<p><strong>ಮೈಸೂರು</strong>: ಪರಿಶಿಷ್ಟರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ನಟ ಉಪೇಂದ್ರ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಸದಸ್ಯರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.</p>.<p>ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಕಾರರು ‘ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಜಾತಿ ನಿಂದನೆ ಮಾಡಿ ಸಮುದಾಯವನ್ನು ಅವಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘದ ಕಾರ್ಯಾಧ್ಯಕ್ಷ ಕಲ್ಲಳ್ಳಿ ಕುಮಾರ ಮಾತನಾಡಿ, ‘ಯಾವುದೇ ಒಂದು ಜಾತಿಯನ್ನು ಅವಹೇಳನ ಮಾಡುವ ಯಾರನ್ನೇ ಆಗಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಅವಹೇಳನಕಾರಿ ಮಾತುಗಳು ಸರಿಯಲ್ಲ’ ಎಂದರು.</p>.<p>‘ಬುದ್ದಿವಂತ, ಚಾಣಕ್ಯ ಎಂದೆಲ್ಲ ಹೇಳಿಕೊಳ್ಳುವ ನಟ, ಸಾಮಾಜಿಕ ಜೀವನದಲ್ಲಿ ಯಾವ ರೀತಿ ಮಾತನಾಡಬೇಕು ಎಂಬುದು ಗೊತ್ತಿಲ್ಲವೇ? ನೋವುಂಟು ಮಾಡುವ ಗಾದೆಯನ್ನು ಬಳಸುವುದು ಸರಿಯೇ? ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮನಸ್ಥಿತಿಯು ಅವರಲ್ಲಿನ ಕೋಮುವಾದಿ ಹಾಗೂ ಜಾತಿವಾದಿತನವನ್ನು ಸೂಚಿಸುತ್ತದೆ’ ಎಂದು ಆರೋಪಿಸಿದರು.</p>.<p>‘ಉಪೇಂದ್ರ ಬೆಂಬಲಿಗರು ಸಮುದಾಯ ಮೇಲೆ ಮುಗಿಬಿದ್ದಿದ್ದಾರೆ. ದಲಿತರು ಯಾವುದೇ ಕಾರಣಕ್ಕೂ ಶೋಷಣೆಯನ್ನು ಸಹಿಸುವುದಿಲ್ಲ. ರಾಜ್ಯ ಸರ್ಕಾರವು ಜಾತಿನಿಂದನೆ ಮಾಡಿರುವ ಉಪೇಂದ್ರ ಅವರನ್ನು ಬಂಧಿಸಲು ಕ್ರಮವಹಿಸದಿದ್ದರೆ, ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಂಘದ ಅಧ್ಯಕ್ಷ ಸಿ.ಮಹೇಶ್, ಉಪಾಧ್ಯಕ್ಷ ಲಿಂಗರಾಜು, ಕಾರ್ಯಾಧ್ಯಕ್ಷ ಶಿವಶಂಕರ್, ಕಿರಣ್ ಕುಮಾರ್ , ಮರಿದೇವಯ್ಯ, ನಂಜುಂಡ, ರವಿ, ಪರಶು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಪರಿಶಿಷ್ಟರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ನಟ ಉಪೇಂದ್ರ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಸದಸ್ಯರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.</p>.<p>ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಕಾರರು ‘ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಜಾತಿ ನಿಂದನೆ ಮಾಡಿ ಸಮುದಾಯವನ್ನು ಅವಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘದ ಕಾರ್ಯಾಧ್ಯಕ್ಷ ಕಲ್ಲಳ್ಳಿ ಕುಮಾರ ಮಾತನಾಡಿ, ‘ಯಾವುದೇ ಒಂದು ಜಾತಿಯನ್ನು ಅವಹೇಳನ ಮಾಡುವ ಯಾರನ್ನೇ ಆಗಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಅವಹೇಳನಕಾರಿ ಮಾತುಗಳು ಸರಿಯಲ್ಲ’ ಎಂದರು.</p>.<p>‘ಬುದ್ದಿವಂತ, ಚಾಣಕ್ಯ ಎಂದೆಲ್ಲ ಹೇಳಿಕೊಳ್ಳುವ ನಟ, ಸಾಮಾಜಿಕ ಜೀವನದಲ್ಲಿ ಯಾವ ರೀತಿ ಮಾತನಾಡಬೇಕು ಎಂಬುದು ಗೊತ್ತಿಲ್ಲವೇ? ನೋವುಂಟು ಮಾಡುವ ಗಾದೆಯನ್ನು ಬಳಸುವುದು ಸರಿಯೇ? ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮನಸ್ಥಿತಿಯು ಅವರಲ್ಲಿನ ಕೋಮುವಾದಿ ಹಾಗೂ ಜಾತಿವಾದಿತನವನ್ನು ಸೂಚಿಸುತ್ತದೆ’ ಎಂದು ಆರೋಪಿಸಿದರು.</p>.<p>‘ಉಪೇಂದ್ರ ಬೆಂಬಲಿಗರು ಸಮುದಾಯ ಮೇಲೆ ಮುಗಿಬಿದ್ದಿದ್ದಾರೆ. ದಲಿತರು ಯಾವುದೇ ಕಾರಣಕ್ಕೂ ಶೋಷಣೆಯನ್ನು ಸಹಿಸುವುದಿಲ್ಲ. ರಾಜ್ಯ ಸರ್ಕಾರವು ಜಾತಿನಿಂದನೆ ಮಾಡಿರುವ ಉಪೇಂದ್ರ ಅವರನ್ನು ಬಂಧಿಸಲು ಕ್ರಮವಹಿಸದಿದ್ದರೆ, ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಂಘದ ಅಧ್ಯಕ್ಷ ಸಿ.ಮಹೇಶ್, ಉಪಾಧ್ಯಕ್ಷ ಲಿಂಗರಾಜು, ಕಾರ್ಯಾಧ್ಯಕ್ಷ ಶಿವಶಂಕರ್, ಕಿರಣ್ ಕುಮಾರ್ , ಮರಿದೇವಯ್ಯ, ನಂಜುಂಡ, ರವಿ, ಪರಶು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>