ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಷ ದಸರೆಗೆ ಸರ್ಕಾರದಿಂದಲೇ ಕುಮ್ಮಕ್ಕು: ಶೋಭಾ ಕರಂದ್ಲಾಜೆ

Published 22 ಅಕ್ಟೋಬರ್ 2023, 19:31 IST
Last Updated 22 ಅಕ್ಟೋಬರ್ 2023, 19:31 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯ ಸರ್ಕಾರವು ಟಿಪ್ಪು ಜಯಂತಿ ಮಾದರಿ ಯಲ್ಲಿಯೇ ಮಹಿಷ ದಸರಾ ಆಚರಣೆಗೆ ಕುಮ್ಮಕ್ಕು ನೀಡು ತ್ತಿದೆ’ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಇಲ್ಲಿ ಭಾನುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಟಿಪ್ಪು ಜಯಂತಿ ಆಚರಣೆ ಮೂಲಕ ಧರ್ಮಗಳ ನಡುವೆ ಸಂಘರ್ಷ ತಂದಿಟ್ಟಿತ್ತು. ಈಗ ವಿವಿಧೆಡೆ ಮಹಿಷ ದಸರಾಕ್ಕೆ ಅನುಮತಿ ನೀಡುವ ಮೂಲಕ ಜಾತಿಗಳ ನಡುವೆ ತಂದಿಡುವ ಕೆಲಸ ಮಾಡುತ್ತಿದೆ. ಇದನ್ನು ಆರಂಭದಲ್ಲಿಯೇ ಚಿವುಟಿ ಹಾಕುವುದನ್ನು ಬಿಟ್ಟು ಅನುಮತಿ ಮತ್ತು ಭದ್ರತೆ ನೀಡುತ್ತಿದೆ. ವಿಕೃತ ಮನಸ್ಸುಗಳು ಹುಟ್ಟಲು ಸರ್ಕಾರವೇ ಪ್ರಚೋದನೆ ನೀಡುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT