<p><strong>ಮೈಸೂರು:</strong> ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದ ವಿವಿಧ ಸಂಘಟನೆಗಳು ಶುಕ್ರವಾರ ಸರಣಿ ಪ್ರತಿಭಟನೆ ನಡೆಸಿದವು.</p>.<p>ನಗರದ ಪುರಭವನದಲ್ಲಿ ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ‘ಮಾದಿಗ ಸಂಘಟನೆಗಳ ಒಕ್ಕೂಟ’ದ ಸದಸ್ಯರು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. </p>.<p>‘35 ವರ್ಷದಿಂದ ಒಳ ಮೀಸಲಾತಿಗೆ ಆಗ್ರಹಿಸಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿ ವರ್ಷವಾದರೂ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಮೀನ–ಮೇಷ ಎಣಿಸುತ್ತಿದೆ’ ಎಂದು ಮುಖಂಡ ಪ್ರಸನ್ನ ಚಕ್ರವರ್ತಿ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ನೆರೆಯ ರಾಜ್ಯಗಳಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ಆದರೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾರ ಒತ್ತಡಕ್ಕೆ ಸಿಲುಕಿದೆಯೋ ಗೊತ್ತಿಲ್ಲ. ಜಾರಿಗೊಂಡರೆ 101 ಉಪ ಜಾತಿಗಳಿಗೆ ಅನುಕೂಲವಾಗಲಿದೆ’ ಎಂದರು. </p>.<p>‘ಆ.4ರಂದು ನಾಗಮೋಹನ್ ದಾಸ್ ವರದಿ ಸ್ವೀಕರಿಸಿ, ಒಳಮೀಸಲಾತಿ ಜಾರಿ ಮಾಡದಿದ್ದರೆ ಆಗಸ್ಟ್ 15ರಂದು ಬೃಹತ್ ಹೋರಾಟ ನಡೆಸಲಿದ್ದೇವೆ’ ಎಂದು ಎಚ್ಚರಿಸಿದರು. </p>.<p>ಭಾಸ್ಕರ್ ಪ್ರಸಾದ್ ಮಾತನಾಡಿ, ‘ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶವಯಾತ್ರೆ ನಡೆಸಲು ಅನುಮತಿಸಲಾಗಿದೆ. ಮೈಸೂರಿನಲ್ಲಿ ಅಧಿಕಾರಿಗಳು ಅನುಮತಿ ಕೊಟ್ಟಿಲ್ಲ. ಈ ಸರ್ಕಾರ ಸತ್ತು ಹೋಗಿದೆ’ ಎಂದು ದೂರಿದರು. </p>.<p>ಪ್ರತಿಭಟನೆಯಲ್ಲಿ ಅರುಣ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><strong>‘ಸಾಮಾಜಿಕ ನ್ಯಾಯ ನೀಡಿ’:</strong> ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ‘ಒಳ ಮೀಸಲಾತಿ ಇಲ್ಲದ್ದರಿಂದ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಂಕ್ಷಿಗಳಿಗೆ ಅನ್ಯಾಯವಾಗಿದೆ. ಸಾಮಾಜಿಕ ನ್ಯಾಯ ಕೊಡಿ’ ಎಂದು ಆಗ್ರಹಿಸಿದವು. </p>.<p>ಪ್ರತಿಭಟನೆಯಲ್ಲಿ ಬಸವರಾಜು, ಡಾ.ಆನಂದಕುಮಾರ್, ಎಂ.ಮಹದೇವು, ರಾಜಣ್ಣ, ವೆಂಕಟರಮಣ, ಜಯಸಿಂಹ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><strong>ಸಫಾಯಿ ಕರ್ಮಚಾರಿ ಒಕ್ಕೂಟ ಆಕ್ರೋಶ</strong></p><p> ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಫಾಯಿ ಕರ್ಮಚಾರಿ ಒಕ್ಕೂಟದ ಸದಸ್ಯರು ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ‘ಒಳಪಂಗಡಗಳ ಸಮೀಕ್ಷೆ ವರದಿ ಸಲ್ಲಿಕೆಯಾಗಲಿದ್ದು ಅದನ್ನು ಇರಿಸಿಕೊಂಡು ಸರ್ಕಾರ ಕಾಲಹರಣ ಮಾಡಬಾರದು’ ಎಂದು ಮುಖಂಡ ವೆಂಕಟೇಶ್ ಒತ್ತಾಯಿಸಿದರು. ಮುಖಂಡರಾದ ಧರ್ಮರಾಜು ಬಿ.ಎಸ್.