<p><strong>ಮೈಸೂರು:</strong> ‘ಹಿಂದೂ ಧರ್ಮದ ಕುರಿತಂತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಜಮಾಯಿಸಿ ಸತೀಶ ವಿರುದ್ಧ ಘೋಷಣೆ ಕೂಗಿದರು. ‘ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು, ಜನರ ಭಾವನೆಗಳಿಗೆ ಬೇಸರ ಮೂಡಿಸಿದೆ. ಆ ಶಾಸಕರ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಶಾಸಕ ಎಲ್.ನಾಗೇಂದ್ರ ಮಾತನಾಡಿ, ‘ಧರ್ಮದ ವಿರುದ್ಧ ಹೇಳಿಕೆ ಕೊಟ್ಟು, ಮತ ಪಡೆಯುವ ಕೆಲಸ ಮಾಡಿರುವುದನ್ನು ನಾವು ಖಂಡಿಸುತ್ತೇವೆ. ಜಾರಕಿಹೊಳಿ ಶಾಲೆಯಲ್ಲಿ ಮತ್ತು ಇತರ ದಾಖಲೆಗಳಲ್ಲಿ ಯಾವ ಧರ್ಮವೆಂದು ನಮೂದಿಸಿದ್ದಾರೆ ಎಂದು ಸ್ಪಷ್ಟಪಡಿಸಲಿ’ ಎಂದು ಕಿಡಿಕಾರಿದರು.</p>.<p>ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಮಾತನಾಡಿ, ‘ಹಿಂದೂ ನೆಲದಲ್ಲಿದ್ದು, ಸಹೋದರರಂತೆ ಬಾಳುತ್ತಿರುವ ಸನ್ನಿವೇಶದಲ್ಲಿ ಅರೆಬರೆ ತಿಳಿವಳಿಕೆಯಿಂದ ಅಜ್ಞಾನಿ ಸತೀಶ ಹಿಂದೂ ಧರ್ಮದ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಿಜೆಪಿ ಮಾತ್ರ ಅಲ್ಲ ಪ್ರತಿ ಹಿಂದು ಕೂಡ ಖಂಡಿಸುತ್ತಿದ್ದಾರೆ’ ಎಂದರು.</p>.<p>ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರ, ವಕ್ತಾರ ಮಹೇಶ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ನಿಗಮ ಮಂಡಳಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ಗೌಡ, ಎಂ.ಶಿವಕುಮಾರ್, ರಘು ಕೌಟಿಲ್ಯ, ಮುಖಂಡರಾದ ಗಿರಿಧರ್, ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಸೋಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಹಿಂದೂ ಧರ್ಮದ ಕುರಿತಂತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಜಮಾಯಿಸಿ ಸತೀಶ ವಿರುದ್ಧ ಘೋಷಣೆ ಕೂಗಿದರು. ‘ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು, ಜನರ ಭಾವನೆಗಳಿಗೆ ಬೇಸರ ಮೂಡಿಸಿದೆ. ಆ ಶಾಸಕರ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಶಾಸಕ ಎಲ್.ನಾಗೇಂದ್ರ ಮಾತನಾಡಿ, ‘ಧರ್ಮದ ವಿರುದ್ಧ ಹೇಳಿಕೆ ಕೊಟ್ಟು, ಮತ ಪಡೆಯುವ ಕೆಲಸ ಮಾಡಿರುವುದನ್ನು ನಾವು ಖಂಡಿಸುತ್ತೇವೆ. ಜಾರಕಿಹೊಳಿ ಶಾಲೆಯಲ್ಲಿ ಮತ್ತು ಇತರ ದಾಖಲೆಗಳಲ್ಲಿ ಯಾವ ಧರ್ಮವೆಂದು ನಮೂದಿಸಿದ್ದಾರೆ ಎಂದು ಸ್ಪಷ್ಟಪಡಿಸಲಿ’ ಎಂದು ಕಿಡಿಕಾರಿದರು.</p>.<p>ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಮಾತನಾಡಿ, ‘ಹಿಂದೂ ನೆಲದಲ್ಲಿದ್ದು, ಸಹೋದರರಂತೆ ಬಾಳುತ್ತಿರುವ ಸನ್ನಿವೇಶದಲ್ಲಿ ಅರೆಬರೆ ತಿಳಿವಳಿಕೆಯಿಂದ ಅಜ್ಞಾನಿ ಸತೀಶ ಹಿಂದೂ ಧರ್ಮದ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಿಜೆಪಿ ಮಾತ್ರ ಅಲ್ಲ ಪ್ರತಿ ಹಿಂದು ಕೂಡ ಖಂಡಿಸುತ್ತಿದ್ದಾರೆ’ ಎಂದರು.</p>.<p>ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರ, ವಕ್ತಾರ ಮಹೇಶ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ನಿಗಮ ಮಂಡಳಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ಗೌಡ, ಎಂ.ಶಿವಕುಮಾರ್, ರಘು ಕೌಟಿಲ್ಯ, ಮುಖಂಡರಾದ ಗಿರಿಧರ್, ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಸೋಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>