<p><strong>ಮೈಸೂರು</strong>: ‘ರೈತರ ಪಂಪ್ಸೆಟ್ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಲು ಮುಂದಾದರೆ ಅದನ್ನು ಕಿತ್ತೊಗೆಯುವ ಆಂದೋಲನವನ್ನು ಕಾಂಗ್ರೆಸ್ ಆರಂಭಿಸಲಿದೆ’ ಎಂದು ಕೆಪಿಸಿಸಿ ಹಿಂದುವಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.</p>.<p>‘ರೈತರಿಗೆ ದೊರೆಯುತ್ತಿದ್ದ ಸಬ್ಸಿಡಿಗಳನ್ನು ತೆಗೆಯಲಾಗಿದೆ. ರಸಗೊಬ್ಬರ, ಪರಿಕರಗಳ ಬೆಲೆ ಹೆಚ್ಚಾಗಿದೆ. ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸಂಕಷ್ಟಕ್ಕೆ ಸಿಲುಕಿರುವಾಗ ಮೀಟರ್ ಅಳವಡಿಕೆಗೆ ಮುಂದಾಗಿರುವುದು ರೈತರನ್ನು ನೆಲಕಚ್ಚಿಸುವ ಪ್ರಹಾರ’ ಎಂದು ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಮಿಷನ್ ಲಾಭವನ್ನಷ್ಟೇ ನೋಡುತ್ತಿರುವ ಬಿಜೆಪಿಗೆ ಜನರ ಸಂಕಷ್ಟ ಅರ್ಥವಾಗುತ್ತಿಲ್ಲ. ಮೊಸರಿಂದ ಹಿಡಿದು ಹೆಣ ಸುಡುವವರೆಗೂ ತೆರಿಗೆ ಹೊರೆ ಹಾಕಲಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಉದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ಈಸ್ಟ್ ಇಂಡಿಯಾ ಕಂಪನಿಯಂತೆ ಜನರನ್ನು ಶೋಷಿಸುತ್ತಿದೆ. ಇದಕ್ಕಾಗಿ ಸ್ವಾತಂತ್ರ್ಯ ಹೋರಾಟ ಮತ್ತೆ ಆರಂಭಿಸಬೇಕಿದೆ’ ಎಂದರು.</p>.<p>‘ಸರ್ಕಾರದ ಮೇಲೆ ಜನರಿಗಿರುವ ಸಿಟ್ಟನ್ನು ವಿಷಯಾಂತರಿಸುವುದಕ್ಕಾಗಿಯೇ ಪಿಎಫ್ಐ, ಎಸ್ಡಿಪಿಐ ಮೇಲೆ ಎನ್ಐಎ ಮೂಲಕ ಬಿಜೆಪಿ ದಾಳಿ ನಡೆಸುತ್ತಿದೆ. ಕಾಂಗ್ರೆಸ್ ದುರುದ್ದೇಶದ ದಾಳಿಗೆ ಹೆದರುವುದಿಲ್ಲ. ಬಿಜೆಪಿಯ ಭ್ರಷ್ಟಾಚಾರ, ಸುಳ್ಳುಗಳನ್ನು ಬಯಲಿಗೆಳೆಯುವುದನ್ನು ಮುಂದುವರಿಸುತ್ತೇವೆ’ ಎಂದು ತಿಳಿಸಿದರು.</p>.<p><strong>ಜಿಲ್ಲಾವಾರು ಪ್ರಣಾಳಿಕೆ ರಚನೆ:</strong> ‘ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನೆಯ ಉಪಾಧ್ಯಕ್ಷನಾಗಿದ್ದು, ಜಿಲ್ಲಾ ಮಟ್ಟದಲ್ಲೂ ಚಿಂತನ– ಮಂಥನ ನಡೆಸಿ ಜಿಲ್ಲಾವಾರು ಪ್ರಣಾಳಿಕೆ ತಯಾರಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ರೈತರ ಪಂಪ್ಸೆಟ್ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಲು ಮುಂದಾದರೆ ಅದನ್ನು ಕಿತ್ತೊಗೆಯುವ ಆಂದೋಲನವನ್ನು ಕಾಂಗ್ರೆಸ್ ಆರಂಭಿಸಲಿದೆ’ ಎಂದು ಕೆಪಿಸಿಸಿ ಹಿಂದುವಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.</p>.<p>‘ರೈತರಿಗೆ ದೊರೆಯುತ್ತಿದ್ದ ಸಬ್ಸಿಡಿಗಳನ್ನು ತೆಗೆಯಲಾಗಿದೆ. ರಸಗೊಬ್ಬರ, ಪರಿಕರಗಳ ಬೆಲೆ ಹೆಚ್ಚಾಗಿದೆ. ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸಂಕಷ್ಟಕ್ಕೆ ಸಿಲುಕಿರುವಾಗ ಮೀಟರ್ ಅಳವಡಿಕೆಗೆ ಮುಂದಾಗಿರುವುದು ರೈತರನ್ನು ನೆಲಕಚ್ಚಿಸುವ ಪ್ರಹಾರ’ ಎಂದು ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಮಿಷನ್ ಲಾಭವನ್ನಷ್ಟೇ ನೋಡುತ್ತಿರುವ ಬಿಜೆಪಿಗೆ ಜನರ ಸಂಕಷ್ಟ ಅರ್ಥವಾಗುತ್ತಿಲ್ಲ. ಮೊಸರಿಂದ ಹಿಡಿದು ಹೆಣ ಸುಡುವವರೆಗೂ ತೆರಿಗೆ ಹೊರೆ ಹಾಕಲಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಉದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ಈಸ್ಟ್ ಇಂಡಿಯಾ ಕಂಪನಿಯಂತೆ ಜನರನ್ನು ಶೋಷಿಸುತ್ತಿದೆ. ಇದಕ್ಕಾಗಿ ಸ್ವಾತಂತ್ರ್ಯ ಹೋರಾಟ ಮತ್ತೆ ಆರಂಭಿಸಬೇಕಿದೆ’ ಎಂದರು.</p>.<p>‘ಸರ್ಕಾರದ ಮೇಲೆ ಜನರಿಗಿರುವ ಸಿಟ್ಟನ್ನು ವಿಷಯಾಂತರಿಸುವುದಕ್ಕಾಗಿಯೇ ಪಿಎಫ್ಐ, ಎಸ್ಡಿಪಿಐ ಮೇಲೆ ಎನ್ಐಎ ಮೂಲಕ ಬಿಜೆಪಿ ದಾಳಿ ನಡೆಸುತ್ತಿದೆ. ಕಾಂಗ್ರೆಸ್ ದುರುದ್ದೇಶದ ದಾಳಿಗೆ ಹೆದರುವುದಿಲ್ಲ. ಬಿಜೆಪಿಯ ಭ್ರಷ್ಟಾಚಾರ, ಸುಳ್ಳುಗಳನ್ನು ಬಯಲಿಗೆಳೆಯುವುದನ್ನು ಮುಂದುವರಿಸುತ್ತೇವೆ’ ಎಂದು ತಿಳಿಸಿದರು.</p>.<p><strong>ಜಿಲ್ಲಾವಾರು ಪ್ರಣಾಳಿಕೆ ರಚನೆ:</strong> ‘ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನೆಯ ಉಪಾಧ್ಯಕ್ಷನಾಗಿದ್ದು, ಜಿಲ್ಲಾ ಮಟ್ಟದಲ್ಲೂ ಚಿಂತನ– ಮಂಥನ ನಡೆಸಿ ಜಿಲ್ಲಾವಾರು ಪ್ರಣಾಳಿಕೆ ತಯಾರಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>