<p><strong>ಮೈಸೂರು</strong>: ‘ಹಾಸನದ ಪೆನ್ಡ್ರೈವ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿ ಜೆಡಿಎಸ್ ನಗರ (ಜಿಲ್ಲಾ) ಘಟಕದ ಮುಖಂಡರು ಹಾಗೂ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ರಸ್ತೆ ತಡೆ ನಡೆಸಿದರು.</p>.<p>ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಮಾತನಾಡಿ, ‘ಎಸ್ಐಟಿಯ ಕೆಲ ಅಧಿಕಾರಿಗಳು ಕಾನೂನಿನಡಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಸಂತ್ರಸ್ತೆಯರು ಎಂದು ವಿಚಾರಣೆಗೆ ಕರೆದೊಯ್ದವರನ್ನು ಇಲ್ಲಿಯವರೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸದೆ, ಮಹಜರು ನಡೆಸದೆ, ಸೆಕ್ಷನ್ 164 ವಿಧಿಸಿಲ್ಲ ಯಾಕೆ? ಇವು ಅಧಿಕಾರಿಗಳ ಬಗೆಗಿನ ಅನುಮಾನಕ್ಕೆ ಕಾರಣವಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ನಮ್ಮ ಪ್ರಾದೇಶಿಕ ಪಕ್ಷವನ್ನು ಪೊಲೀಸರ ಮೂಲಕ ಮುಗಿಸುವ ಹುನ್ನಾರವನ್ನು ಕಾಂಗ್ರೆಸ್ನ ಕೆಲ ನಾಯಕರು ಮಾಡುತ್ತಿದ್ದಾರೆ. ಈ ಸಂಚಿನ ಬಗ್ಗೆ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದೇ ಆದರೆ ವಿಡಿಯೊ ಮಾಡಿ, ರಾಜಕೀಯ ಲಾಭಕ್ಕಾಗಿ ಪೆನ್ಡ್ರೈವ್ ಹಂಚಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಿ. ಅವರ ವಿಚಾರಣೆ ನಡೆಸಿ ಪ್ರಕರಣದ ಸತ್ಯಾಸತ್ಯತೆ ರಾಜ್ಯದ ಜನರಿಗೆ ತಿಳಿಯಲಿ’ ಎಂದು ಆಗ್ರಹಿಸಿದರು.</p>.<p>ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ‘ಪೆನ್ಡ್ರೈವ್ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಜಾಲ ಹೊಂದಿದೆ. ಚೆನ್ನೈ, ಮಲೇಷ್ಯಾಕ್ಕೆ ತೆರಳಿ ಪೆನ್ಡ್ರೈವ್ ಸಿದ್ಧಪಡಿಸಿದ ಕುರಿತು, ಕಾರು ಚಾಲಕ ಕಾರ್ತಿಕ್ ಹಾಗೂ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಗೌಡ ಅವರ ನಡುವಿನ ಸಂಬಂಧದ ಕುರಿತು ಕೂಲಂಕಷವಾಗಿ ತನಿಖೆ ನಡೆಸಲು ಎಸ್ಐಟಿಗೆ ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಒಪ್ಪಿಸಲಿ’ ಎಂದು ಒತ್ತಾಯಿಸಿದರು.</p>.<p>ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು. ಪ್ರತಿಭಟನಾ ಬರಹವುಳ್ಳ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.</p>.<p>ಶಾಸಕ ಜಿ.ಡಿ.ಹರೀಶ್ ಗೌಡ, ಪಾಲಿಕೆ ಮಾಜಿ ಸದಸ್ಯೆ ಪ್ರೇಮಾ ಶಂಕರೇಗೌಡ ಹಾಗೂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಹಾಸನದ ಪೆನ್ಡ್ರೈವ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿ ಜೆಡಿಎಸ್ ನಗರ (ಜಿಲ್ಲಾ) ಘಟಕದ ಮುಖಂಡರು ಹಾಗೂ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ರಸ್ತೆ ತಡೆ ನಡೆಸಿದರು.</p>.<p>ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಮಾತನಾಡಿ, ‘ಎಸ್ಐಟಿಯ ಕೆಲ ಅಧಿಕಾರಿಗಳು ಕಾನೂನಿನಡಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಸಂತ್ರಸ್ತೆಯರು ಎಂದು ವಿಚಾರಣೆಗೆ ಕರೆದೊಯ್ದವರನ್ನು ಇಲ್ಲಿಯವರೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸದೆ, ಮಹಜರು ನಡೆಸದೆ, ಸೆಕ್ಷನ್ 164 ವಿಧಿಸಿಲ್ಲ ಯಾಕೆ? ಇವು ಅಧಿಕಾರಿಗಳ ಬಗೆಗಿನ ಅನುಮಾನಕ್ಕೆ ಕಾರಣವಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ನಮ್ಮ ಪ್ರಾದೇಶಿಕ ಪಕ್ಷವನ್ನು ಪೊಲೀಸರ ಮೂಲಕ ಮುಗಿಸುವ ಹುನ್ನಾರವನ್ನು ಕಾಂಗ್ರೆಸ್ನ ಕೆಲ ನಾಯಕರು ಮಾಡುತ್ತಿದ್ದಾರೆ. ಈ ಸಂಚಿನ ಬಗ್ಗೆ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದೇ ಆದರೆ ವಿಡಿಯೊ ಮಾಡಿ, ರಾಜಕೀಯ ಲಾಭಕ್ಕಾಗಿ ಪೆನ್ಡ್ರೈವ್ ಹಂಚಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಿ. ಅವರ ವಿಚಾರಣೆ ನಡೆಸಿ ಪ್ರಕರಣದ ಸತ್ಯಾಸತ್ಯತೆ ರಾಜ್ಯದ ಜನರಿಗೆ ತಿಳಿಯಲಿ’ ಎಂದು ಆಗ್ರಹಿಸಿದರು.</p>.<p>ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ‘ಪೆನ್ಡ್ರೈವ್ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಜಾಲ ಹೊಂದಿದೆ. ಚೆನ್ನೈ, ಮಲೇಷ್ಯಾಕ್ಕೆ ತೆರಳಿ ಪೆನ್ಡ್ರೈವ್ ಸಿದ್ಧಪಡಿಸಿದ ಕುರಿತು, ಕಾರು ಚಾಲಕ ಕಾರ್ತಿಕ್ ಹಾಗೂ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಗೌಡ ಅವರ ನಡುವಿನ ಸಂಬಂಧದ ಕುರಿತು ಕೂಲಂಕಷವಾಗಿ ತನಿಖೆ ನಡೆಸಲು ಎಸ್ಐಟಿಗೆ ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಒಪ್ಪಿಸಲಿ’ ಎಂದು ಒತ್ತಾಯಿಸಿದರು.</p>.<p>ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು. ಪ್ರತಿಭಟನಾ ಬರಹವುಳ್ಳ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.</p>.<p>ಶಾಸಕ ಜಿ.ಡಿ.ಹರೀಶ್ ಗೌಡ, ಪಾಲಿಕೆ ಮಾಜಿ ಸದಸ್ಯೆ ಪ್ರೇಮಾ ಶಂಕರೇಗೌಡ ಹಾಗೂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>