<p><strong>ಮೈಸೂರು: ‘</strong>ಕ್ರೋಧ, ಮತ್ಸರ, ಕಷ್ಟ–ಕೋಟಲೆಗಳು ದೂರಾಗಲಿ, ಉತ್ತಮ ಮಳೆ– ಬೆಳೆಯಾಗಿ ದೇಶ ಸುಭಿಕ್ಷವಾಗಲಿ’ ಎಂದು ಇಲ್ಲಿನ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಪ್ರಾರ್ಥಿಸಿದರು.</p><p>ನಗರದ ನಂಜನಗೂಡು ರಸ್ತೆಯಲ್ಲಿರುವ ಶ್ರೀದತ್ತ ವೆಂಕಟೇಶ್ವರ ಕ್ಷೇತ್ರದ 25ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p><p>‘ಜನರ ದುಃಖ ಕಡಿಮೆಯಾಗಲಿ, ಸಮಸ್ತ ಜೀವಿಗಳಿಗೂ ಸುಖ ಪ್ರಾಪ್ತಿಯಾಗಲಿ, ರಾಜ್ಯ ಮತ್ತು ದೇಶದ ಅಭಿವೃದ್ದಿಯಾಗಲಿ. ಪ್ರಜೆಗಳು ಮತ್ತು ಪ್ರಜಾ ಪ್ರತಿನಿಧಿಗಳಿಗೆ ಮನಃಶಾಂತಿ ಸಿಗಲಿ. ಅವರು ಜನರ ಕಷ್ಟವನ್ನು ನೋಡಿ ಅವುಗಳನ್ನು ಪರಿಹರಿಸಲಿ’ ಎಂದರು.</p><p>‘ಜನರಲ್ಲಿ ಕ್ರೋಧ ಹೆಚ್ಚಾಗುತ್ತಿದೆ. ಶಾಂತಿ ಇಲ್ಲದಂತಾಗಿದೆ. ಕಲಿಯುಗದ ದೇವರು ವೆಂಕಟರಮಣ. ಅವನನ್ನು ಪ್ರಾರ್ಥಿಸಿದರೆ ಸುಖ, ಐಶ್ವರ್ಯ, ಶಾಂತಿ ಸಿಗುತ್ತದೆ. ಕಡು ಬಡವರು ಕೂಡ ಶ್ರೀಮಂತರಾಗುತ್ತಾರೆ. ಆದರೆ, ಆ ದೇವನನ್ನು ನೆಮ್ಮದಿಯಿಂದ ಪ್ರಾರ್ಥಿಸಿ ಅವನ ಸ್ಮರಣೆ ಮಾಡುವುದು ಮುಖ್ಯವಾಗುತ್ತದೆ’ ಎಂದು ತಿಳಿಸಿದರು.</p><p>ಕುಂಭಾಭಿಷೇಕವನ್ನು ವಿಜೃಂಭಣೆಯಿಂದಣೆ ನೆರವೇರಿಸಲಾಯಿತು. ಇದಕ್ಕೂ ಮೊದಲು ವಜ್ರೋತ್ಸವ ಯಾಗಮಂಟಪದಲ್ಲಿ ಪ್ರಧಾನ ಯಾಗ ನಡೆಸಲಾಯಿತು. ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಪಾಲ್ಗೊಂಡು ಪೂರ್ಣಾಹುತಿ ಸಮರ್ಪಿಸಿದರು.</p><p>ನಂತರ ಶ್ರೀಗಳು ದತ್ತ ವೆಂಕಟೇಶ್ವರ ದೇವಾಲಯದ ಮೇಲ್ಭಾಗಕ್ಕೆ ತೆರಳಿ ಆಗಮಪಂಡಿತರ ಸಮ್ಮುಖದಲ್ಲಿ ವಿವಿಧ ನದಿಗಳಿಂದ ತರಲಾಗಿದ್ದ ಜಲದಿಂದ ದೇವಾಲಯಗಳ ಶಿಖರಗಳಿಗೆ ಮಹಾ ಕುಂಭಾಭಿಷೇಕ ನೆರವೇರಿಸಿದರು. ನಂತರ ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಕ್ರೋಧ, ಮತ್ಸರ, ಕಷ್ಟ–ಕೋಟಲೆಗಳು ದೂರಾಗಲಿ, ಉತ್ತಮ ಮಳೆ– ಬೆಳೆಯಾಗಿ ದೇಶ ಸುಭಿಕ್ಷವಾಗಲಿ’ ಎಂದು ಇಲ್ಲಿನ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಪ್ರಾರ್ಥಿಸಿದರು.