<p><strong>ಮೈಸೂರು</strong>: ಜಿಲ್ಲೆಯ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಬಿನಿ ಹಿನ್ನೀರಿನ ಹಾಡಿ, ಗ್ರಾಮಗಳಲ್ಲಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿ, ಅದನ್ನು ತಡೆಯುವಂತೆ ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ ಕುಲಕರ್ಣಿ ರಾಷ್ಟ್ರೀಯ ಹುಲಿ ಸಂಕಕ್ಷಣಾ ಪ್ರಾಧಿಕಾರ(ಎನ್ಟಿಸಿಎ)ಕ್ಕೆ ಪತ್ರ ಬರೆದಿದ್ದಾರೆ. </p>.<p>‘ಪ್ರಜಾವಾಣಿ’ಯಲ್ಲಿ ಡಿ.15ರಂದು ಒಳನೋಟದಲ್ಲಿ ಪ್ರಕಟವಾಗಿದ್ದ ವರದಿ ‘ಕಬಿನಿಯಲ್ಲಿ ಮದ್ಯದ ‘ಹೊಳೆ’ ಹಾಗೂ 2014 ಜುಲೈ 1ರಂದು ಎನ್ಟಿಸಿಎ ನಡೆಸಿದ್ದ ಸ್ಥಳ ಪರಿಶೀಲನಾ ವರದಿ ಆಧ<br>ರಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.</p>.<p>ಎನ್ಟಿಸಿಎ ಜೊತೆಗೆ ರಾಜ್ಯ ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ, ಹುಲಿ <br>ಯೋಜನೆ ನಿರ್ದೇಶಕರಿಗೂ ಪತ್ರ ಬರೆದಿದ್ದಾರೆ.</p>.<p>‘ಕೇರಳ ಗಡಿಗೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಲ್ಲಿ ಹಲವು ಬಾರ್ಗಳನ್ನು ತೆರೆಯಲು ಪರವಾನಗಿ ನೀಡಲಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಬುಡಕಟ್ಟು ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಜಿಲ್ಲೆಯ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಬಿನಿ ಹಿನ್ನೀರಿನ ಹಾಡಿ, ಗ್ರಾಮಗಳಲ್ಲಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿ, ಅದನ್ನು ತಡೆಯುವಂತೆ ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ ಕುಲಕರ್ಣಿ ರಾಷ್ಟ್ರೀಯ ಹುಲಿ ಸಂಕಕ್ಷಣಾ ಪ್ರಾಧಿಕಾರ(ಎನ್ಟಿಸಿಎ)ಕ್ಕೆ ಪತ್ರ ಬರೆದಿದ್ದಾರೆ. </p>.<p>‘ಪ್ರಜಾವಾಣಿ’ಯಲ್ಲಿ ಡಿ.15ರಂದು ಒಳನೋಟದಲ್ಲಿ ಪ್ರಕಟವಾಗಿದ್ದ ವರದಿ ‘ಕಬಿನಿಯಲ್ಲಿ ಮದ್ಯದ ‘ಹೊಳೆ’ ಹಾಗೂ 2014 ಜುಲೈ 1ರಂದು ಎನ್ಟಿಸಿಎ ನಡೆಸಿದ್ದ ಸ್ಥಳ ಪರಿಶೀಲನಾ ವರದಿ ಆಧ<br>ರಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.</p>.<p>ಎನ್ಟಿಸಿಎ ಜೊತೆಗೆ ರಾಜ್ಯ ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ, ಹುಲಿ <br>ಯೋಜನೆ ನಿರ್ದೇಶಕರಿಗೂ ಪತ್ರ ಬರೆದಿದ್ದಾರೆ.</p>.<p>‘ಕೇರಳ ಗಡಿಗೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಲ್ಲಿ ಹಲವು ಬಾರ್ಗಳನ್ನು ತೆರೆಯಲು ಪರವಾನಗಿ ನೀಡಲಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಬುಡಕಟ್ಟು ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>