<p><strong>ಮೈಸೂರು: </strong>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹಾಗೂ ಮರಣ ಪ್ರಮಾಣ ಹೆಚ್ಚುತ್ತಿರುವ ಕಾರಣ ಈ ಬಾರಿ ದಸರಾ ಮಹೋತ್ಸವಕ್ಕೆ ಸಾರ್ವಜನಿಕರಪ್ರವೇಶಕ್ಕೆನಿರ್ಬಂಧ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದರೆ, ಇತ್ತ ನಗರದ ರಸ್ತೆಗಳಲ್ಲಿ ಮಾತ್ರ ದೀಪಾಲಂಕಾರ ವೀಕ್ಷಣೆಗೆ ಜನದಟ್ಟಣೆ ನಿರ್ಮಾಣವಾಗುತ್ತಿದೆ.</p>.<p>ಅರಮನೆ ಸುತ್ತಮುತ್ತಲಿನ ವೃತ್ತಗಳು, ರಸ್ತೆಗಳಲ್ಲಿ ದೀಪಾಲಂಕಾರ ವೀಕ್ಷಿಸಲು ಭಾನುವಾರ ರಾತ್ರಿ ಸಾರ್ವನಿಕರು ಅಧಿಕ ಸಂಖ್ಯೆಯಲ್ಲಿ ಸೇರಿದ್ದರು. ಅಲ್ಲದೇ, ವಾಹನ ದಟ್ಟಣೆ ಕೂಡ ಉಂಟಾಯಿತು.</p>.<p>ಕುಟುಂಬ ಸಮೇತರಾಗಿ ಬಂದವರು ದೀಪಾಲಂಕಾರದ ಮುಂದೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರೆ, ಕೆಲವರು ಗುಂಪುಗುಂಪಾಗಿ ನಿಂತಿದ್ದರು. ಜನ ಹಾಗೂ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಪರದಾಡುತ್ತಿದ್ದ ದೃಶ್ಯ ಕಂಡುಬಂತು.</p>.<p>ಚಾಮರಾಜ ಜೋಡಿ ರಸ್ತೆಯಲ್ಲಿ ಇಕ್ಕೆಲಗಳಲ್ಲಿ ಮರಗಳಿಗೆ ದೀಪಾಲಂಕಾರ ಮಾಡಲಾಗಿದೆ. ಚಾಮರಾಜ ವೃತ್ತ. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತಗಳನ್ನು ವಿದ್ಯುತ್ ಬಲ್ಬುಗಳಿಂದ ಅಲಂಕರಿಸಲಾಗಿದೆ.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ನಾಡಹಬ್ಬದ ಉದ್ಘಾಟನೆಗೆ 200 ಮಂದಿ, ಜಂಬೂಸವಾರಿಗೆ 300 ಮಂದಿಗೆ ಮಾತ್ರ ಪ್ರವೇಶ ನೀಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸು ಮಾಡಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮುಖ್ಯಮಂತ್ರಿ ಕೂಡ ಸೂಚನೆ ನೀಡಿದ್ದಾರೆ.</p>.<p>ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಈ ಸಮಯದಲ್ಲಿ ದೀಪಾಲಂಕಾರ ಮಾಡಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರನ್ನು ಕೇಳಿ ಊರುತುಂಬಾ ದೀಪಾಲಂಕಾರ ಮಾಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಸಂಘ ಸಂಸ್ಥೆಗಳು ಕೂಡ ವಿರೋಧ ವ್ಯಕ್ತಪಡಿಸಿವೆ.</p>.<p>ಈ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ‘ದೀಪಾಲಂಕಾರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಇದು ಉನ್ನತಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಾರಿ 50 ಕಿ.ಮೀಗೆ ವ್ಯಾಪ್ತಿಗೆ ಸೀಮಿತಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದಿದ್ದಾರೆ.</p>.<p class="Subhead">ಜಾಗೃತಿ: ದೀಪಾಲಂಕಾರದಲ್ಲೂ ಕೋವಿಡ್ ಮುನ್ನೆಚ್ಚರಿಕೆ ಸಂಬಂಧಿಸಿ ದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಬಲ್ಬುಗಳಲ್ಲಿ ಮಾಸ್ಕ್ ಧರಿಸಿದ ವ್ಯಕ್ತಿಯ ಪ್ರತಿಕೃತಿ ನಿರ್ಮಿಸಲಾಗಿದೆ. ಇಷ್ಟಾಗಿಯೂ ಜನ ಅಂತರ ಕಾಯ್ದು ಕೊಳ್ಳದೆ ವೀಕ್ಷಣೆಯಲ್ಲಿ ತೊಡಗಿದ್ದಾರೆ.</p>.<p><strong>ಉದ್ಘಾಟಕರಿಗೆ ಇಂದು ಆಹ್ವಾನ</strong></p>.<p>ದಸರಾ ಮಹೋತ್ಸವ ಉದ್ಘಾಟನೆಗೆ ಆಯ್ಕೆಯಾಗಿರುವ ಹೃದ್ರೋಗ ತಜ್ಞ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಮೈಸೂರು ಜಿಲ್ಲಾಡಳಿತದ ಪರವಾಗಿ ಸೋಮವಾರ ಅಧಿಕೃತ ಆಹ್ವಾನ ನೀಡಲಾಗುತ್ತಿದೆ.</p>.<p>ಬೆಂಗಳೂರಿನಲ್ಲಿರುವ ಜಯದೇವ ಆಸ್ಪತ್ರೆಯ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 11.30ಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪಸಿಂಹ, ಶಾಸಕರಾದ ರಾಮದಾಸ್, ಎಲ್.ನಾಗೇಂದ್ರ ಮತ್ತು ಸ್ವಾಗತ ಸಮಿತಿ ಸದಸ್ಯರು ಫಲ ತಾಂಬೂಲ ನೀಡಿ ಆಹ್ವಾನಿಸಲಿದ್ದಾರೆ. ಈ ನಡುವೆ, ದಸರೆಗೆ ಬರುವಂತೆ ಹಿಂದಿನ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೂ ಸಚಿವರು ಆಹ್ವಾನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹಾಗೂ ಮರಣ ಪ್ರಮಾಣ ಹೆಚ್ಚುತ್ತಿರುವ ಕಾರಣ ಈ ಬಾರಿ ದಸರಾ ಮಹೋತ್ಸವಕ್ಕೆ ಸಾರ್ವಜನಿಕರಪ್ರವೇಶಕ್ಕೆನಿರ್ಬಂಧ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದರೆ, ಇತ್ತ ನಗರದ ರಸ್ತೆಗಳಲ್ಲಿ ಮಾತ್ರ ದೀಪಾಲಂಕಾರ ವೀಕ್ಷಣೆಗೆ ಜನದಟ್ಟಣೆ ನಿರ್ಮಾಣವಾಗುತ್ತಿದೆ.</p>.<p>ಅರಮನೆ ಸುತ್ತಮುತ್ತಲಿನ ವೃತ್ತಗಳು, ರಸ್ತೆಗಳಲ್ಲಿ ದೀಪಾಲಂಕಾರ ವೀಕ್ಷಿಸಲು ಭಾನುವಾರ ರಾತ್ರಿ ಸಾರ್ವನಿಕರು ಅಧಿಕ ಸಂಖ್ಯೆಯಲ್ಲಿ ಸೇರಿದ್ದರು. ಅಲ್ಲದೇ, ವಾಹನ ದಟ್ಟಣೆ ಕೂಡ ಉಂಟಾಯಿತು.</p>.<p>ಕುಟುಂಬ ಸಮೇತರಾಗಿ ಬಂದವರು ದೀಪಾಲಂಕಾರದ ಮುಂದೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರೆ, ಕೆಲವರು ಗುಂಪುಗುಂಪಾಗಿ ನಿಂತಿದ್ದರು. ಜನ ಹಾಗೂ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಪರದಾಡುತ್ತಿದ್ದ ದೃಶ್ಯ ಕಂಡುಬಂತು.</p>.<p>ಚಾಮರಾಜ ಜೋಡಿ ರಸ್ತೆಯಲ್ಲಿ ಇಕ್ಕೆಲಗಳಲ್ಲಿ ಮರಗಳಿಗೆ ದೀಪಾಲಂಕಾರ ಮಾಡಲಾಗಿದೆ. ಚಾಮರಾಜ ವೃತ್ತ. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತಗಳನ್ನು ವಿದ್ಯುತ್ ಬಲ್ಬುಗಳಿಂದ ಅಲಂಕರಿಸಲಾಗಿದೆ.