ರೈತ ಮುಖಂಡ ಕಳ್ಳೀಪುರ ಮಹದೇವಸ್ವಾಮಿ ಮಾತನಾಡಿ, ‘ಈ ಹಿಂದೆ ಬೆಟ್ಟದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಬಲಿ ಪಡೆದಿದ್ದ ಚಿರತೆಯನ್ನು ಸೆರೆಹಿಡಿದ ನಂತರ ಚಿರತೆಗಳ ಹಾವಳಿ ಕಡಿಮೆಯಾಗಿತ್ತು. ಆದರೆ, ಈಗ ಮತ್ತೆ ಹಸುವನ್ನು ಕೊಂದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಈ ಭಾಗದಲ್ಲಿ ಚಿರತೆ ಸೆರೆಯ ಟಾಸ್ಕ್ ಫೋರ್ಸ್ ತಂಡವನ್ನು ನಿಯೋಜಿಸಬೇಕು. ಚಿರತೆ ಹಾವಳಿಯನ್ನು ತಪ್ಪಿಸಬೇಕು. ಹಸು ಮಾಲೀಕರಿಗೆ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.