ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ದಾಳಿಗೆ ಮೇಕೆ ಸಾವು

Published 28 ಜುಲೈ 2023, 4:34 IST
Last Updated 28 ಜುಲೈ 2023, 4:34 IST
ಅಕ್ಷರ ಗಾತ್ರ

ಹನಗೋಡು: ಹನಗೋಡು ಹೋಬಳಿಯ ಬಿಲ್ಲೇನ ಹೊಸಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿದ್ದ ಮೇಕೆಯನ್ನು ಬುಧವಾರ ಚಿರತೆ ಹೊತ್ತೊಯ್ದು ತಿಂದು ಹಾಕಿದೆ.

ಗ್ರಾಮದ ಕಮಲಮ್ಮ ಶಂಕರಶೆಟ್ಟಿ ಅವರು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಮೇಕೆಯನ್ನು ಪಕ್ಕದ ಬಾಳೆ ತೋಟಕ್ಕೆ ಹೊತ್ತೊಯ್ದು ತಿಂದು ಹಾಕಿದೆ. ಘಟನಾ ಸ್ಥಳಕ್ಕೆ ಕಚುವಿನಹಳ್ಳಿ ಶ್ರೇಣಿಯ ಡಿಆರ್‌ಎಫ್‌ಒ ವೀರಭದ್ರಯ್ಯ ಮತ್ತು ಸಿಬ್ಬಂದಿ ಭೇಟಿ ಪರಿಶೀಲಿಸಿದರು.

ಬೋನ್ ಇಡಲು ಮನವಿ: ಚಿರತೆ ದಾಳಿಯಿಂದ ಈ ಭಾಗಗಳಲ್ಲಿ ಹಲವಾರು ಜಾನುವಾರುಗಳು ಬಲಿಯಾಗಿದ್ದು, ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT