ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಮಿತಿ ಅಧ್ಯಕ್ಷ ಪುರುಷೋತ್ತಮ್, ‘ಜನಸಾಮಾನ್ಯರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ರಾಷ್ಟ್ರಪತಿಯವರು ಅ. 10ರಂದು ಮೈಸೂರಿಗೆ ಬರಲಿದ್ದು, ಅವರಿಗೆ ಮನವಿ ಸಲ್ಲಿಸಲಾಗುವುದು. ಮಹಿಷ ದಸರೆ ಆಚರಣೆ ಮಾಡಬೇಕು ಎಂಬ ನಮ್ಮ ಒತ್ತಾಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಜಂಬೂಸವಾರಿಯ ದಿನ ಪ್ರತಿಭಟನೆ ನಡೆಸುವುದಿಲ್ಲ’ ಎಂದು ಹೇಳಿದ್ದಾರೆ.