<p><strong>ಮೈಸೂರು: </strong>ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಗುರುವಾರ ಚಿರತೆಯೊಂದು ದಾಳಿ ನಡೆಸಿ ಯುವತಿಯನ್ನು ಕೊಂದು ಹಾಕಿದೆ.</p>.<p>ಗ್ರಾಮದ ಮೇಘನಾ (22) ಮೃತ ಯುವತಿ. ಸಂಜೆ ವೇಳೆ ಮನೆಯ ಹಿತ್ತಲಿಗೆ ತೆರಳಿದ್ದಾಗ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡ ಅವರನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಪ್ರತಿಭಟನೆ: ‘ಕಳೆದ ತಿಂಗಳಷ್ಟೇ ಚಿರತೆಯು ಎಂ.ಎಲ್.ಹುಂಡಿ ಗ್ರಾಮದ ಚನ್ನಮಲ್ಲು ಎಂಬ ಯುವಕನನ್ನು ಕೊಂದಿತ್ತು. ಇದೀಗ ಯುವತಿಯ ಬಲಿ ಪಡೆದಿದೆ. ನಿರಂತರ ದಾಳಿ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕ್ರಮವಹಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಆಗಮಿಸಿ ಡಿವೈಎಸ್ಪಿ ಗೋವಿಂದರಾಜು, ಪಿಎಸ್ಐ ತಿರುಮಲ್ಲೇಶ್, ಸಿಬ್ಬಂದಿ ಡಾ.ಭಾರತಿ, ರೇವಣ್ಣ ಗ್ರಾಮಸ್ಥರ ಮನವಿ ಆಲಿಸಿದರು. ಚಿರತೆಯು ಗ್ರಾಮದ ಹೊರವಲಯದ ರಸ್ತೆಯಲ್ಲಿ ಓಡಾಡುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಗುರುವಾರ ಚಿರತೆಯೊಂದು ದಾಳಿ ನಡೆಸಿ ಯುವತಿಯನ್ನು ಕೊಂದು ಹಾಕಿದೆ.</p>.<p>ಗ್ರಾಮದ ಮೇಘನಾ (22) ಮೃತ ಯುವತಿ. ಸಂಜೆ ವೇಳೆ ಮನೆಯ ಹಿತ್ತಲಿಗೆ ತೆರಳಿದ್ದಾಗ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡ ಅವರನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಪ್ರತಿಭಟನೆ: ‘ಕಳೆದ ತಿಂಗಳಷ್ಟೇ ಚಿರತೆಯು ಎಂ.ಎಲ್.ಹುಂಡಿ ಗ್ರಾಮದ ಚನ್ನಮಲ್ಲು ಎಂಬ ಯುವಕನನ್ನು ಕೊಂದಿತ್ತು. ಇದೀಗ ಯುವತಿಯ ಬಲಿ ಪಡೆದಿದೆ. ನಿರಂತರ ದಾಳಿ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕ್ರಮವಹಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಆಗಮಿಸಿ ಡಿವೈಎಸ್ಪಿ ಗೋವಿಂದರಾಜು, ಪಿಎಸ್ಐ ತಿರುಮಲ್ಲೇಶ್, ಸಿಬ್ಬಂದಿ ಡಾ.ಭಾರತಿ, ರೇವಣ್ಣ ಗ್ರಾಮಸ್ಥರ ಮನವಿ ಆಲಿಸಿದರು. ಚಿರತೆಯು ಗ್ರಾಮದ ಹೊರವಲಯದ ರಸ್ತೆಯಲ್ಲಿ ಓಡಾಡುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>