿಷ್ಯಕ್ಕೆ ಸಹಾಯಕವಾಗುತ್ತದೆ’ ಎಂದು ಹೇಳಿದರು.</p>.<p>ಸಂಸ್ಥೆಯು ಆಯೋಜಿಸಿದ್ದ ಇಂಗ್ಲಿಷ್ ಮತ್ತು ಕಂಪ್ಯೂಟರ್ ತರಬೇತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.</p>.<p>ಒಡನಾಡಿ ಸಂಸ್ಥೆ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶುರಾಮ್, ಸಿಬ್ಬಂದಿಗಳಾದ ಪ್ರದೀಪ್, ಶಶಾಂಕ್, ಬಾಲ ಕುಮಾರ್, ನಾಜಿಯಾ, ಚಂದನ ಹಾಗೂ ಗ್ರಂಥಾಲಯ ಪಾಲಕಿ ಗೀತಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>