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ನಾಡಹಬ್ಬದ ಉದ್ಘಾಟನೆಗೆ 200 ಮಂದಿ, ಜಂಬೂಸವಾರಿಗೆ 300 ಮಂದಿಗೆ ಮಾತ್ರ ಪ್ರವೇಶ ನೀಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸು ಮಾಡಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮುಖ್ಯಮಂತ್ರಿ ಕೂಡ ಸೂಚನೆ ನೀಡಿದ್ದಾರೆ.</p>.<p>ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಈ ಸಮಯದಲ್ಲಿ ದೀಪಾಲಂಕಾರ ಮಾಡಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರನ್ನು ಕೇಳಿ ಊರುತುಂಬಾ ದೀಪಾಲಂಕಾರ ಮಾಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಸಂಘ ಸಂಸ್ಥೆಗಳು ಕೂಡ ವಿರೋಧ ವ್ಯಕ್ತಪಡಿಸಿವೆ.</p>.<p>ಈ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ‘ದೀಪಾಲಂಕಾರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಇದು ಉನ್ನತಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಾರಿ 50 ಕಿ.ಮೀಗೆ ವ್ಯಾಪ್ತಿಗೆ ಸೀಮಿತಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದಿದ್ದಾರೆ.</p>.<p class="Subhead">ಜಾಗೃತಿ: ದೀಪಾಲಂಕಾರದಲ್ಲೂ ಕೋವಿಡ್ ಮುನ್ನೆಚ್ಚರಿಕೆ ಸಂಬಂಧಿಸಿ ದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಬಲ್ಬುಗಳಲ್ಲಿ ಮಾಸ್ಕ್ ಧರಿಸಿದ ವ್ಯಕ್ತಿಯ ಪ್ರತಿಕೃತಿ ನಿರ್ಮಿಸಲಾಗಿದೆ. ಇಷ್ಟಾಗಿಯೂ ಜನ ಅಂತರ ಕಾಯ್ದು ಕೊಳ್ಳದೆ ವೀಕ್ಷಣೆಯಲ್ಲಿ ತೊಡಗಿದ್ದಾರೆ.</p>.<p><strong>ಉದ್ಘಾಟಕರಿಗೆ ಇಂದು ಆಹ್ವಾನ</strong></p>.<p>ದಸರಾ ಮಹೋತ್ಸವ ಉದ್ಘಾಟನೆಗೆ ಆಯ್ಕೆಯಾಗಿರುವ ಹೃದ್ರೋಗ ತಜ್ಞ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಮೈಸೂರು ಜಿಲ್ಲಾಡಳಿತದ ಪರವಾಗಿ ಸೋಮವಾರ ಅಧಿಕೃತ ಆಹ್ವಾನ ನೀಡಲಾಗುತ್ತಿದೆ.</p>.<p>ಬೆಂಗಳೂರಿನಲ್ಲಿರುವ ಜಯದೇವ ಆಸ್ಪತ್ರೆಯ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 11.30ಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪಸಿಂಹ, ಶಾಸಕರಾದ ರಾಮದಾಸ್, ಎಲ್.ನಾಗೇಂದ್ರ ಮತ್ತು ಸ್ವಾಗತ ಸಮಿತಿ ಸದಸ್ಯರು ಫಲ ತಾಂಬೂಲ ನೀಡಿ ಆಹ್ವಾನಿಸಲಿದ್ದಾರೆ. ಈ ನಡುವೆ, ದಸರೆಗೆ ಬರುವಂತೆ ಹಿಂದಿನ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೂ ಸಚಿವರು ಆಹ್ವಾನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>