ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಬೋನಿಗೆ ಬಿದ್ದ ಚಿರತೆ

Last Updated 6 ಫೆಬ್ರುವರಿ 2023, 6:27 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ಶ್ಯಾದನಹಳ್ಳಿಯ ತೋಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಭಾನುವಾರ ರಾತ್ರಿ‌ ಮೂರು ವರ್ಷದ ಗಂಡು ಚಿರತೆ ಬಿದ್ದಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಕ್ಯಾಂಪಸ್ ಹಿಂಭಾಗದಲ್ಲಿ ಈ ತೋಟವಿದೆ. ಇಲಾಖೆಯು ವಾರದ ಹಿಂದೆಯಷ್ಟೇ ಬೋನು ಇರಿಸಿತ್ತು.

ಆರ್‌ಎಫ್ಒ ಕೆ.ಸುರೇಂದ್ರ ನೇತೃತ್ವದ ‌ಸಿಬ್ಬಂದಿ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಸೋಮವಾರ ರವಾನಿಸಿದರು.

ವರ್ಷದ ಹಿಂದೆ ಆರ್ ಬಿಐ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಆದರೆ, ಪತ್ತೆಯಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT