ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಂಗಭೂಮಿ ತಂತ್ರಜ್ಞ ಅರುಣಮೂರ್ತಿ ನೇತೃತ್ವದಲ್ಲಿ ಕಾರ್ಯಾಗಾರ ನಡೆಯಲಿದೆ. ಬೆಳಕು ಮತ್ತು ಧ್ವನಿಗೆ ಸಂಬಂಧಿಸಿದ ತಾಂತ್ರಿಕ ವಿಚಾರಗಳನ್ನು ತಿಳಿಸಲಿದ್ದು, ಒಂದು ಕಾರ್ಯಕ್ರಮದಲ್ಲಿ ಬೆಳಕು ಮತ್ತು ಧ್ವನಿಯನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಚಿಸುವವರು ಮೊ.ಸಂ. 98458 98982 ಸಂಪರ್ಕಿಸಬಹುದು’ ಎಂದು ತಿಳಿಸಿದರು.