<p><strong>ಮೈಸೂರು</strong>: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ‘ಮಹಾರಾಜ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿ’ಯನ್ನು ನಗರದ ‘ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣ’ದಲ್ಲಿ ಆಯೋಜಿಸಿದ್ದು, ಆ.11ರಿಂದ 28ರವರೆಗೆ ನಡೆಯಲಿದೆ. </p><p>ಕಳೆದ ಬಾರಿಯ ಚಾಂಪಿಯನ್ಸ್ ಆತಿಥೇಯ ಮೈಸೂರು ವಾರಿಯರ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಂಗಳೂರು ಡ್ರಾಗನ್ಸ್ ವಿರುದ್ಧ ಗುಲ್ಬರ್ಗಾ ಮಿಸ್ಟಿಕ್ಸ್ ನಡುವೆ ಉದ್ಘಾಟನಾ ದಿನದ ಪಂದ್ಯಗಳು ನಡೆಯಲಿದೆ.</p><p>2022ರಲ್ಲಿ ಮೊದಲ ಹಂತದ 14 ಪಂದ್ಯಗಳು ಇಲ್ಲಿಯೇ ನಡೆದಿದ್ದವು. ಮೂರು ವರ್ಷಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸಾಂಸ್ಕೃತಿಕ ನಗರಿಗೆ ಟೂರ್ನಿ ಸ್ಥಳಾಂತರಗೊಂಡಿದೆ. 30 ಲೀಗ್, ಕ್ವಾಲಿಫೈಯರ್-1, ಎಲಿಮಿನೇಟರ್, ಕ್ವಾಲಿಫೈಯರ್-2, ಫೈನಲ್ ಸೇರಿದಂತೆ ಒಟ್ಟು 34 ಪಂದ್ಯಗಳು ನಡೆಯಲಿವೆ. </p>.<p>ಪ್ರಸಿದ್ಧ ಕೃಷ್ಣ, ಕರುಣ್ ನಾಯರ್, ಮಯಾಂಕ್ ಅಗರವಾಲ್, ದೇವದತ್ತ ಪಡಿಕ್ಕಲ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಮನೀಷ್ ಪಾಂಡೆ ಸೇರಿ ತಾರಾ ಕ್ರಿಕೆಟಿಗರು ಆಡುತ್ತಿದ್ದಾರೆ. </p>.<p>‘ಟೂರ್ನಿ ಆಯೋಜನೆಗೆ ಪೊಲೀಸ್ ಇಲಾಖೆಯ ಅನುಮತಿಯನ್ನು ಆ.7ರಂದು ಕೆಎಸ್ಸಿಎ ಪಡೆದಿದೆ. ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಆಟಗಾರರು, ಕೆಎಸ್ಸಿಎ ಮತ್ತು ತಂಡಗಳ ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಮಾತ್ರ ಪ್ರವೇಶಾವಕಾಶವಿದೆ’ ಎಂದು ಸಂಸ್ಥೆಯ ವಲಯ ಸಂಚಾಲಕ ಹರಿಕೃಷ್ಣ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಭದ್ರತೆಯನ್ನು ನೀಡುವಂತೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿತ್ತು. ಗುರುವಾರವಷ್ಟೇ ಅನುಮತಿ ಸಿಕ್ಕಿದೆ. ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದರು. </p>.<p>ಸಿದ್ಧತೆ: ಕ್ರೀಡಾಂಗಣದ ಸುತ್ತಲೂ ಬ್ಯಾರಿಕೇಡ್ ಹಾಗೂ ಕಬ್ಬಿಣದ ಶೀಟ್ಗಳಿಂದ ತಡೆಗೋಡೆ ನಿರ್ಮಿಸಲಾಗುತ್ತಿದೆ. ಗುರುವಾರ 4 ಪಿಚ್ಗಳು ಹಾಗೂ ಹುಲ್ಲುಹಾಸನ್ನು ಹದಗೊಳಿಸುವ ಕಾರ್ಯದಲ್ಲಿ ಸಿಬ್ಬಂದಿ ಮಗ್ನರಾಗಿದ್ದರು. </p>.