ಸುಬ್ರಹ್ಮಣ್ಯ ಗಂಗಯ್ಯ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದ ವಿವಿಧ ಸಂಘಟನೆಗಳು ಶುಕ್ರವಾರ ಸರಣಿ ಪ್ರತಿಭಟನೆ ನಡೆಸಿದವು.</p>.<p>ನಗರದ ಪುರಭವನದಲ್ಲಿ ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ‘ಮಾದಿಗ ಸಂಘಟನೆಗಳ ಒಕ್ಕೂಟ’ದ ಸದಸ್ಯರು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. </p>.<p>‘35 ವರ್ಷದಿಂದ ಒಳ ಮೀಸಲಾತಿಗೆ ಆಗ್ರಹಿಸಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿ ವರ್ಷವಾದರೂ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಮೀನ–ಮೇಷ ಎಣಿಸುತ್ತಿದೆ’ ಎಂದು ಮುಖಂಡ ಪ್ರಸನ್ನ ಚಕ್ರವರ್ತಿ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ನೆರೆಯ ರಾಜ್ಯಗಳಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ಆದರೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾರ ಒತ್ತಡಕ್ಕೆ ಸಿಲುಕಿದೆಯೋ ಗೊತ್ತಿಲ್ಲ. ಜಾರಿಗೊಂಡರೆ 101 ಉಪ ಜಾತಿಗಳಿಗೆ ಅನುಕೂಲವಾಗಲಿದೆ’ ಎಂದರು. </p>.<p>‘ಆ.4ರಂದು ನಾಗಮೋಹನ್ ದಾಸ್ ವರದಿ ಸ್ವೀಕರಿಸಿ, ಒಳಮೀಸಲಾತಿ ಜಾರಿ ಮಾಡದಿದ್ದರೆ ಆಗಸ್ಟ್ 15ರಂದು ಬೃಹತ್ ಹೋರಾಟ ನಡೆಸಲಿದ್ದೇವೆ’ ಎಂದು ಎಚ್ಚರಿಸಿದರು. </p>.<p>ಭಾಸ್ಕರ್ ಪ್ರಸಾದ್ ಮಾತನಾಡಿ, ‘ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶವಯಾತ್ರೆ ನಡೆಸಲು ಅನುಮತಿಸಲಾಗಿದೆ. ಮೈಸೂರಿನಲ್ಲಿ ಅಧಿಕಾರಿಗಳು ಅನುಮತಿ ಕೊಟ್ಟಿಲ್ಲ. ಈ ಸರ್ಕಾರ ಸತ್ತು ಹೋಗಿದೆ’ ಎಂದು ದೂರಿದರು. </p>.<p>ಪ್ರತಿಭಟನೆಯಲ್ಲಿ ಅರುಣ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><strong>‘ಸಾಮಾಜಿಕ ನ್ಯಾಯ ನೀಡಿ’:</strong> ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ‘ಒಳ ಮೀಸಲಾತಿ ಇಲ್ಲದ್ದರಿಂದ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಂಕ್ಷಿಗಳಿಗೆ ಅನ್ಯಾಯವಾಗಿದೆ. ಸಾಮಾಜಿಕ ನ್ಯಾಯ ಕೊಡಿ’ ಎಂದು ಆಗ್ರಹಿಸಿದವು. </p>.<p>ಪ್ರತಿಭಟನೆಯಲ್ಲಿ ಬಸವರಾಜು, ಡಾ.ಆನಂದಕುಮಾರ್, ಎಂ.ಮಹದೇವು, ರಾಜಣ್ಣ, ವೆಂಕಟರಮಣ, ಜಯಸಿಂಹ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><strong>ಸಫಾಯಿ ಕರ್ಮಚಾರಿ ಒಕ್ಕೂಟ ಆಕ್ರೋಶ</strong></p><p> ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಫಾಯಿ ಕರ್ಮಚಾರಿ ಒಕ್ಕೂಟದ ಸದಸ್ಯರು ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ‘ಒಳಪಂಗಡಗಳ ಸಮೀಕ್ಷೆ ವರದಿ ಸಲ್ಲಿಕೆಯಾಗಲಿದ್ದು ಅದನ್ನು ಇರಿಸಿಕೊಂಡು ಸರ್ಕಾರ ಕಾಲಹರಣ ಮಾಡಬಾರದು’ ಎಂದು ಮುಖಂಡ ವೆಂಕಟೇಶ್ ಒತ್ತಾಯಿಸಿದರು. ಮುಖಂಡರಾದ ಧರ್ಮರಾಜು ಬಿ.ಎಸ್.ಸುಬ್ರಹ್ಮಣ್ಯ ಗಂಗಯ್ಯ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>