ಏ.13ರಿಂದ 17ರವರೆಗೆ ನಡೆದ ಪ್ರಕ್ರಿಯೆ ಮತದಾರರ ಮನೆಗಳಿಗೆ ತೆರಳಿ ಮತದಾನ ಮಾಡಿಸಿದ ಸಿಬ್ಬಂದಿ ಹಕ್ಕು ಚಲಾಯಿಸಿದ 889 ಅಂಗವಿಕಲರು
ಅಂಚೆ ಮತದಾನ ಆರಂಭ
ಲೋಕಸಭಾ ಚುನಾವಣೆಯಲ್ಲಿ ‘ಅಗತ್ಯ ಸೇವೆ ವರ್ಗದಡಿ ಬರುವ ಗೈರು ಹಾಜರಿ ಮತದಾರ’ರಿಗೆ (ಎವಿಇಎಸ್) ಇಲ್ಲಿನ ಸಿದ್ಧಾರ್ಥನಗರದ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಅಂಚೆ ಮತದಾನ ಕೇಂದ್ರ(ಪಿವಿಸಿ)ದಲ್ಲಿ ಮತದಾನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಏ.21ರವರೆಗೆ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ತೆರೆದಿರಲಿದೆ. ಅಗತ್ಯ ಸೇವೆ ವರ್ಗದಡಿ ಬರುವ ಗೈರುಹಾಜರಿ ಮತದಾರರು ಇಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.