<p><strong>ಹಂಪಾಪುರ</strong>: ಜೂನ್ 1 ರಂದು ಮಾದಾಪುರದ ಚಂದ್ರಮೌಳೇಶ್ವರ ಮಠದ ಶಾಲಾ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.</p>.<p>‘ಚಂದ್ರಮೌಳೇಶ್ವರ ಸ್ವಾಮೀಜಿ ಅವರ ಜಯಂತಿ ಪ್ರಯುಕ್ತ ಮೈಸೂರಿನ ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯ ಸಹಯೋಗದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯ ತಜ್ಞ ವೈದ್ಯರು ನಡೆಸುವ ಈ ಶಿಬಿರದಲ್ಲಿ ಉಸಿರಾಟದ ಕಾಯಿಲೆಗಳು, ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳು, ಬೆನ್ನುನೋವು, ಮಂಡಿನೋವು, ಚರ್ಮ ರೋಗಗಳು, ಥೈರಾಯಿಡ್ ತೊಂದರೆಗಳು, ಗ್ಯಾಸ್ಟ್ರಿಕ್ಸಮಸ್ಯೆ ಸೇರಿದಂತೆ ಇನ್ನು ಮುಂತಾದ ಹಲವು ಸಮಸ್ಯೆಗಳಿಗೆ ಉಚಿತ ತಪಾಸಣೆ ಮತ್ತು ಸಲಹೆ ನೀಡಲಾಗುವುದು’ ಎಂದರು.</p>.<p>‘ಇದೇ ದಿನ ಚಂದ್ರಮೌಳೇಶ್ವರ ಸ್ವಾಮೀಜಿ ಜನ್ಮದಿನದ ನೆನಪಿಗಾಗಿ ಬೆಟ್ಟದ ಮೆಟ್ಟಿಲುಗಳ ಬದಿಗಳಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-38-2106788438</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಾಪುರ</strong>: ಜೂನ್ 1 ರಂದು ಮಾದಾಪುರದ ಚಂದ್ರಮೌಳೇಶ್ವರ ಮಠದ ಶಾಲಾ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.</p>.<p>‘ಚಂದ್ರಮೌಳೇಶ್ವರ ಸ್ವಾಮೀಜಿ ಅವರ ಜಯಂತಿ ಪ್ರಯುಕ್ತ ಮೈಸೂರಿನ ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯ ಸಹಯೋಗದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯ ತಜ್ಞ ವೈದ್ಯರು ನಡೆಸುವ ಈ ಶಿಬಿರದಲ್ಲಿ ಉಸಿರಾಟದ ಕಾಯಿಲೆಗಳು, ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳು, ಬೆನ್ನುನೋವು, ಮಂಡಿನೋವು, ಚರ್ಮ ರೋಗಗಳು, ಥೈರಾಯಿಡ್ ತೊಂದರೆಗಳು, ಗ್ಯಾಸ್ಟ್ರಿಕ್ಸಮಸ್ಯೆ ಸೇರಿದಂತೆ ಇನ್ನು ಮುಂತಾದ ಹಲವು ಸಮಸ್ಯೆಗಳಿಗೆ ಉಚಿತ ತಪಾಸಣೆ ಮತ್ತು ಸಲಹೆ ನೀಡಲಾಗುವುದು’ ಎಂದರು.</p>.<p>‘ಇದೇ ದಿನ ಚಂದ್ರಮೌಳೇಶ್ವರ ಸ್ವಾಮೀಜಿ ಜನ್ಮದಿನದ ನೆನಪಿಗಾಗಿ ಬೆಟ್ಟದ ಮೆಟ್ಟಿಲುಗಳ ಬದಿಗಳಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-38-2106788438</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>