‘ಮೊದಲ ಬಾರಿಗೆ ಬಂದಾಗ ನನ್ನ ಜೊತೆ ಯಾರೂ ಇರಲಿಲ್ಲ. ಪತ್ರಕರ್ತನಾಗಿದ್ದ ನನ್ನನ್ನು ಮೈಸೂರು– ಕೊಡಗಿನ ಜನ ಎರಡು ಬಾರಿ ಗೆಲ್ಲಿಸಿದರು. ಈಗ ಅಪಾರ ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರು ನನ್ನ ಜೊತೆಗಿದ್ದಾರೆ. ಬಿಜೆಪಿ– ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆ ಮಾತಕತೆ ಯಾವಾಗ ಮುಗಿಯುತ್ತದೆ ಎಂಬುದು ಗೊತ್ತಿಲ್ಲ. ಹಂಚಿಕೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.