<p>‘ನಿತ್ಯ ಎರಡು ಪಂದ್ಯಗಳು (ಮಧ್ಯಾಹ್ನ 3.15 ಮತ್ತು ಸಂಜೆ 7.15ಕ್ಕೆ) ನಡೆಯಲಿವೆ. ಮೈಸೂರು ವಾರಿಯರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್, ಮಂಗಳೂರು ಡ್ರ್ಯಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಭಾಗಿಯಾಗಲಿವೆ’ ಎಂದು ಹರಿಕೃಷ್ಣ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ‘ಮಹಾರಾಜ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿ’ಯನ್ನು ನಗರದ ‘ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣ’ದಲ್ಲಿ ಆಯೋಜಿಸಿದ್ದು, ಆ.11ರಿಂದ 28ರವರೆಗೆ ನಡೆಯಲಿದೆ. </p><p>ಕಳೆದ ಬಾರಿಯ ಚಾಂಪಿಯನ್ಸ್ ಆತಿಥೇಯ ಮೈಸೂರು ವಾರಿಯರ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಂಗಳೂರು ಡ್ರಾಗನ್ಸ್ ವಿರುದ್ಧ ಗುಲ್ಬರ್ಗಾ ಮಿಸ್ಟಿಕ್ಸ್ ನಡುವೆ ಉದ್ಘಾಟನಾ ದಿನದ ಪಂದ್ಯಗಳು ನಡೆಯಲಿದೆ.</p><p>2022ರಲ್ಲಿ ಮೊದಲ ಹಂತದ 14 ಪಂದ್ಯಗಳು ಇಲ್ಲಿಯೇ ನಡೆದಿದ್ದವು. ಮೂರು ವರ್ಷಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸಾಂಸ್ಕೃತಿಕ ನಗರಿಗೆ ಟೂರ್ನಿ ಸ್ಥಳಾಂತರಗೊಂಡಿದೆ. 30 ಲೀಗ್, ಕ್ವಾಲಿಫೈಯರ್-1, ಎಲಿಮಿನೇಟರ್, ಕ್ವಾಲಿಫೈಯರ್-2, ಫೈನಲ್ ಸೇರಿದಂತೆ ಒಟ್ಟು 34 ಪಂದ್ಯಗಳು ನಡೆಯಲಿವೆ. </p>.<p>ಪ್ರಸಿದ್ಧ ಕೃಷ್ಣ, ಕರುಣ್ ನಾಯರ್, ಮಯಾಂಕ್ ಅಗರವಾಲ್, ದೇವದತ್ತ ಪಡಿಕ್ಕಲ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಮನೀಷ್ ಪಾಂಡೆ ಸೇರಿ ತಾರಾ ಕ್ರಿಕೆಟಿಗರು ಆಡುತ್ತಿದ್ದಾರೆ. </p>.<p>‘ಟೂರ್ನಿ ಆಯೋಜನೆಗೆ ಪೊಲೀಸ್ ಇಲಾಖೆಯ ಅನುಮತಿಯನ್ನು ಆ.7ರಂದು ಕೆಎಸ್ಸಿಎ ಪಡೆದಿದೆ. ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಆಟಗಾರರು, ಕೆಎಸ್ಸಿಎ ಮತ್ತು ತಂಡಗಳ ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಮಾತ್ರ ಪ್ರವೇಶಾವಕಾಶವಿದೆ’ ಎಂದು ಸಂಸ್ಥೆಯ ವಲಯ ಸಂಚಾಲಕ ಹರಿಕೃಷ್ಣ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಭದ್ರತೆಯನ್ನು ನೀಡುವಂತೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿತ್ತು. ಗುರುವಾರವಷ್ಟೇ ಅನುಮತಿ ಸಿಕ್ಕಿದೆ. ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದರು. </p>.<p>ಸಿದ್ಧತೆ: ಕ್ರೀಡಾಂಗಣದ ಸುತ್ತಲೂ ಬ್ಯಾರಿಕೇಡ್ ಹಾಗೂ ಕಬ್ಬಿಣದ ಶೀಟ್ಗಳಿಂದ ತಡೆಗೋಡೆ ನಿರ್ಮಿಸಲಾಗುತ್ತಿದೆ. ಗುರುವಾರ 4 ಪಿಚ್ಗಳು ಹಾಗೂ ಹುಲ್ಲುಹಾಸನ್ನು ಹದಗೊಳಿಸುವ ಕಾರ್ಯದಲ್ಲಿ ಸಿಬ್ಬಂದಿ ಮಗ್ನರಾಗಿದ್ದರು. </p>.<p>‘ನಿತ್ಯ ಎರಡು ಪಂದ್ಯಗಳು (ಮಧ್ಯಾಹ್ನ 3.15 ಮತ್ತು ಸಂಜೆ 7.15ಕ್ಕೆ) ನಡೆಯಲಿವೆ. ಮೈಸೂರು ವಾರಿಯರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್, ಮಂಗಳೂರು ಡ್ರ್ಯಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಭಾಗಿಯಾಗಲಿವೆ’ ಎಂದು ಹರಿಕೃಷ್ಣ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>