ಎಚ್.ಡಿ.ಕೋಟೆ ಪಟ್ಟಣದ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಚಿತ್ರಕಲಾ ಶಿಕ್ಷಕ ಕೃಷ್ಣಕುಮಾರ್ ಈ ಸಾಧಕ. ಇವರು ಜಲವರ್ಣ, ತೈಲ
ವರ್ಣದಲ್ಲಿ ಅನೇಕ ಕಲಾಕೃತಿಗಳನ್ನು ರಚಿಸಿದ್ದಾರೆ. ಪೆನ್ಸಿಲ್ ಬಳಸಿ ವ್ಯಕ್ತಿ ಚಿತ್ರ ರಚಿಸುವುದರಲ್ಲಿ ಇವರು ಸಿದ್ಧಹಸ್ತರು. ಸಿನಿಮಾ ನಟರಾದ ಡಾ.ರಾಜಕುಮಾರ್, ವಿಷ್ಣುವರ್ಧನ್, ಪುನೀತ್ ರಾಜ್ಕುಮಾರ್ ಸೇರಿದಂತೆ ಅನೇಕ ನಟರ ಚಿತ್ರಗಳನ್ನು ಬಿಡಿಸಿದ್ದಾರೆ. ಇದ
ಲ್ಲದೆ, ಜನಸಾಮಾನ್ಯರ ಚಿತ್ರಗಳನ್ನೂ ಬಿಡಿಸಿದ್ದಾರೆ.