<p>ಮೈಸೂರು: ‘ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು’ ಎಂದು ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಹೇಳಿದರು.</p>.<p>ನಗರದ ಶ್ರೀರಾಮ ಸೇವಾ ಅರಸು ಮಂಡಳಿಯಲ್ಲಿ ಶನಿವಾರ ನಡೆದ ‘ಮಹಿಳಾ ಸಶಕ್ತೀಕರಣ ಮತ್ತು ಸಮಗ್ರ ಬೆಳವಣಿಗೆ’ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ನಾರಿ ಶಕ್ತಿ ದೊಡ್ಡದು. ಮಹಿಳೆಯರಲ್ಲಿ ಕ್ಷಮತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಬೇಕು. ಅವರ ಅಭಿವೃದ್ಧಿಗೆ ಪೂರಕ ಅವಕಾಶ ಒದಗಿಸಿಕೊಡಬೇಕು. ಮಹಿಳೆಯರಿಗೆ ಅಗತ್ಯವಾದ ಪರಿಕರ ಮತ್ತು ಜ್ಞಾನ ಒದಗಿಸುವ ಮೂಲಕ ಮಹಿಳಾ ಉನ್ನತೀಕರಣಕ್ಕೆ ಹಾಗೂ ಅವರ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕು’ ಎಂದು ತಿಳಿಸಿದರು.</p>.<p>ವಿಜ್ಞಾನಿ ವೆಂಕಟೇಶ್ ತುಳಸಿರಾಮನ್ ಮಾತನಾಡಿ, ‘ಮಹಿಳೆಯರ ಸಬಲೀಕರಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರವೂ ಮುಖ್ಯವಾಗಿದೆ. ಮಹಿಳೆಯರು ಅತ್ಯಾಧುನಿಕ ಸಂಶೋಧನೆ ಹಾಗೂ ನವೀನ ಪರಿಹಾರ ಬಳಸಿಕೊಳ್ಳುವ ಮೂಲಕ ಸುಸ್ಥಿರ ಅಭಿವೃದ್ಧಿ ಸಾಧಿಸಬಹುದು’ ಎಂದರು.</p>.<p>ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಲಹೆಗಾರ ಅಭಿಷೇಕ್ ಮಾತನಾಡಿ, ‘ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವುದು ಕೇವಲ ವ್ಯಾಪಾರ ಸೃಷ್ಟಿಗಲ್ಲ. ಅವರಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯ ಪರಿಸರ ವ್ಯವಸ್ಥೆ ಉತ್ತೇಜಿಸಲು’ ಎಂದು ತಿಳಿಸಿದರು.</p>.<p>ಕೃಷಿ ವಲಯದ ವಿಶೇಷ ತಾಂತ್ರಿಕ ಅಧಿಕಾರಿ ಶುಭಾ ಪುಟ್ಟಸ್ವಾಮಿ ಮಾತನಾಡಿ, ‘ಕೃಷಿಯಲ್ಲಿ ತೊಡಗಿಕೊಂಡ ಮಹಿಳೆಯರಲ್ಲಿ ಕ್ಷಮತೆ, ಚಾತುರ್ಯವನ್ನು ಬೆಳೆಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಅವರಿಗೆ ಸರ್ಕಾರದ ಯೋಜನೆಗಳನ್ನು ಪರಿಚಯಿಸುವ ಕೆಲಸವಾಗಬೇಕು. ಆ ಮೂಲಕ ಮಹಿಳೆಯರು ಅವಕಾಶಗಳನ್ನು ಪಡೆದುಕೊಂಡು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಆಗಬೇಕು’ ಎಂದು ಆಶಿಸಿದರು.</p>.<p>ಸಾಮಾಜಿಕ ಉದ್ಯಮಿ ಛಾಯಾ ನಂಜಪ್ಪ ಮಾತನಾಡಿ, ‘ನಮ್ಮ ಸಾಮೂಹಿಕ ದೃಷ್ಟಿಕೋನ ಎಲ್ಲರ ಒಳಗೊಳ್ಳುವಿಕೆ ಮತ್ತು ಸಬಲೀಕರಣದಲ್ಲಿ ಬೇರೂರಿದೆ. ಈ ಉಪಕ್ರಮದ ಮೂಲಕ ಮಹಿಳೆಯರು ಮತ್ತು ಸರ್ಕಾರದ ಯೋಜನೆಗಳ ನಡುವಿನ ಅಂತರವನ್ನು ಕಡಿಮೆ ಮಾಡಬೇಕು’ ಎಂದರು.</p>.