‘ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರುವ ಟಿ.ಆರ್.ಸುನಿಲ್, ಪಕ್ಷದ ಯುವಜನ ಸಂಘಟನೆ ಎಐಡಿವೈಒ ಮೂಲಕ ನೇಮಕಾತಿ ಅಕ್ರಮ, ಖಾಲಿ ಹುದ್ದೆಗಳ ಭರ್ತಿ, ಅತಿಥಿ ಶಿಕ್ಷಕರ ಸಮಸ್ಯೆ, ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಚಳವಳಿ ರೂಪಿಸಿ ಯಶಸ್ವಿಯಾಗಿದ್ದಾರೆ. ನಾಗರಹೊಳೆ ವ್ಯಾಪ್ತಿಯ ಆದಿವಾಸಿಗಳ ಸಂಕಷ್ಟ ಪರಿಹಾರಕ್ಕೆ ಹೋರಾಟ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ಶ್ರಮಿಕರ, ಕಾರ್ಮಿಕರ, ರೈತರ ಸಮಸ್ಯೆಗಳ ಪರಿಹಾರಕ್ಕೆ ಸದಾ ಮುನ್ನುಗ್ಗುವ ಗುಣ ಅವರಲ್ಲಿದ್ದು, ಕ್ಷೇತ್ರದ ಮತದಾರರು ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.