<p><strong>ಮೈಸೂರು:</strong> ಇಲ್ಲಿನ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಇ ಆಸಿಫ್ ಇಕ್ಬಾಲ್ ಖಲೀಲ್ ಅವರಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ₹ 1.03 ಕೋಟಿ ಮೌಲ್ಯದ 5 ನಿವೇಶನ ಹಾಗೂ ₹ 4. 28 ಕೋಟಿ ಮೌಲ್ಯದ ಏಳು ಮನೆಗಳನ್ನು ಪತ್ತೆ ಹಚ್ಚಿದ್ದಾರೆ. </p><p>ಲೋಕಾಯುಕ್ತ ಎಸ್ಪಿ ಉದೇಶ್ ಮಾರ್ಗದರ್ಶನದಲ್ಲಿ ಪೊಲೀಸರ ತಂಡವು ಎನ್.ಆರ್ ಮೊಹಲ್ಲಾದಲ್ಲಿರುವ ಆಸಿಫ್ ಅವರಿಗೆ ಸೇರಿದ 2 ಮನೆ, ಸರಸ್ವತಿಪುರಂನಲ್ಲಿರುವ ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಅವರ ಆಸ್ತಿ ಕಂಡು ಅಚ್ಚರಿಗೆ ಒಳಗಾದರು. </p><p>ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮೈಸೂರಿನ ವಿಜಯನಗರ, ಎನ್.ಆರ್ ಮೊಹಲ್ಲಾ, ಮಂಡಿ ಮೊಹಲ್ಲಾ, ಪಿರಿಯಾಪಟ್ಟಣ, ಬನ್ನಿಮಂಟಪದಲ್ಲಿ ಅವರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ನಿವೇಶನ ಹಾಗೂ ಮನೆಗಳಿವೆ. ಅವರಿಗೆ ₹ 49 ಲಕ್ಷ ಮೌಲ್ಯದ 38 ಗುಂಟೆ ಕೃಷಿ ಜಮೀನು ಕೂಡ ಇರುವುದನ್ನು ಪತ್ತೆ ಹಚ್ಚಲಾಗಿದೆ.</p><p>₹ 6.13 ಕೋಟಿ ಸ್ಥಿರಾಸ್ತಿ ಹಾಗೂ ₹ 3 ಕೋಟಿ ಚರಾಸ್ತಿಯನ್ನು ಅವರು ಹೊಂದಿದ್ದಾರೆ. </p><p>‘₹ 2.78 ಕೋಟಿ ಮೌಲ್ಯದ ಚಿನ್ನಾಭರಣ, ₹ 22.50 ಲಕ್ಷ ಮೌಲ್ಯದ ವಾಹನಗಳೂ ಪತ್ತೆಯಾಗಿವೆ’ ಎಂದು ಉದೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಇ ಆಸಿಫ್ ಇಕ್ಬಾಲ್ ಖಲೀಲ್ ಅವರಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ₹ 1.03 ಕೋಟಿ ಮೌಲ್ಯದ 5 ನಿವೇಶನ ಹಾಗೂ ₹ 4. 28 ಕೋಟಿ ಮೌಲ್ಯದ ಏಳು ಮನೆಗಳನ್ನು ಪತ್ತೆ ಹಚ್ಚಿದ್ದಾರೆ. </p><p>ಲೋಕಾಯುಕ್ತ ಎಸ್ಪಿ ಉದೇಶ್ ಮಾರ್ಗದರ್ಶನದಲ್ಲಿ ಪೊಲೀಸರ ತಂಡವು ಎನ್.ಆರ್ ಮೊಹಲ್ಲಾದಲ್ಲಿರುವ ಆಸಿಫ್ ಅವರಿಗೆ ಸೇರಿದ 2 ಮನೆ, ಸರಸ್ವತಿಪುರಂನಲ್ಲಿರುವ ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಅವರ ಆಸ್ತಿ ಕಂಡು ಅಚ್ಚರಿಗೆ ಒಳಗಾದರು. </p><p>ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮೈಸೂರಿನ ವಿಜಯನಗರ, ಎನ್.ಆರ್ ಮೊಹಲ್ಲಾ, ಮಂಡಿ ಮೊಹಲ್ಲಾ, ಪಿರಿಯಾಪಟ್ಟಣ, ಬನ್ನಿಮಂಟಪದಲ್ಲಿ ಅವರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ನಿವೇಶನ ಹಾಗೂ ಮನೆಗಳಿವೆ. ಅವರಿಗೆ ₹ 49 ಲಕ್ಷ ಮೌಲ್ಯದ 38 ಗುಂಟೆ ಕೃಷಿ ಜಮೀನು ಕೂಡ ಇರುವುದನ್ನು ಪತ್ತೆ ಹಚ್ಚಲಾಗಿದೆ.</p><p>₹ 6.13 ಕೋಟಿ ಸ್ಥಿರಾಸ್ತಿ ಹಾಗೂ ₹ 3 ಕೋಟಿ ಚರಾಸ್ತಿಯನ್ನು ಅವರು ಹೊಂದಿದ್ದಾರೆ. </p><p>‘₹ 2.78 ಕೋಟಿ ಮೌಲ್ಯದ ಚಿನ್ನಾಭರಣ, ₹ 22.50 ಲಕ್ಷ ಮೌಲ್ಯದ ವಾಹನಗಳೂ ಪತ್ತೆಯಾಗಿವೆ’ ಎಂದು ಉದೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>