</p><p>ನಗರದ ನಂಜನಗೂಡು ರಸ್ತೆಯಲ್ಲಿರುವ ಶ್ರೀದತ್ತ ವೆಂಕಟೇಶ್ವರ ಕ್ಷೇತ್ರದ 25ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p><p>‘ಜನರ ದುಃಖ ಕಡಿಮೆಯಾಗಲಿ, ಸಮಸ್ತ ಜೀವಿಗಳಿಗೂ ಸುಖ ಪ್ರಾಪ್ತಿಯಾಗಲಿ, ರಾಜ್ಯ ಮತ್ತು ದೇಶದ ಅಭಿವೃದ್ದಿಯಾಗಲಿ. ಪ್ರಜೆಗಳು ಮತ್ತು ಪ್ರಜಾ ಪ್ರತಿನಿಧಿಗಳಿಗೆ ಮನಃಶಾಂತಿ ಸಿಗಲಿ. ಅವರು ಜನರ ಕಷ್ಟವನ್ನು ನೋಡಿ ಅವುಗಳನ್ನು ಪರಿಹರಿಸಲಿ’ ಎಂದರು.</p><p>‘ಜನರಲ್ಲಿ ಕ್ರೋಧ ಹೆಚ್ಚಾಗುತ್ತಿದೆ. ಶಾಂತಿ ಇಲ್ಲದಂತಾಗಿದೆ. ಕಲಿಯುಗದ ದೇವರು ವೆಂಕಟರಮಣ. ಅವನನ್ನು ಪ್ರಾರ್ಥಿಸಿದರೆ ಸುಖ, ಐಶ್ವರ್ಯ, ಶಾಂತಿ ಸಿಗುತ್ತದೆ. ಕಡು ಬಡವರು ಕೂಡ ಶ್ರೀಮಂತರಾಗುತ್ತಾರೆ. ಆದರೆ, ಆ ದೇವನನ್ನು ನೆಮ್ಮದಿಯಿಂದ ಪ್ರಾರ್ಥಿಸಿ ಅವನ ಸ್ಮರಣೆ ಮಾಡುವುದು ಮುಖ್ಯವಾಗುತ್ತದೆ’ ಎಂದು ತಿಳಿಸಿದರು.</p><p>ಕುಂಭಾಭಿಷೇಕವನ್ನು ವಿಜೃಂಭಣೆಯಿಂದಣೆ ನೆರವೇರಿಸಲಾಯಿತು. ಇದಕ್ಕೂ ಮೊದಲು ವಜ್ರೋತ್ಸವ ಯಾಗಮಂಟಪದಲ್ಲಿ ಪ್ರಧಾನ ಯಾಗ ನಡೆಸಲಾಯಿತು. ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಪಾಲ್ಗೊಂಡು ಪೂರ್ಣಾಹುತಿ ಸಮರ್ಪಿಸಿದರು.</p><p>ನಂತರ ಶ್ರೀಗಳು ದತ್ತ ವೆಂಕಟೇಶ್ವರ ದೇವಾಲಯದ ಮೇಲ್ಭಾಗಕ್ಕೆ ತೆರಳಿ ಆಗಮಪಂಡಿತರ ಸಮ್ಮುಖದಲ್ಲಿ ವಿವಿಧ ನದಿಗಳಿಂದ ತರಲಾಗಿದ್ದ ಜಲದಿಂದ ದೇವಾಲಯಗಳ ಶಿಖರಗಳಿಗೆ ಮಹಾ ಕುಂಭಾಭಿಷೇಕ ನೆರವೇರಿಸಿದರು. ನಂತರ ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>