<p><strong>ಮೈಸೂರು</strong>: ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಸ್ವಗ್ರಾಮವಾದ ಸಿದ್ದರಾಮನಹುಂಡಿಯಲ್ಲಿ ಶುಕ್ರವಾರ ಮತ ಚಲಾಯಿಸಿದ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದರು. </p><p>ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ಮೊದಲ ಹಂತದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಜನರು ಗ್ಯಾರಂಟಿ ಯೋಜನೆಗಳ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>ಕಳೆದ ಮೂರು ದಿನಗಳ ಮೋದಿ ಭಾಷಣ ಹತಾಶೆ ಹಾಗೂ ಪ್ರಚೋದನಾಕಾರಿ ಆಗಿದೆ ಹೊರತು ಪರಿಣಾಮಕಾರಿ ಆಗಿಲ್ಲ ಎಂದರು.</p><p>ದೇವೇಗೌಡರು ಹಾಗೂ ಅವರ ಕುಟುಂಬದವರ ಕಣ್ಣೀರು ಕೃತಕವಾದದ್ದು. ರಾಜಕಾರಣದ ವಿಚಾರದಲ್ಲಿ ಈ ರೀತಿ ಕಣ್ಣೀರು ಬರಬಾರದು ಎಂದರು.</p><p>ಎನ್ ಡಿಎ ಗೆಲ್ಲಲಿದೆ ಎಂದ ಸಿದ್ದರಾಮಯ್ಯ: </p><p>ಮೊದಲ ಹಂತದ 102 ಕ್ಷೇತ್ರಗಳ ಪೈಕಿ ಎನ್ ಡಿಎ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಾಯಿ ತಪ್ಪಿ ಹೇಳುವ ಮೂಲಕ ಸಿದ್ದರಾಮಯ್ಯ ಗೊಂದಲ ಮೂಡಿಸಿದರು. </p><p>' ಮೋದಿ ಅವರಿಗೆ ತಾವು ಗೆಲ್ಲುವುದಿಲ್ಲ ಎಂದು ಗೊತ್ತಾಗಿದೆ. ಎನ್ ಡಿಎ ಮತ್ತು ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಸ್ವಗ್ರಾಮವಾದ ಸಿದ್ದರಾಮನಹುಂಡಿಯಲ್ಲಿ ಶುಕ್ರವಾರ ಮತ ಚಲಾಯಿಸಿದ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದರು. </p><p>ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ಮೊದಲ ಹಂತದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಜನರು ಗ್ಯಾರಂಟಿ ಯೋಜನೆಗಳ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>ಕಳೆದ ಮೂರು ದಿನಗಳ ಮೋದಿ ಭಾಷಣ ಹತಾಶೆ ಹಾಗೂ ಪ್ರಚೋದನಾಕಾರಿ ಆಗಿದೆ ಹೊರತು ಪರಿಣಾಮಕಾರಿ ಆಗಿಲ್ಲ ಎಂದರು.</p><p>ದೇವೇಗೌಡರು ಹಾಗೂ ಅವರ ಕುಟುಂಬದವರ ಕಣ್ಣೀರು ಕೃತಕವಾದದ್ದು. ರಾಜಕಾರಣದ ವಿಚಾರದಲ್ಲಿ ಈ ರೀತಿ ಕಣ್ಣೀರು ಬರಬಾರದು ಎಂದರು.</p><p>ಎನ್ ಡಿಎ ಗೆಲ್ಲಲಿದೆ ಎಂದ ಸಿದ್ದರಾಮಯ್ಯ: </p><p>ಮೊದಲ ಹಂತದ 102 ಕ್ಷೇತ್ರಗಳ ಪೈಕಿ ಎನ್ ಡಿಎ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಾಯಿ ತಪ್ಪಿ ಹೇಳುವ ಮೂಲಕ ಸಿದ್ದರಾಮಯ್ಯ ಗೊಂದಲ ಮೂಡಿಸಿದರು. </p><p>' ಮೋದಿ ಅವರಿಗೆ ತಾವು ಗೆಲ್ಲುವುದಿಲ್ಲ ಎಂದು ಗೊತ್ತಾಗಿದೆ. ಎನ್ ಡಿಎ ಮತ್ತು ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>