ಆಸೆ–ಆಮಿಷಗಳಿಗೆ ಬಲಿಯಾಗದೇ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಪ್ರತಿ ಮತವೂ ಮೌಲ್ಯಯುತವಾದುದು. ಅದನ್ನು ಚಲಾಯಿಸದಿದ್ದರೆ ಪ್ರಯೋಜನ ಇರುವುದಿಲ್ಲ. ಆದ್ದರಿಂದ ನಾನು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಸರ್ಕಾರಕ್ಕಾಗಿ ಎಲ್ಲರೂ ಮತದಾನ ಮಾಡಬೇಕು. ಯುವಜನರು ಸಾಮಾಜಿಕ ಮಾಧ್ಯಮ ಬಳಸಿಕೊಂಡು ಇತರರಿಗೂ ಮತದಾನಕ್ಕೆ ಪ್ರೇರಣೆ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.