<p>ಪ್ರಿಯದರ್ಶಿನಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು’ ಎಂದು ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಹೇಳಿದರು.</p>.<p>ನಗರದ ಶ್ರೀರಾಮ ಸೇವಾ ಅರಸು ಮಂಡಳಿಯಲ್ಲಿ ಶನಿವಾರ ನಡೆದ ‘ಮಹಿಳಾ ಸಶಕ್ತೀಕರಣ ಮತ್ತು ಸಮಗ್ರ ಬೆಳವಣಿಗೆ’ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ನಾರಿ ಶಕ್ತಿ ದೊಡ್ಡದು. ಮಹಿಳೆಯರಲ್ಲಿ ಕ್ಷಮತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಬೇಕು. ಅವರ ಅಭಿವೃದ್ಧಿಗೆ ಪೂರಕ ಅವಕಾಶ ಒದಗಿಸಿಕೊಡಬೇಕು. ಮಹಿಳೆಯರಿಗೆ ಅಗತ್ಯವಾದ ಪರಿಕರ ಮತ್ತು ಜ್ಞಾನ ಒದಗಿಸುವ ಮೂಲಕ ಮಹಿಳಾ ಉನ್ನತೀಕರಣಕ್ಕೆ ಹಾಗೂ ಅವರ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕು’ ಎಂದು ತಿಳಿಸಿದರು.</p>.<p>ವಿಜ್ಞಾನಿ ವೆಂಕಟೇಶ್ ತುಳಸಿರಾಮನ್ ಮಾತನಾಡಿ, ‘ಮಹಿಳೆಯರ ಸಬಲೀಕರಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರವೂ ಮುಖ್ಯವಾಗಿದೆ. ಮಹಿಳೆಯರು ಅತ್ಯಾಧುನಿಕ ಸಂಶೋಧನೆ ಹಾಗೂ ನವೀನ ಪರಿಹಾರ ಬಳಸಿಕೊಳ್ಳುವ ಮೂಲಕ ಸುಸ್ಥಿರ ಅಭಿವೃದ್ಧಿ ಸಾಧಿಸಬಹುದು’ ಎಂದರು.</p>.<p>ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಲಹೆಗಾರ ಅಭಿಷೇಕ್ ಮಾತನಾಡಿ, ‘ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವುದು ಕೇವಲ ವ್ಯಾಪಾರ ಸೃಷ್ಟಿಗಲ್ಲ. ಅವರಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯ ಪರಿಸರ ವ್ಯವಸ್ಥೆ ಉತ್ತೇಜಿಸಲು’ ಎಂದು ತಿಳಿಸಿದರು.</p>.<p>ಕೃಷಿ ವಲಯದ ವಿಶೇಷ ತಾಂತ್ರಿಕ ಅಧಿಕಾರಿ ಶುಭಾ ಪುಟ್ಟಸ್ವಾಮಿ ಮಾತನಾಡಿ, ‘ಕೃಷಿಯಲ್ಲಿ ತೊಡಗಿಕೊಂಡ ಮಹಿಳೆಯರಲ್ಲಿ ಕ್ಷಮತೆ, ಚಾತುರ್ಯವನ್ನು ಬೆಳೆಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಅವರಿಗೆ ಸರ್ಕಾರದ ಯೋಜನೆಗಳನ್ನು ಪರಿಚಯಿಸುವ ಕೆಲಸವಾಗಬೇಕು. ಆ ಮೂಲಕ ಮಹಿಳೆಯರು ಅವಕಾಶಗಳನ್ನು ಪಡೆದುಕೊಂಡು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಆಗಬೇಕು’ ಎಂದು ಆಶಿಸಿದರು.</p>.<p>ಸಾಮಾಜಿಕ ಉದ್ಯಮಿ ಛಾಯಾ ನಂಜಪ್ಪ ಮಾತನಾಡಿ, ‘ನಮ್ಮ ಸಾಮೂಹಿಕ ದೃಷ್ಟಿಕೋನ ಎಲ್ಲರ ಒಳಗೊಳ್ಳುವಿಕೆ ಮತ್ತು ಸಬಲೀಕರಣದಲ್ಲಿ ಬೇರೂರಿದೆ. ಈ ಉಪಕ್ರಮದ ಮೂಲಕ ಮಹಿಳೆಯರು ಮತ್ತು ಸರ್ಕಾರದ ಯೋಜನೆಗಳ ನಡುವಿನ ಅಂತರವನ್ನು ಕಡಿಮೆ ಮಾಡಬೇಕು’ ಎಂದರು.</p>.<p>ಪ್ರಿಯದರ್ಶಿನಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>