<p><strong>ಮೈಸೂರು: </strong>‘ಹೊರ ರಾಜ್ಯದವರ ಪ್ರವೇಶಕ್ಕೆ ತಾತ್ಕಾಲಿಕ ದಿಗ್ಬಂಧನ ವಿಧಿಸಬೇಕು’ ಎಂದು ಸಂಸದ ಪ್ರತಾಪಸಿಂಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ನೆರೆಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್–19 ರೋಗ ಪೀಡಿತರು, ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ರಾಜ್ಯದೊಂದಿಗೆ ಮೈಸೂರು, ಕೊಡಗು ಜಿಲ್ಲೆಗಳು ಗಡಿ ಹಂಚಿಕೊಂಡಿದ್ದು, ಕೇರಳದವರು ರಾಜ್ಯ ಪ್ರವೇಶಿಸದಂತೆ ನಿಷೇಧ ಹೇರಬೇಕು’ ಎಂದು ಕೋರಿದರು.</p>.<p>‘ಕೆಲವೊಂದು ಸಣ್ಣ ಉದ್ಯಮಗಳು ಇಂದಿಗೂ ಕಾರ್ಯಾಚರಿಸುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಜತೆ ಚರ್ಚಿಸಿ, ಜಿಲ್ಲಾಡಳಿತದಿಂದ ಕಾರ್ಯಾಚರಿಸದಂತೆ ಕಟ್ಟೆಚ್ಚರದ ಸುತ್ತೋಲೆ ಹೊರಡಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಾಪಸಿಂಹ ಉತ್ತರಿಸಿದರು.</p>.<p>‘ಕೊಡಗಿನಲ್ಲಿ ಕೋವಿಡ್–19 ಸೋಂಕಿತ ವ್ಯಕ್ತಿ ಪತ್ತೆಯಾಗಿದ್ದಾರೆ. ಜಿಲ್ಲಾಡಳಿತ ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಈ ಹಂತದಲ್ಲಿ ಸ್ಥಳೀಯರ ಸಹಕಾರವೂ ಮುಖ್ಯವಾದುದು’ ಎಂದು ಹೇಳಿದರು.</p>.<p>‘ದೇಶದ ಜನರ ಆರೋಗ್ಯ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದಾರೆ. ದೇಶವೇ ಸ್ಪಂದಿಸುತ್ತಿದೆ. ಅದೇ ರೀತಿ ಮೈಸೂರಿಗರು ಸ್ಪಂದಿಸಬೇಕಿದೆ. ಹಿರಿಯರು ಎಚ್ಚರಿಕೆಯಿಂದಿರಬೇಕು’ ಎಂದು ಸಂಸದರು ಇದೇ ಸಂದರ್ಭ ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಹೊರ ರಾಜ್ಯದವರ ಪ್ರವೇಶಕ್ಕೆ ತಾತ್ಕಾಲಿಕ ದಿಗ್ಬಂಧನ ವಿಧಿಸಬೇಕು’ ಎಂದು ಸಂಸದ ಪ್ರತಾಪಸಿಂಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ನೆರೆಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್–19 ರೋಗ ಪೀಡಿತರು, ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ರಾಜ್ಯದೊಂದಿಗೆ ಮೈಸೂರು, ಕೊಡಗು ಜಿಲ್ಲೆಗಳು ಗಡಿ ಹಂಚಿಕೊಂಡಿದ್ದು, ಕೇರಳದವರು ರಾಜ್ಯ ಪ್ರವೇಶಿಸದಂತೆ ನಿಷೇಧ ಹೇರಬೇಕು’ ಎಂದು ಕೋರಿದರು.</p>.<p>‘ಕೆಲವೊಂದು ಸಣ್ಣ ಉದ್ಯಮಗಳು ಇಂದಿಗೂ ಕಾರ್ಯಾಚರಿಸುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಜತೆ ಚರ್ಚಿಸಿ, ಜಿಲ್ಲಾಡಳಿತದಿಂದ ಕಾರ್ಯಾಚರಿಸದಂತೆ ಕಟ್ಟೆಚ್ಚರದ ಸುತ್ತೋಲೆ ಹೊರಡಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಾಪಸಿಂಹ ಉತ್ತರಿಸಿದರು.</p>.<p>‘ಕೊಡಗಿನಲ್ಲಿ ಕೋವಿಡ್–19 ಸೋಂಕಿತ ವ್ಯಕ್ತಿ ಪತ್ತೆಯಾಗಿದ್ದಾರೆ. ಜಿಲ್ಲಾಡಳಿತ ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಈ ಹಂತದಲ್ಲಿ ಸ್ಥಳೀಯರ ಸಹಕಾರವೂ ಮುಖ್ಯವಾದುದು’ ಎಂದು ಹೇಳಿದರು.</p>.<p>‘ದೇಶದ ಜನರ ಆರೋಗ್ಯ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದಾರೆ. ದೇಶವೇ ಸ್ಪಂದಿಸುತ್ತಿದೆ. ಅದೇ ರೀತಿ ಮೈಸೂರಿಗರು ಸ್ಪಂದಿಸಬೇಕಿದೆ. ಹಿರಿಯರು ಎಚ್ಚರಿಕೆಯಿಂದಿರಬೇಕು’ ಎಂದು ಸಂಸದರು ಇದೇ ಸಂದರ್ಭ ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>