ಮಾಜಿ ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಮಾತನಾಡಿ, ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಬಹುಕೋಟಿ ಅಕ್ರಮ ಬಯಲಿಗೆ ಎಳೆದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಯಾರೇ ತಪ್ಪು ಮಾಡಿದ್ದರೂ ತನಿಖೆ ಮಾಡಿ ಶಿಕ್ಷೆ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಆದರೂ ಅವರ ವಿರುದ್ಧ ಅಪವಾದ ಮಾಡಲಾಗುತ್ತಿದೆ’ ಎಂದರು.