‘ಭಾರತವನ್ನು ಮೊಘಲರು, ಬ್ರಿಟಿಷರು ಆಳಿದ್ದಾರೆ. ಮೌರ್ಯರು, ಡಚ್ಚರು, ಫ್ರೆಂಚರು ಮತ್ತು ಪೋರ್ಚುಗೀಸರೂ ಆಳಿದ್ದರೂ ದೇಶವು ಯಾವುದೋ ಒಂದು ಧರ್ಮದ ದೇಶವಾಗಿ ಪರಿವರ್ತನೆಯಾಗಿಲ್ಲ. ವೈವಿಧ್ಯತೆಗಳಿಂದಾಗಿ ಭಾರತವಾಗಿಯೇ ಉಳಿದಿದೆ. ಹೀಗಿದ್ದರೂ ಅಭಿವೃದ್ಧಿಯ ವಿಷಯಗಳನ್ನು ಮರೆ ಮಾಚಲು ಮತ್ತು ಚುನಾವಣಾ ಕಾಲದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಸಲುವಾಗಿ ಕೋಮು ರಾಜಕೀಯ ಮಾಡುತ್ತಿರುವ ಸಂಸದರು ಮತ್ತು ಶಾಸಕರು ಕೂಡಲೇ ತಮ್ಮ ಬೇಜವಾಬ್ದಾರಿ ನಡವಳಿಕೆಯನ್ನು ನಿಲ್ಲಿಸಬೇಕು. ಜನರ ತೆರಿಗೆ ಹಣವನ್ನು ಪೋಲು ಮಾಡಬಾರದು’ ಎಂದು ಆಗ್ರಹಿಸಿದ್ದಾರೆ.