ಇಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಈತನ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ತಮ್ಮ ‘ಬಾಂಬೆ ಡೇಸ್’ ಪುಸ್ತಕದಲ್ಲಿ ಈತನ ಬಗ್ಗೆ ಬರೆದಿದ್ದೇನೆ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೇಳಿದ್ದಾರೆ. ಈತನ ಪಾತ್ರ ಏನು, ಈತನನ್ನು ಬಳಸಿಕೊಂಡು ಯಾರಾರ ಸಿಡಿ ಮಾಡಿದ್ದಾರೆ. ಇವೆಲ್ಲವೂ ತನಿಖೆಯಿಂದ ಹೊರಬರಬೇಕು’ ಎಂದು ಒತ್ತಾಯಿಸಿದರು.